27 C
ಮಂಗಳೂರು
July 6, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಡಾ. ಎಂ. ಪ್ರಭಾಕರ ಜೋಶಿಯವರಿಗೆ ಪು. ಶ್ರೀ. ಪ್ರಶಸ್ತಿ;

ವರದಿ/ಚಿತ್ರ: ರೋಶನ್ ನೆಲ್ಲಿಗುಡ್ಡೆ

ಕಿನ್ನಿಗೋಳಿ : ನಾಡಿನ ಹಿರಿಯ ಬಹುಶ್ರುತ ವಿದ್ವಾಂಸ, ಲೇಖಕ, ಕಲಾವಿದ ಡಾ. ಎಂ. ಪ್ರಭಾಕರ ಜೋಷಿ ಅವರಿಗೆ ಈ ಬಾರಿಯ “ಕಟೀಲು ಪು. ಶ್ರೀನಿವಾಸ ಭಟ್ಟ ಪ್ರಶಸ್ತಿ” ಘೋಷಿಸಲಾಗಿದೆ.

ಡಾ. ಜೋಶಿಯವರು ಯಕ್ಷಗಾನ ಕಲಾವಿದ, ವಿಮರ್ಶೆ ಮೌಲ್ಯರಕ್ಷಣೆ, ಶಿಕ್ಷಣ, ಸಂಸ್ಕೃತಿ, ತತ್ವಶಾಸ್ತ್ರ, ಭಾಷೆ, ಸಾಂಸ್ಥಿಕ. ಸೇವೆಗಳಲ್ಲಿ ಆರು ದಶಕಗಳಿಗೂ ಮಿಕ್ಕಿ ಸಕ್ರಿಯರು. ತಾಳಮದ್ದಲೆ ಕಲಾವಿದ, ನಾಲ್ಕು ತಲೆಮಾರುಗಳ ಸಹ ಅರ್ಥಧಾರಿ, ಹಲವು ಗ್ರಂಥಗಳನ್ನು, ನೂರಾರು ಲೇಖನಗಳನ್ನು ಬರೆದವರು, ಅಕಾಡಮಿ ಪಾರ್ತಿಸುಬ್ಬ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಕಸಾಪ ಗೌರವಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ, ಮಣಿಪಾಲ ಪ್ರಶಸ್ತಿ, ಕಲ್ಕೂರ ಪ್ರಶಸ್ತಿ, ಕಲಾರಂಗ ಪ್ರಶಸ್ತಿ, ಪಟ್ಟ ಪ್ರಶಸ್ತಿ ಸಹಿತ ನೂರಾರು ಮನ್ನಣೆಗಳಿಗೆ ಭಾಜನರಾಗಿರುವರು.

ಜುಲೈ 11 ರಂದು ಯುಗಪುರುಷ ನೇತೃತ್ವದಲ್ಲಿ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಅಧ್ಯಾಪಕ, ಕಲಾವಿದ, ಸಂಶೋಧಕ, ಭಾಗವತ, ಅರ್ಥಧಾರಿ, ಸಂಶೋಧಕರಾಗಿ ಪ್ರಸಿದ್ಧರಾಗಿದ್ದ ಪು. ಶ್ರೀನಿವಾಸ ಭಟ್‌ರವರ ಸ್ಮೃತಿ ದಿನ ಕಾರ್ಯಕ್ರಮವು ಜರಗಲಿರುವುದು.

ಅಂದು ಡಾ. ಎಂ. ಪ್ರಭಾಕರ ಜೋಶಿಯವರಿಗೆ ಗಣ್ಯ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಅಂದು ಯುಗಪುರುಷದ ಕೆ. ಭುವನಾಭಿರಾಮ ಉಡುಪ ಹಾಗೂ ಪು. ಗುರುಪ್ರಸಾದ ಭಟ್‌ರವರು ತಿಳಿಸಿದ್ದಾರೆ.

Related posts

ಸೀತಾರಾಮನ್ ಭೇಟಿ ;ದೇವಳದ ಆವರಣದಲ್ಲಿ ಸಸಿ ನೆಟ್ಟ ಸಚಿವೆ ನಿರ್ಮಲಾ ಸೀತಾರಾಮನ್

voiceoftulunadu

ಕಟಪಾಡಿ : ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿ ಹಣ ನೀಡದೆ ಪರಾರಿಯಾದ ಕಾರು ಚಾಲಕ ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ಸ್ ಕಾರಿನಲ್ಲಿ ಬಂದ ಮೂವರು ಯುವಕರು;

Voiceoftulunadu

ಆಸಕ್ತಿ ಮತ್ತು ವೃತ್ತಿಯ ನಡುವೆ ಸಮತೋಲನ ಅಗತ್ಯ: ಯುವಜನತೆಗೆ ನಮೃತಾ ಮೋಹನ್ ಕಿವಿಮಾತು:ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ಹಮ್ಮಿಕೊಂಡ ಕಾರ್ಯಕ್ರಮ;

Voiceoftulunadu

Leave a Comment