September 4, 2026
Uncategorizedಕ್ರೈಮ್ಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣರಿಂದ ಅಸಂವಿದಾನಿಕ ಶಬ್ದ ಬಳಕೆ ಬಂಧನಕ್ಕೆ ಆಗ್ರಹ : ಬಂಧನಕ್ಕೆ ಆಗ್ರಹಿಸಿದ ಮುದರಂಗಡಿ ಗ್ರಾಮ ಪಂಚಾತ್ ಮಾಜಿ ಅಧ್ಯಕ್ಷ ಡೇವಿಡ್‌ ಡಿಸೋಜಾ ;

ವರದಿ /ಚಿತ್ರ :ಈ ಮೀಡಿಯಾ

ಮುದರಂಗಡಿ : ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭಾಸದಸ್ಯ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಉಡುಪಿ ಶಾಸಕ ಯಶ್ವಾಲ್ ಸುವರ್ಣ ರನ್ನು ಬಂಧಿಸುವಂತೆ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಡೇವಿಡ್‌ ಡಿಸೋಜಾ ಆಗ್ರಹಿಸಿದ್ದಾರೆ.

ಇತ್ತೀಚೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ ಸಭೆಯಲ್ಲಿ ಉಡುಪಿ ಶಾಸಕ ಯಶ್ವಾಲ್ ಸುವರ್ಣ ರವರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕಠೋರ ಮಾತುಗಳನ್ನಾಡಿದ್ದರು.ಈ ಘಟನೆಗೆ ಸಂಬಂಧಿಸಿ ಕಾಂಗ್ರೆಸ್ ವತಿಯಿಂದ ಉಡುಪಿ, ಕಾಪು, ಪಡುಬಿದ್ರಿ ಸಹಿತ ಕೆಲವು ಠಾಣೆಗಳಲ್ಲಿ ದೂರು ಸಲ್ಲಿಸಲಾಗಿದ್ದರೂ, ಪೊಲೀಸರು ಯಶ್ವಾಲ್ ಸುವರ್ಣರವರಿಗೆ ನೋಟಿಸು ನೀಡಿ ಕೈತೊಳೆದುಕೊಂಡಿದ್ದಾರೆ.

ಯಶ್ಪಾಲ್ ಸುವರ್ಣರವರ ಬೆಂಬಲಿಗರು ಸಾಮಾಜಿಕ ಜಾಲ ತಾಣಗಳಲ್ಲಿ ಅವರನ್ನು ಬೆಂಬಲಿಸಿ ಪೋಸ್ಟ್ ಹಾಕುತ್ತಿರುವುದನ್ನು ಪೊಲೀಸರು ಕಂಡೂ ಕಾಣದಂತೆ ವರ್ತಿಸುತ್ತಿರುವುದು ಸಂಶಯಕ್ಕೆ ಎಡೆ ಮಾಡಿ ಕೊಟ್ಟಿದೆ

ಯಶ್ಪಾಲ್ ಸುವರ್ಣರವರು ಈಗಾಗಲೇ ಕ್ರಿಮಿನಲ್ ಹಿನ್ನೆಲೆಯವರಾಗಿದ್ದು, ಕರಾವಳಿಯ ಜನರು ಉಡುಪಿಯಲ್ಲಿ ನಡೆದ ಹಾಜಬ್ಬ – ಹಸನಬ್ಬ ಪ್ರಕರಣವನ್ನು ಇನ್ನೂ ಮರೆತಿಲ್ಲ. ಪೊಲೀಸರು ತುರ್ತು ಕ್ರಮ ಕೈಗೊಳ್ಳುವಂತೆ ಡೇವಿಡ್ ಡಿಸೋಜಾ ಆಗ್ರಹಿಸಿದ್ದಾರೆ.

Related posts

ಮಕ್ಕಳಿಗೆ ಪೋಷಕರೇ ರೋಲ್ ಮಾಡೆಲ್ ಆಗಬೇಕು: ರಾಘವೇಂದ್ರ ಪ್ರಭು ಕರ್ವಾಲು.ಕ್ರಿಶ್ಚನ್ ಹೈಸ್ಕೂಲಿನಲ್ಲಿ ನಡೆದ ಪೋಷಕರು ಮತ್ತು ವಿದ್ಯಾರ್ಥಿಗಳ ಬೃಹತ್ ಸಮಾವೇಶ;

Voiceoftulunadu

ರಾಜಕೀಯದ ಪುಣ್ಯಕೋಟಿ ಸಿದ್ದರಾಮಯ್ಯ: ಹೈಕಮಾಂಡ್‌ಗೆ ಕೊಟ್ಟ ಮಾತು ಉಳಿಸಿಕೊಂಡು ಸಿಎಂ ಗದ್ದುಗೆ ತ್ಯಜಿಸಿದ ಸಿದ್ದುವಿಶೇಷ ವರದಿ

Voiceoftulunadu

ಭೋವಿ ಜನಾಂಗಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನಿರಾಕರಣೆ : ಪವನ್ ಕುಮಾರ್ ಶಿರ್ವಉಡುಪಿ – ದಕ ಜಿಲ್ಲಾಡಳಿತದ ವಿರುದ್ಧ ಹೋರಾಟದ ಎಚ್ಚರಿಕೆ;

Voiceoftulunadu

Leave a Comment