September 5, 2026
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ, ಪುತ್ತೂರು ವತಿಯಿಂದ ವಿಶ್ವ ಯೋಗ ದಿನಾಚರಣೆ”ಆರೋಗ್ಯಕರ ವಯೋವೃದ್ಧಿಗಾಗಿ ಯೋಗ” ಘೋಷ ವಾಕ್ಯಕ್ಕೆ ಅನುಗುಣವಾಗಿ ನಡೆದ ಕಾರ್ಯಕ್ರಮ;

ವರದಿ /ಚಿತ್ರ: ಇ ಮೀಡಿಯಾ

ಉಡುಪಿ: ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ ಪುತ್ತೂರು ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.”ಆರೋಗ್ಯಕರ ವಯೋವೃದ್ಧಿಗಾಗಿ ಯೋಗ” ಎಂಬ ಘೋಷ ವಾಕ್ಯಕ್ಕೆ ಅನುಗುಣವಾಗಿ ಯೋಗ ಗುರುಗಳಾದ ಪಿ.ವಿ. ಭಟ್ ಇವರ ಮಾರ್ಗದರ್ಶನದಲ್ಲಿ ಈ ಬಾರಿಯ ಯೋಗ ಶಿಷ್ಟಾಚಾರದಂತೆ ಯೋಗಾಸನ ಮತ್ತು ಪ್ರಾಣಾಯಾಮ ನಡೆಯಿತು.ಗುರುಗಳಾದ ಪಿ.ವಿ. ಭಟ್ ಮತ್ತುಸತೀಶ್ ಕುಂದರ್ ರವರನ್ನು ಅಭಿನಂದಿಸಲಾಯಿತು.

ಅಭಿನಂದನೆ ಸ್ವೀಕರಿಸಿದ ಪಿ.ವಿ. ಭಟ್ ರವರು, ಮನುಷ್ಯನಿಗೆ ಪ್ರಕೃತಿಯ ಉಪಕಾರದ ಬಗ್ಗೆ ಹಾಗೂ ನಿರಂತರ ಯೋಗಭ್ಯಾಸದಿಂದ ಆರೋಗ್ಯ ಹೇಗೆ ವೃದ್ಧಿಸುತ್ತದೆ ಎಂಬುದರ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.ಗುರುಗಳಾದ ಸತೀಶ್ ಕುಂದರ್ ರವರು, ಎಲ್ಲಾ ಭಾರತೀಯರು ಯೋಗದ ಮೂಲಕ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿ ಬಲಿಷ್ಠ ರಾಷ್ಟ್ರದ ಏಳಿಗೆಗೆ ಭದ್ರ ಬುನಾದಿಹಾಕಬೇಕೆಂದು ಅಭಿಪ್ರಾಯ ಪಟ್ಟರು.ಯೋಗ ಶಿಕ್ಷಕಿ ಸುನೀತಾ ಚೈತನ್ಯ, ಆರೋಗ್ಯ ಭಾರತಿ ಸಂಸ್ಥೆಯ ಉಡುಪಿ ಜಿಲ್ಲಾ ಕಾರ್ಯದರ್ಶಿ ಪ್ರಭಾಕರ್ ಭಟ್ ಉಪಸ್ಥಿತರಿದ್ದರು.

ಹಿರಿಯ ಯೋಗಬಂಧು ಲಕ್ಷ್ಮೀ ಕುಮಾರಿ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು. ಯೋಗ ಬಂದು ಸುನೀತಾ ಶೆಟ್ಟಿ ವಂದನಾರ್ಪಣೆಗೈದರು.ಸಭಾ ಕಾರ್ಯಕ್ರಮದ ಕೊನೆಯಲ್ಲಿ ಯೋಗ ಬಂಧುಗಳು ಮನಮೋಹಕ ಯೋಗ ನೃತ್ಯ ಪ್ರಸ್ತುತ ಪಡಿಸಿದರು.

Related posts

ಬಂಟಕಲ್ ತಾಂತ್ರಿಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಯೋಗೇಶ್ವರಿ ಬಿ. ಹೆಚ್. ಲೇಖನಬೆಳಗ್ಗಿನ ಪ್ರಾವೀಣ್ಯತೆ: ಯಶಸ್ಸಿನ ಶಿಸ್ತು;

Voiceoftulunadu

ಇರಾನ್‌ ಜೊತೆ ಶಾಂತಿ ಒಪ್ಪಂದ ಪೂರ್ಣ.. ಹಾರ್ಮುಜ್‌ ಜಲಸಂಧಿ ಓಪನ್: ಟ್ರಂಪ್‌ ಘೋಷಣೆ

voiceoftulunadu

ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ ವಾರ್ಷಿಕ (ಒಳಾಂಗಣ ಕ್ರೀಡಾ) ಇಂಡೋರ್ ಗೇಮ್ ದಿನಾಚರಣೆ;

Voiceoftulunadu

Leave a Comment