September 5, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಕರ್ನಾಟಕ ಪ್ರೆಸ್ ಕ್ಲಬ್ : ನಗರ, ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ, ಅಧಿಕೃತ ಆದೇಶ ವಿತರಣೆ ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ರಮೇಶ್ ಶೆಟ್ಟಿ ಅವರ ಶಿಫಾರಸಿನ ಮೇರೆಗೆ ನೇಮಕ ಪ್ರಕ್ರಿಯೆ ;

ವರದಿ /ಚಿತ್ರ: ಈ ಮೀಡಿಯಾ

ಬೆಂಗಳೂರು:ಸಂವಿಧಾನದ ನಾಲ್ಕನೇ ಅಂಗವಾಗಿರುವ ಪತ್ರಿಕಾ ರಂಗವನ್ನು ಬಲಪಡಿಸುವ, ರಾಜ್ಯದ ಪತ್ರಕರ್ತರಲ್ಲಿ ಒಗ್ಗಟ್ಟು ಹಾಗೂ ವೃತ್ತಿಪರತೆ ಮೂಡಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ‘ಕರ್ನಾಟಕ ಪ್ರೆಸ್ ಕ್ಲಬ್ (ರಿ)’ ಬೆಂಗಳೂರು ನಗರ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅಧಿಕೃತ ಆದೇಶ ಪತ್ರಗಳನ್ನು ವಿತರಿಸಲಾಗಿದೆ.

ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ರಮೇಶ್ ಶೆಟ್ಟಿ ಅವರ ಶಿಫಾರಸಿನ ಕಾರ್ಯಕಾರಿ ಮಂಡಳಿಯ ಮೇರೆಗೆ ಮತ್ತು ರಾಜ್ಯ ಮಟ್ಟದ ಸಭೆಯ ರಾಜ್ಯ ಅನುಮೋದನೆಯೊಂದಿಗೆ, ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್.ಜಿ. ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ.ನೂತನ ಪದಾಧಿಕಾರಿಗಳ ವಿವರ:ಕಾರ್ಯಾಧ್ಯಕ್ಷರು ಹಾಗೂ ಶಿವಶಕ್ತಿ ಪತ್ರಿಕೆ : ಹಿರಿಯ ಪತ್ರಕರ್ತ ಆರ್. ಶಿವಕುಮಾರ್,ಖಜಾಂಚಿ: ಮಲ್ಲೇಶ್ ಗೌಡ, ಜಿಲ್ಲಾ ಸಮಿತಿ ಸದಸ್ಯರು: ಚೇತನ ಹಾಗೂ ಮಹೇಶ್ ಆಯ್ಕೆ ಆಗಿದ್ದಾರೆ.

ಗಣ್ಯರ ಉಪಸ್ಥಿತಿ : ಮಾರ್ಗದರ್ಶನ ಹಾಗೂ ಈ ನೇಮಕಾತಿ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ‘ಪೊಲೀಸ್ ವಾರ್ತೆ’ ಪತ್ರಿಕೆಯ ಸಂಪಾದಕ ಸುಭಾಷ್ ಆರ್. ಶೆಟ್ಟಿ, ಬೆಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಸೇರಿದಂತೆ ಮುಂತಾದ ಪ್ರಮುಖರು ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿದರು.ರಾಜ್ಯ ಸಮಿತಿಯ ಪರವಾಗಿ ರಾಜ್ಯಾಧ್ಯಕ್ಷ ಎಸ್. ರಾಮಸ್ವಾಮಿ ಹಾಗೂ ಪ್ರಧಾನ ಕಾರ್ಯದರ್ಶಿ ರಮೇಶ ಎಸ್.ಜಿ. ಅವರು ನೂತನ ತಂಡಕ್ಕೆ ಅಧಿಕೃತ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದರು.

ಸಂಘಟನೆಯ ಪ್ರಮುಖ ಉದ್ದೇಶಗಳು ಮತ್ತು ಜವಾಬ್ದಾರಿಗಳು : ಪತ್ರಕರ್ತರ ರಕ್ಷಣೆ: ಬೆಂಗಳೂರುನಗರ ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ವೃತ್ತಿಜೀವನದಲ್ಲಿ ಪತ್ರಕರ್ತರು ಎದುರಿಸುವ ಸಮಸ್ಯೆಗಳು, ಸವಾಲುಗಳು ಮತ್ತು ಸಂಕಷ್ಟಗಳ ಸಂದರ್ಭದಲ್ಲಿ ಅಗತ್ಯ ನೆರವು ನೀಡುವುದು.ಸಾರ್ವಜನಿಕ ಹಿತಾಸಕ್ತಿಪತ್ರಕರ್ತರ ವೃತ್ತಿಪರ ಹಿತಾಸಕ್ತಿಗಳ ಜೊತೆಗೆ ಸಮಾಜದ ಬಡವರು ಮತ್ತು ದುರ್ಬಲ ವರ್ಗದವರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಸಮಾಜಮುಖಿ ವಿಚಾರಗಳನ್ನು ಮುನ್ನೆಲೆಗೆ ತರುವುದು.

ಮೌಲ್ಯಾಧಾರಿತ ಪತ್ರಿಕೋದ್ಯಮಪತ್ರಿಕೋದ್ಯಮದ ತತ್ವ-ಸಿದ್ಧಾಂತಗಳು, ಪತ್ರಿಕಾ ಧರ್ಮ ಹಾಗೂ ವೃತ್ತಿಪರ ಮೌಲ್ಯಗಳಾದ ಸತ್ಯ, ನ್ಯಾಯ ಮತ್ತು ನೈತಿಕತೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸ್ವಚ್ಛ ಮತ್ತು ಸಮಾನ ಸಮಾಜದ ನಿರ್ಮಾಣಕ್ಕೆ ಶ್ರಮಿಸುವುದು.ವರದಿ : ಮಹೇಶ್ ಶರ್ಮಾ

Related posts

ಮತ್ತ್ವಗಂಧ ಎಕ್ಸ್‌ಪ್ರೆಸ್ ರೈಲು ಮೂಲಕ ಮಂಗಳೂರುಗೆ ಬಂದಿದ್ದ ಅಂಗವಿಕಲ ಅನಾಮಧೇಯ ವ್ಯಕ್ತಿಯ ಶವ ಪತ್ತೆ – ವಾರಸುದಾರರ ಮಾಹಿತಿಗೆ ಮನವಿ;

Voiceoftulunadu

ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭಅಕಾಡೆಮಿ ಸಾಹಿತ್ಯಕ್ಕೆ ಮೀಸಲಾಗಬೇಡಿ, ಸಂಸ್ಕೃತಿ, ಸಂಸ್ಕಾರ ಪಸರಿಸಿ: ಶಾಸಕ ಉಮಾನಾಥ ಕೋಟ್ಯಾನ್

Voiceoftulunadu

ರಾಷ್ಟ್ರೀಯ ಸಿನಿಮಾ ಪುರಸ್ಕಾರ,ಕನ್ನಡಕ್ಕೆ 4, ತುಳುಗೆ 1 ಗೌರವಕನ್ನಡಕ್ಕೆ ಮೊದಲ ಶ್ರೇಷ್ಠ ಪೋಷಕ ನಟಿ ಪ್ರಶಸ್ತಿ,ಮಿಥ್ಯ ಚಿತ್ರಕ್ಕೆ ರೂಪಶ್ರೀಗೆ ಅತ್ಯುತ್ತಮ ಪೋಷಕ ನಟಿ ಗೌರವ , ಆತಿಶ್ ಶೆಟ್ಟಿ ಅತ್ಯುತ್ತಮ ಬಾಲ ನಟಮಿಥ್ಯ ಅತ್ಯುತ್ತಮ ಚಿತ್ರ ,ಉತ್ತಮ ಪುಸ್ತಕ: ಕೆಂಜಾರು ಪ್ರದೀಪ್ ಶೆಟ್ಟಿ ,ಉತ್ತಮ ತುಳು ಚಿತ್ರ ಇಂಬು ;

Voiceoftulunadu

Leave a Comment