ವರದಿ /ಚಿತ್ರ :ಈ ಮೀಡಿಯಾ
ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ನೆರವೇರಿತು.
ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ರೋಟೆರಿಯನ್ ವೈ ಸುಧೀರ್ ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯರವರು
ವಿದ್ಯಾರ್ಥಿಗಳಿಗೆ ಗಿಡವನ್ನು ನೀಡುವುದರ ಮೂಲಕ ಹಾಗೂ ಪರಿಸರವನ್ನು ಉಳಿಸಿ ಬೆಳೆಸಬೇಕು ಎಂದು ಮನವಿ ಮಾಡಿದರು. ಪಡುಬಿದ್ರಿ ರೋಟರಿ ಕ್ಲಬ್ ಕಾರ್ಯದರ್ಶಿ ಕಾರ್ತಿಕ್ ಕರ್ಕೇರ, ನಟರಾಜ್ ಹಾಗೂ ರೋಟರಿ ಸದಸ್ಯರು, ಉಭಯ ಸಂಸ್ಥೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
