28.5 C
ಮಂಗಳೂರು
September 4, 2026
Uncategorizedಕ್ರೈಮ್ಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ: ಕಡತಗಳ ಪರಿಶೀಲನೆ ;

ವರದಿ/ ಚಿತ್ರ: ದಿತೇಶ್ ಮಂಗಳೂರು

ಸುಳ್ಯ: ಕರ್ನಾಟಕ ರಾಜ್ಯ ಲೋ ಕಾಯುಕ್ತ ಪೋಲಿಸ್ ಅಧಿಕಾರಿಗಳು ಸುಳ್ಯ ತಾಲೂಕು ಕಛೇರಿಗೆ ದಾಳಿ ಮಾಡಿ ಕಚೇರಿಯ ವಿವಿಧ ವಿಭಾಗಗಳ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ.ಬುಧವಾರ ಬೆಳ್ಳಂಬೆಳಗ್ಗೆ ಉಡುಪಿ ಲೋಕಾಯುಕ್ತ ಡಿವೈಎಸ್‌ಪಿ ಹಾಲ್ ಮೂರ್ತಿ ರಾವ್ ನೇತೃತ್ವದಲ್ಲಿ ಕಚೇರಿಗೆ ಆಗಮಿಸಿದ ಅಧಿಕಾರಿಗಳು ಕಚೇರಿ ಯಲ್ಲಿ ಕಡತಗಳ ಪರಿಶೀಲನೆ ನಡೆಸಿ ದರು.

ಸಂಜೆಯ ವರೆಗೆ ಕಡತಗಳ ಪರಿ ಶೀಲನೆ ಮುಂದುವರಿಸಿದ್ದಾರೆ. ವಿವಿಧ ವಿಭಾಗಗಳಲ್ಲಿ ಕಡತಗಳನ್ನು ಪರಿಶೀ ಲಿಸಿದ ಲೋಕಾಯುಕ್ತ ಅಧಿಕಾರಿಗಳು ತಹಸೀಲ್ದಾ‌ರ್, ಉಪತಹಸೀಲದಾರ ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಾರ್ವಜನಿಕರಿಂದ ಸ್ವೀಕರಿದ ಅರ್ಜಿಗಳು, ಉಳಿದ ಅರ್ಜಿಗಳು, ವಿಲೇವಾರಿ ಮಾಡಿದ ಅರ್ಜಿಗಳ ಕುರಿತು ಮಾಹಿತಿ ಪಡೆದರು. ಕೆಲವು ಶಾಖೆಗಳಲ್ಲಿ ಹಲವು ಸಮಯದಿಂದ ಕಡತಗಳು ಬಾಕಿ ಇರುವುದು ಕಂಡುಬಂದಿದ್ದು, ಇಷ್ಟು ಸಮಯದಿಂದ ಯಾಕೆ ಪೆಂಡಿಂಗ್ ಇಟ್ಟಿದ್ದೀರಿ ಎಂದು ಲೋಕಾಯುಕ್ತ ಅಧಿಕಾರಿಗಳು ಪ್ರಶ್ನಿಸಿದರು.`ತಹಸೀಲ್ದಾರ್ ಕಚೇರಿಯಲ್ಲಿ ಕಡತಗಳನ್ನು ಪರಿಶೀಲಿಸಿ ಸಿಬ್ಬಂದಿ ಯಿಂದ ಮಾಹಿತಿ ಪಡೆದು, ಪರಿಶೀಲಿಸಿ ದಾಖಲಿಸಿದರು.

ಕಚೇರಿಗೆ ಬಂದ ಸಾರ್ವಜನಿಕರಿಂದ ಅಹವಾಲು ಸ್ವೀಕ ರಿಸಿದರು. ಕಚೇರಿಯ ವ್ಯವಸ್ಥೆ ಬಗ್ಗೆಯೂ ಪರಿಶೀಲನೆ ನಡೆಸಿ ದಾಖಲೆ ಸಿದರು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಪೋಲಿಸ್ ಅಧಿಕಾರಿಗಳಿಂದ ಸುಳ್ಯ ತಾಲೂಕು ಕಛೇರಿಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ಪ್ರಾರಂಭಿ ಸಿದ ಅಧಿಕಾರಿಗಳು ಮೊಬೈಲ್ ಗಳಲ್ಲಿನ ಗೂಗಲ್ ಪೇ ಮತ್ತು ಫೋನ್ ಪೇ ಹಾಗೂ ತಹಸೀಲ್ದಾರ್ ಕಛೇರಿಯಲ್ಲಿ ಸಿಬ್ಬಂದಿಗಳನ್ನು ಕುಳ್ಳಿರಿಸಿ ತಪಾಸಣೆ ನಡೆಸಿದರು.

ತಾಲೂಕು ಕಛೇರಿಯಲ್ಲಿಕುಳಿತುಕೊಂಡಿದ್ದ ಸಾರ್ವಜನಿಕರು ಸೇರಿದಂತೆ ಪ್ರತಿಯೊಬ್ಬರನ್ನು ಲೋಕಾಯುಕ್ತ ಪೋಲಿಸ್ ಅಧಿಕಾರಿಗಳು ಪ್ರಶ್ನಿಸಿ ಬರೆದುಕೊಂಡು ಕಡತಗಳನ್ನು ಪರಿಶೀಲನೆ ಹಾಗೂ ಸಾರ್ವಜನಿ ಕರ ಬ್ಯಾಗ್ ಹಾಗೂ ಟ್ರೋಕರ್ ಗಳ ಹಾವಳಿ ಕುರಿತಾಗಿಯು ಪ್ರಶ್ನಿಸಿದರು.ಈ ತಂಡದಲ್ಲಿ ಸಿಬ್ಬಂದಿ ನಾಗೇಶ್ ಉಡುಪ, ನಾಗರಾಜ್, ಪುಷ್ಪವತಿ, ಸುದೀಪ್, ರವಿ ಜೊತೆಗೆ ಲೋಕಾಯುಕ್ತ ಪೋಲೀಸ್ ಅಧಿಕಾರಿಗಳ ಸ್ಥಳೀಯ ಸರಪಂಚರು ಉಪಸ್ಥಿ ತರಿದ್ದರು.

Related posts

ಮುಂಡಾಜೆಗುತ್ತು ರೊ.ಜ್ಯೋತಿಂದ್ರ ಶೆಟ್ಟಿ ಯವರಿಗೆ “ಅನ್ಸಂಗ್ ಹೀರೋ” ಪ್ರಶಸ್ತಿ;

Voiceoftulunadu

ಉಡುಪಿಯ ಡಾ. ರಾಜಲಕ್ಷ್ಮಿ ಅವರ “ವಾತ್ಸಲ್ಯದ ಒಸಗೆ” ಕೃತಿ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ : ಪ್ರಶಸ್ತಿ ಪ್ರದಾನಿಸಲಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಸುರೇಶ್‌ ಹನಗವಾಡಿ;

Voiceoftulunadu

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್‌: ಸೈಬರ್ ಪೊಲೀಸರಿಗೆ ದೂರು ‘ಜಲಗಾರ ಯೂನಿವರ್ಸಿಟಿ‘ ಹೆಸರಿನ ನಕಲಿ ಖಾತೆಯಿಂದ ಮೆಸೇಜ್

voiceoftulunadu

Leave a Comment