27 C
ಮಂಗಳೂರು
July 6, 2026
Uncategorizedಅಂತಾರಾಷ್ಟ್ರೀಯರಾಜಕೀಯವಾಣಿಜ್ಯ

ಇರಾನ್‌ ಜೊತೆ ಶಾಂತಿ ಒಪ್ಪಂದ ಪೂರ್ಣ.. ಹಾರ್ಮುಜ್‌ ಜಲಸಂಧಿ ಓಪನ್: ಟ್ರಂಪ್‌ ಘೋಷಣೆ

ವರದಿ ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ

ವಾಷಿಂಗ್ಟನ್: ಇರಾನ್ (Iran) ಜೊತೆ ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು (Strait of Hormuz) ಮತ್ತೆ ತೆರೆಯಲಾಗುವುದು, ಅಮೆರಿಕದ ನೌಕಾ ದಿಗ್ಬಂಧನವನ್ನು ತಕ್ಷಣವೇ ತೆಗೆದುಹಾಕಲಾಗುವುದು ಎಂದು ತಿಳಿಸಿದ್ದಾರೆ.

ಟ್ರೂತ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಟ್ರಂಪ್, ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನೊಂದಿಗಿನ ಒಪ್ಪಂದವು ಈಗ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು! ಹಾರ್ಮುಜ್ ಜಲಸಂಧಿಯನ್ನು ಟೋಲ್-ಫ್ರೀ ಆಗಿ ತೆರೆಯಲು ನಾನು ಈ ಮೂಲಕ ಸಂಪೂರ್ಣವಾಗಿ ಅಧಿಕಾರ ನೀಡುತ್ತೇನೆ. ಅದೇ ಸಮಯದಲ್ಲಿ ಯುನೈಟೆಡ್ ಸ್ಟೇಟ್ಸ್ ನೌಕಾ ದಿಗ್ಬಂಧನವನ್ನು ತಕ್ಷಣ ತೆಗೆದುಹಾಕಲು ಅಧಿಕಾರ ನೀಡುತ್ತೇನೆ. ವಿಶ್ವದ ಹಡಗುಗಳೇ, ನಿಮ್ಮ ಎಂಜಿನ್‌ಗಳನ್ನು ಪ್ರಾರಂಭಿಸಿ. ತೈಲ ಹರಿಯಲಿ ಎಂದು ಟ್ರಂಪ್ ಬರೆದಿದ್ದಾರೆ.

ಮಾತುಕತೆಗಳ ನಂತರ ಅಮೆರಿಕ ಮತ್ತು ಇರಾನ್‌ ನಡುವಿನ ಶಾಂತಿ ಒಪ್ಪಂದವನ್ನು ತಲುಪಲಾಗಿದೆ ಎಂದು ಘೋಷಿಸಲು ನಾವು ಸಂತೋಷಪಡುತ್ತೇವೆ. ಲೆಬನಾನ್‌ ಸೇರಿದಂತೆ ಎಲ್ಲಾ ಕಡೆ ಮಿಲಿಟರಿ ಕಾರ್ಯಾಚರಣೆಗಳನ್ನು ತಕ್ಷಣ ಮತ್ತು ಶಾಶ್ವತವಾಗಿ ಕೊನೆಗೊಳಿಸುವುದಾಗಿ ಎರಡೂ ರಾಷ್ಟ್ರಗಳು ಘೋಷಿಸಿವೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ

ಷರೀಫ್ X ನಲ್ಲಿ ಬರೆದಿದ್ದಾರೆ.

ಶುಕ್ರವಾರ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಎರಡೂ ಕಡೆಯವರು ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ ಎಂದು ಪ್ರಧಾನಿ ಷರೀಫ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಹಾರ್ಮುಜ್ ಜಲಸಂಧಿಯು ಮತ್ತೆ ಎಲ್ಲಾ ಹಡಗುಗಳಿಗೆ ಯಾವಾಗ ತೆರೆದಿರುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ..

ಹಾರ್ಮುಜ್‌ ಜಲಸಂಧಿಯು ವಿಶ್ವದ ಅತ್ಯಂತ ಜನನಿಬಿಡ ತೈಲ ಸಾಗಣೆ ಮಾರ್ಗಗಳಲ್ಲಿ ಒಂದಾಗಿದೆ. ವಿಶ್ವದ ತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯ ಸುಮಾರು ಐದನೇ ಒಂದು ಭಾಗದಷ್ಟು ಕೇಂದ್ರಬಿಂದುವಾಗಿದೆ. ಫೆ.28 ರಂದು ಯುದ್ಧ ಪ್ರಾರಂಭವಾದಾಗ ಇರಾನ್ ಈ ಪ್ರಮುಖ ಜಲಮಾರ್ಗವನ್ನು ಇರಾನ್ ಮುಚ್ಚಿತು.‌ ಇದರಿಂದ ಭಾರತದ ತೈಲ ಮತ್ತು ಅನಿಲ ಪೂರೈಕೆಯಲ್ಲೂ ಬಿಕ್ಕಟ್ಟು ಉಂಟಾಗಿತ್ತು. ಏಪ್ರಿಲ್‌ನಲ್ಲಿ ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆಗಳು ಪ್ರಗತಿ ಸಾಧಿಸಲು ವಿಫಲವಾದ ನಂತರ ಅಮೆರಿಕವು ಇರಾನಿನ ಬಂದರುಗಳ ಮೇಲೆ ತನ್ನ ದಿಗ್ಬಂಧನವನ್ನು ಘೋಷಿಸಿತ್ತು.

Related posts

ವಾಯುಭಾರ ಕುಸಿತ; ರಾಜ್ಯದಲ್ಲಿ ಭಾರೀ ಮಳೆಯ ಸಾಧ್ಯತೆ:

Voiceoftulunadu

ಮಂಗಳೂರು: ಕೇರಳ ಮೂಲದ ಚಿನ್ನ ವ್ಯಾಪಾರಿಯ ದರೋಡೆ, ಕಾರಿನೊಂದಿಗೆ ಪರಾರಿಸೋಮವಾರ ಮುಂಜಾನೆ ಪಣಂಬೂರು ಬಳಿಯ ಬೈಕಂಪಾಡಿಯಲ್ಲಿ ನಡೆದ ಘಟನೆ ;

Voiceoftulunadu

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ : ಪಡುಬಿದ್ರಿ ರೋಟರಿ ಕ್ಲಬ್ಬಿನ ನಿಕಟ ಪೂರ್ವ ಅಧ್ಯಕ್ಷ ಹಾಗೂ ಪಡುಬಿದ್ರಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಮಹಮ್ಮದ್ ನಿಯಾಜ್;

Voiceoftulunadu

Leave a Comment