September 4, 2026
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿ ಹೈಕೋರ್ಟ್ ನ್ಯಾಯವಾದಿ ಡಾ. ಅರುಣ್ ಶ್ಯಾಮ್ ನೇಮಕ;

ವರದಿ/ ಚಿತ್ರ: ದಿತೇಶ್ ಪೂಜಾರಿ ಮಂಗಳೂರು

ಮಂಗಳೂರು: ಕರ್ಣಾಟಕ ಬ್ಯಾಂಕಿನ ಸ್ವತಂತ್ರ ಹೆಚ್ಚುವರಿ ನಿರ್ದೇ ಶಕರಾಗಿ ಹೈಕೋರ್ಟ್‌ನ ಹಿರಿಯ ನ್ಯಾಯವಾದಿ, ರಾಜ್ಯದ ಮಾಜಿ ಹೆಚ್ಚುವರಿ ಅಡ್ವಕೇಟ್ ಜನರಲ್ ಡಾ. ಅರುಣ್ ಶ್ಯಾಮ್ ಅವರನ್ನು ನೇಮಕ ಮಾಡಲಾಗಿದೆ.ಜುಲೈ 18ರಂದು ನಿರ್ದೇಶಕ ಮಂಡಳಿಯ ಸಭೆಯಲ್ಲಿ ಡಾ. ಎಂ. ಅರುಣ್ ಶ್ಯಾಮ್ ಅವರನ್ನು ಹೆಚ್ಚುವರಿ ನಿರ್ದೇಶಕರಾಗಿ ನಾಲ್ಕು ವರ್ಷಗಳ ಅವಧಿಗೆ ನೇಮಿಸಲಾಯಿತು.

ಅವರ ನೇಮಕವನ್ನು ಮಂಗಳೂರು ದಕ್ಷಿಣ ಶಾಸಕ ಎಂ.ವೇದವ್ಯಾಸ ಕಾಮತ್ ಸಹಿತ ಪ್ರಮುಖರು ಸ್ವಾಗತಿಸಿದ್ದಾರೆ.1982 ಮಾರ್ಚ್ 21ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಲ್ನಾಡು ಗ್ರಾಮದ ಪಂಜಿಗದ್ದೆಯ ಕೃಷಿ ಕುಟುಂಬದಲ್ಲಿ ಜನಿಸಿದ ಅವರು, ಪ್ರಾಥಮಿಕ ಶಿಕ್ಷಣವನ್ನು ವಿಟ್ಲ ಮಾದಕಟ್ಟೆ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಿಕ್ಷಣವನ್ನು ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಾಡಿದ್ದು, ಬಳಿಕIIIಡಾ. ಅರುಣ್ ಶ್ಯಾಮ್ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಹಾಗೂ ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಪದವಿ ಪಡೆದರು.

ಶಿವಮೊಗ್ಗದ ಸಿ.ಬಿ.ಆ‌ರ್. ನ್ಯಾಷನಲ್ ಲಾ ಕಾಲೇಜಿನ ಮೂಲಕ ಎಲ್ ಎಲ್‌ಎಂ ಮುಗಿಸಿ, ಬೆಂಗಳೂರಿನ ಅಲಯನ್ಸ್ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ.2004ರಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ನೋಂದಾಯಿ ಸಿಕೊಂಡ ಇವರು, ಶಿವಮೊಗ್ಗದ ಹಿರಿಯ ನ್ಯಾಯವಾದಿ ಎಂ.ಆರ್.ಸತ್ಯನಾರಾಯಣ ಅವರ ಮಾರ್ಗದರ್ಶ ನದಲ್ಲಿ ವೃತ್ತಿಜೀವನ ಆರಂಭಿಸಿದರು.

2006ರಲ್ಲಿ ಸುಪ್ರೀಂ ಕೋರ್ಟ್‌ ಹಿರಿಯ ನ್ಯಾಯವಾದಿ ಕೆ. ಎಂ. ನಟರಾಜ್ ಅವರೊಂದಿಗೆ ಬೆಂಗಳೂರು ಹೈಕೋರ್ಟ್‌ನಲ್ಲಿ ಕೆಲಸ ಆರಂಭಿಸಿ ದರು. ನಂತರ ಬೆಂಗಳೂರಿನಲ್ಲಿ ತಮ್ಮದೇ ಆದ ಅರುಣ್ ಶ್ಯಾಮ್ ಅಸೋಸಿಯೇಟ್ಸ್ ಕಾನೂನು ಸಂಸ್ಥೆಯನ್ನು ಸ್ಥಾಪಿಸಿದರು. ಸೆಪ್ಟೆಂಬರ್ 2020 ರಲ್ಲಿ ಇವರನ್ನು ಕರ್ನಾಟಕ ಸರ್ಕಾರದ Additional Advocate General ಆಗಿ ನೇಮಿಸಲಾಗಿತ್ತು.

ಇವರನ್ನು ಈಗ ಪ್ರತಿಷ್ಠಿತ ಕರ್ಣಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ಹೆಚ್ಚುವರಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಶೈಕ್ಷಣಿಕ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾಲೇಜಿನಲ್ಲಿದ್ದಾಗ ಎಬಿವಿಪಿಯ ಸಕ್ರಿಯ ಕಾರ್ಯಕ ರ್ತರಾಗಿ ಗುರುತಿಸಿಕೊಂಡಿದ್ದ ಅವರು ಸಾಮಾಜಿಕ, ಧಾರ್ಮಿಕ ಚಟುವಟಿಕೆ ಗಳ ಮೂಲಕ ಗುರುತಿಸಲ್ಪಟ್ಟಿದ್ದಾರೆ.

Related posts

ಕುಂದಾಪುರ : ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಇಡೀ ಅಂಗಡಿ ಭಸ್ಮ ಸುಮಾರು 40 ಲಕ್ಷಕ್ಕೂ ಅಧಿಕ ರೂಪಾಯಿ ನಷ್ಠದ ಅಂದಾಜು ;

Voiceoftulunadu

ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿದ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್:

voiceoftulunadu

ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಅವರಿಗೆ ಡಾಕ್ಟರೇಟ್ ಪ್ರಧಾನ;

Voiceoftulunadu

Leave a Comment