September 5, 2026
Uncategorizedಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶ

ಕೇರಳ ಸಿಎಂ ಆಗಿ ವಿ.ಡಿ ಸತೀಶನ್‌, 20 ಸಂಪುಟ ಸಚಿವರಿಂದ ಇಂದು ಪ್ರಮಾಣ ಸ್ವೀಕಾರ|

ತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ವಿ.ಡಿ ಸತೀಶನ್‌ (VD Satheesan) ಹಾಗೂ ಇತರ 20 ಮಂದಿ ಸಂಪುಟ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಪ್ರಮಾಣ ಸ್ವೀಕಾರ ಸಮಾರಂಭಕ್ಕೂ ಮುನ್ನವೇ ವಿ.ಡಿ ಸತೀಶನ್‌ ಭಾನುವಾರ (ನಿನ್ನೆ) ಯುಡಿಎಫ್ ಮೈತ್ರಿಕೂಟದ ಸಚಿವ ಸಂಪುಟವನ್ನ ಅನಾವರಣಗೊಳಿಸಿದರು. 21 ಸಚಿವರಲ್ಲಿ ಸತೀಶನ್ ಸೇರಿದಂತೆ 14 ಮಂದಿ ಮೊದಲ ಬಾರಿಗೆ ಸಚಿವರಾಗಿದ್ದಾರೆ. ಅಲ್ಲದೇ ಸಂಪುಟದಲ್ಲಿ (Kerala Cabinet) ಇಬ್ಬರು ಮಹಿಳೆಯರು ಮತ್ತು ಪರಿಶಿಷ್ಟ ಜಾತಿ ಸಮುದಾಯದ ಇಬ್ಬರು ಸದಸ್ಯರು ಸೇರಿದ್ದಾರೆ.ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಸಚಿವರ ಪಟ್ಟಿ ಸಲ್ಲಿಸಿದ ನಂತರ, ರಾಜ್ಯಪಾಲರು ಸರ್ಕಾರ ರಚನೆಗೆ ಅನುಮೋದನೆ ನೀಡಿದರು. ಇಡೀ ಯುಡಿಎಫ್ ಸಚಿವಾಲಯ ಇಂದು ಒಟ್ಟಿಗೆ ಪ್ರಮಾಣ ವಚನ ಸ್ವೀಕರಿಸಲಿದೆ.ಕಳೆದ

ಕಳೆದ 6 ದಶಕಗಳಲ್ಲಿ ಇದೇ ಮೊದಲ ಬಾರಿಗೆ ಪೂರ್ಣ ಯುಡಿಎಫ್ ಸಂಪುಟ ಏಕಕಾಲದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭ ಇದಾಗಿದೆ.ಕಾಂಗ್ರೆಸ್‌ನ 11 ಶಾಸಕರಿಗೆ ಸಂಪುಟದಲ್ಲಿ ಸ್ಥಾನಇನ್ನೂ ಮುಖ್ಯಮಂತ್ರಿ ಹುದ್ದೆಯೊಂದಿಗೆ 11 ಮಂದಿ ಕಾಂಗ್ರೆಸ್‌ ಶಾಸಕರು ಕೇರಳ ನೂತನ ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇದರೊಂದಿಗೆ ಭಾರತೀಯ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ಐವರು,ಕೇರಳ ಕಾಂಗ್ರೆಸ್ (ಜೋಸೆಫ್), ಕ್ರಾಂತಿಕಾರಿ ಸಮಾಜವಾದಿ ಪಕ್ಷ (ಆರ್‌ಎಸ್‌ಪಿ), ಕೇರಳ ಕಾಂಗ್ರೆಸ್ (ಜಾಕೋಬ್) ಮತ್ತು ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷ (ಸಿಎಂಪಿ) ಗಳು ತಲಾ ಒಂದು ಸ್ಥಾನ ಪಡೆದಿವೆ.

ಸಚಿವರು ಯಾರ್ಯಾರು?ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್, ಕೆ ಮುರಳೀಧರನ್, ಎ ಪಿ ಅನಿಲ್ ಕುಮಾರ್, ಪಿ.ಸಿ ವಿಷ್ಣುನಾಧ್, ಬಿಂಧು ಕೃಷ್ಣ, ಎಂ ಲಿಜ್ಜು, ಟಿ ಸಿದ್ದಿಕ್, ರೋಜಿ ಎಂ. ಜಾನ್, ಕೆ.ಎ ತುಳಸಿ ಮತ್ತು ಒ.ಜೆ ಜನೀಶ್ ಕಾಂಗ್ರೆಸ್ ಸಚಿವರಾಗಿದ್ದಾರೆ. ಜೊತೆಗೆ ಪಿ.ಕೆ ಕುನ್ಹಾಲಿಕುಟ್ಟಿ, ಕೆ.ಎಂ ಶಾಜಿ, ಎನ್ ಶಂಸುದ್ದೀನ್, ಪಿ.ಕೆ ಬಶೀರ್ ಮತ್ತು ವಿ.ಇ ಅಬ್ದುಲ್ ಗಫೂರ್. ಮಾನ್ಸ್ ಜೋಸೆಫ್ (ಕೆಸಿ-ಜೋಸೆಫ್), ಅನೂಪ್ ಜೇಕಬ್ (ಕೆಸಿ-ಜೇಕಬ್), ಶಿಬು ಬೇಬಿ ಜಾನ್ (ಆರ್‌ಎಸ್‌ಪಿ) ಮತ್ತು ಸಿಪಿ ಜಾನ್ (ಸಿಎಂಪಿ) ಇತರ ಸಚಿವರು ನಾಮನಿರ್ದೇಶನಗೊಂಡಿದ್ದಾರೆ.ಡಿಕೆಶಿ, ಖರ್ಗೆ ಕೇರಳಕ್ಕೆಇಂದು ಪ್ರಮಾಣ ಸ್ವೀಕಾರ ಸಮಾರಂಭದ ಹಿನ್ನೆಲೆ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಎಐಸಿಸಿ ಅಧ್ಯಕ್ಷ ಕೇರಳಕ್ಕೆ ತೆರಳಿದ್ದಾರೆ.

Related posts

ಇಂಜಿನಿಯರಿಂಗ್ ವಿಭಾಗಗಳಲ್ಲಿ ಕೃತಕ ಬುದ್ಧಿಮತ್ತೆ : ಭವಿಷ್ಯದ ಇಂಜಿನಿಯರ್ಗಳಿಗೆ ಅತ್ಯಾವಶ್ಯಕ ಕೌಶಲ್ಯ ಬಂಟಕಲ್ ತಾಂತ್ರಿಕ ಕಾಲೇಜು ಡೀನ್, ಡಾ. ಸುದರ್ಶನ ರಾವ್ ಕೆ. ರವರ ವಿಶೇಷ ಲೇಖನ;

Voiceoftulunadu

ತುಂಬೆ :ಆಶೀರ್ವಾದ್ ಸೇವಾ ಸಂಘ ಅಶ್ರಯದಲ್ಲಿ “ಕೆಸರ್ಡ್ ಒಂಜಿ ದಿನ” ಕಾರ್ಯಕ್ರಮ;

Voiceoftulunadu

ಮತ್ತ್ವಗಂಧ ಎಕ್ಸ್‌ಪ್ರೆಸ್ ರೈಲು ಮೂಲಕ ಮಂಗಳೂರುಗೆ ಬಂದಿದ್ದ ಅಂಗವಿಕಲ ಅನಾಮಧೇಯ ವ್ಯಕ್ತಿಯ ಶವ ಪತ್ತೆ – ವಾರಸುದಾರರ ಮಾಹಿತಿಗೆ ಮನವಿ;

Voiceoftulunadu

Leave a Comment