28.5 C
ಮಂಗಳೂರು
September 4, 2026
Uncategorizedರಾಜಕೀಯರಾಜ್ಯ/ದೇಶವಾಣಿಜ್ಯ

ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್, ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿವಕುಮಾರ್ ಘೋಷಣೆ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶೇಷ ಅಂದರೆ ಕ್ಯಾಬಿನೆಟ್ ಮೀಟಿಂಗ್ ಬಳಿಕ ಮೊದಲ ಸುದ್ದಿಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಿಸಿದ್ದಾರೆ. ಗಂಡು ಮಕ್ಕಳಿಗೂ ಫ್ರೀ ಬಸ್ ಪಾಸ್ ನೀಡಲಾಗುತ್ತದೆ ಎಂದಿದ್ದಾರೆ.

ಮೊದಲ ಸುದ್ದಿಗೋಷ್ಠಿಯಲ್ಲಿ ವಿದ್ಯಾರ್ಥಿಗಳಿಗೆ ಬಂಪರ್ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರೆಂಟಿ ನೀಡಿತ್ತು. ಇದೀಗ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಗಂಡು ಮಕ್ಕಳಿಗೂ ಉಚಿತ ಪಾಸ್ ನೀಡಲಾಗುತ್ತದೆ ಎಂದಿದ್ದಾರೆ. ಈ ಮೂಲಕ ರಾಜ್ಯದಲ್ಲಿರುವ ಎಲ್ಲಾ ವಿದ್ಯಾರ್ಥಿಗಳು ಉಚಿತವಾಗಿ ಸಾರಿಗೆ ಬಸ್‌ನಲ್ಲಿ ಪ್ರಯಾಣ ಮಾಡಬುಹುದು. ಈ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿದ್ದಾರೆ.ಡಿಕೆ ಶಿವಕುಮಾರ್ ಘೋಷಣೆ ಹೊರಬೀಳುತ್ತಿದ್ದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಖುಷಿಪಟ್ಟಿದ್ದಾರೆ. ಶಾಲಾ ಕಾಲೇಜುಗಳು ಶುಲ್ಕಗಳು ದುಬಾರಿಯಾಗುವು ಈಗಿನ ಪರಿಸ್ಥಿತಿಯಲ್ಲಿ ಡಿಕೆ ಶಿವಕುಮಾರ್ ಘೋಷಣೆ ವಿದ್ಯಾರ್ಥಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಈ ಕುರಿತು ಪೋಷಕರು ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ಸುದ್ದಿಗೋಷ್ಠಿಯಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಅಭಿವೃದ್ಧಿ ಕುರಿತ ರೂಪುರೇಶೆ ಮುಂದಿಟ್ಟಿದ್ದಾರೆ. ಪ್ರಮುಖವಾಗಿ ರೈತರ ಸಮಸ್ಯೆಗಳ ಬಗ್ಗೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ನೀರಾವರಿ ಸಮಸ್ಯೆ ಬಗೆ ಹರಿಸಲು ತಜ್ಞರ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ ಕಸದ ಸಮಸ್ಯೆ ತೀವ್ರಗೊಳ್ಳುತ್ತಿದೆ. ಹೀಗಾಗಿ ಈ ಸಂದರ್ಭದಲ್ಲಿ ಸುಮ್ಮನೆ ಮಾತುಕೊಟ್ಟರೆ ಆಗುವುದಿಲ್ಲ. ಹೀಗಾಗಿ ಸಮಸ್ಯೆ ಕುರಿತು ಪರಿಶೀಲಿಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ.ಉದ್ಯೋಗ ಅವಕಾಶ ಕಲ್ಪಿಸುವ ಕುರಿತು ಸರ್ಕಾರ ಗಂಭೀರವಾಗಿ ಕೆಲಸ ಮಾಡಲಿದೆ. ಶೇಕಡಾ 42ರಷ್ಟು ಜನ ನಗರದಲ್ಲಿ ವಾಸವಿದ್ದಾರೆ. ಉದ್ಯೋಗಕ್ಕಾಗಿ ಅತೀ ದೊಡ್ಡ ವಲಸೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಒಟ್ಟಾಗಿ ನಿರ್ಣಯ ಮಾಡುತ್ತೇವೆ. ಉದ್ಯೋಗ ಅವಕಾಶ ಕಲ್ವಿಸಿಕೊಡುವುದು, ಉದ್ಯೋಗ ನೇಮಕಾತಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸರ್ಕಾರ ಕೆಲಸ ಮಾಡಲಿದೆ ಎಂದಿದ್ದಾರೆ.

Related posts

ಕಾಪು ಸಹಕಾರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ : ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕ್ಷಯಧಾರ ಸೊಸೈಟಿಯ ಕಾರ್ಯಾಧ್ಯಕ್ಷ ಲವ ಕರ್ಕೇರ;

Voiceoftulunadu

ಇಂಗ್ಲೆಂಡ್‌ನಿಂದ ಫ್ರಾನ್ಸ್‌ಗೆ 13 ಗಂಟೆ 5 ನಿಮಿಷಗಳಲ್ಲಿ ಈಜು :ಇಂಗ್ಲಿಷ್ ಕ್ಯಾನಲ್ ರಿಲೇ ಈಜಿದ ಮಂಗಳೂರಿನ ಮೊದಲ ವೈದ್ಯ ಡಾ. ಗುರುಪ್ರಸಾದ್ ಭಟ್ ;

Voiceoftulunadu

ನೀಟ್ ಚಳವಳಿಯ ಪ್ರೇರಣೆ: ಈಗ ‘E20 ಜನತಾ ಪಕ್ಷ’ ಹುಟ್ಟು, 100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ;

Voiceoftulunadu

Leave a Comment