28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಅನ್ನಬ್ರಹ್ಮ ಸೇವಾ ಸಮಿತಿ ಉಡುಪಿಯಿಂದ ಬಡ ಹೆಣ್ಣುಮಗಳ ಮದುವೆಗೆ ಸೀರೆಗಳ ನೆರವು ;

ವರದಿ /ಚಿತ್ರ :ವಿನೋದ್ ಶೆಟ್ಟಿ ಉಡುಪಿ

ಉಡುಪಿ : ಮಾನವೀಯ ಸೇವೆಯ ಮೂಲಕ ಗುರುತಿಸಿಕೊಂಡಿರುವ ಅನ್ನಬ್ರಹ್ಮ ಸೇವಾ ಸಮಿತಿ, ಉಡುಪಿ ಇದರ ವತಿಯಿಂದ ಬ್ರಹ್ಮಾವರ ಶಿರೂರಿನ ಬಡ ಬಂಟ ಸಮುದಾಯದ ಹೆಣ್ಣು ಮಗಳ ಮದುವೆಗೆ ನೆರವಾಗುವ ಕಾರ್ಯ ನಡೆಯಿತು.

ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಲತಾ ಶೆಟ್ಟಿ ಅವರ ನೇತೃತ್ವದಲ್ಲಿ ಇಂದು ಆ ಕುಟುಂಬದ ಮನೆಗೆ ಭೇಟಿ ನೀಡಿ, ಮದುವೆಗೆ ಅವಶ್ಯಕವಾದ ದಾರೆ ಸೀರೆ, ಮೂರ್ತ ಸೀರೆ ಸೇರಿದಂತೆ ಒಟ್ಟು ಐದು ಸೀರೆಗಳನ್ನು ನೀಡಿ ಮಾನವೀಯತೆ ಮೆರೆದರು.

ಈ ಪುಣ್ಯ ಕಾರ್ಯದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ *ಶ್ರೀಮತಿ ವಿಶಾಲಾಕ್ಷಿ ಶೆಟ್ಟಿ, ಗೌರವಾಧ್ಯಕ್ಷರಾದ ಶ್ರೀ ವಿನೋದ್ ಶೆಟ್ಟಿ, ಗೌರವಾಧ್ಯಕ್ಷರಾದ ಶ್ರೀಮತಿ ಅನುಪಮಾ ಜಯಕುಮಾರ್, ಹಿತೈಷಿಗಳಾದ ಶ್ರೀಮತಿ ಜಯಶ್ರೀ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಅರ್ಚನಾ ದೇವಾಡಿಗ, ಕೋಶಾಧಿಕಾರಿ ಶ್ರೇಯ ಪೂಜಾರಿ ಹಾಗೂ ಭವಿಷ್ ಉಪಸ್ಥಿತರಿದ್ದರು.ಬಡ ಕುಟುಂಬದ ಸಂಕಷ್ಟಕ್ಕೆ ಸ್ಪಂದಿಸಿ ಸಕಾಲದಲ್ಲಿ ನೆರವಾದ ಅನ್ನಬ್ರಹ್ಮ ಸೇವಾ ಸಮಿತಿಯ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಧವಳತ್ರಯ ಜೈನ ಕಾಶಿ – ಪುಸ್ತಕ ವಿತರಣೆ NEWSಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜ್‌ನ ವಿದ್ಯಾಥಿಗಳಿಗೆ ಪುಸ್ತಕಗಳ ವಿತರಣೆಶಿಕ್ಷಣದ ಮಹತ್ವ ಅರಿತು ಬದುಕು ರೂಪಿಸಿರಿ : ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ:

voiceoftulunadu

ಶಿರ್ವ ಸಂತಮೇರಿ ಪ. ಪೂ ಕಾಲೇಜು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕೆ. ಆರ್ ಪಾಟ್ಕರ್ ಪುನರಾಯ್ಕೆ : ಕಾರ್ಯದರ್ಶಿಯಾಗಿ ಮೋಹನ್ ನೊರೋನ್ಹಾ ,ಕೋಶಾಧಿಕಾರಿಯಾಗಿ ಜುಲಿಯಾನ್ ರೊಡ್ರಿಗಸ್ ಆಯ್ಕೆ;

Voiceoftulunadu

ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ: ಇನ್ನಂಜೆ ಎಸ್.ವಿ.ಎಚ್. ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟಎಸ್.ವಿ.ಎಚ್ ಪದವಿಪೂರ್ವ ಕಾಲೇಜು ಇನ್ನಂಜೆ ;

Voiceoftulunadu

Leave a Comment