27 C
ಮಂಗಳೂರು
July 6, 2026
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಡಾ. ಜಿ.ಪರಮೇಶ್ವರ್ ಅವರು ತಮ್ಮ ವ್ಯಕ್ತಿತ್ವದಿಂದ ಶ್ರೀಮಂತರು : ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ;

ವರದಿ ಚಿತ್ರ ರೋಶನ್ ನೆಲ್ಲಿಗುಡ್ಡೆ

ಬೆಂಗಳೂರು : ರಾಜಕೀಯವಾಗಿ ತಮ್ಮ ವೈಯುಕ್ತಿಕ ಸಾಮರ್ಥ್ಯದ ಜೊತೆಗೆ ಧಾರ್ಮಿಕ ನಂಬಿಕೆಯ ಶಕ್ತಿಯ ಬಲದಿಂದ ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿಯಾಗಿರುವ ಡಾ.ಜಿ.ಪರಮೇಶ್ವರ್ ಅವರು ಉನ್ನತ ಸ್ಥಾನಮಾನದಲ್ಲಿದ್ದರೂ ಸಹ ಸರಳತೆಯ ಜೀವನ ಹಾಗೂ ನಿಷ್ಠೆ, ಪ್ರಾಮಾಣಿಕತೆಯಿಂದ ಅವರು ತಮ್ಮ ವ್ಯಕ್ತಿತ್ವದಿಂದ ಶ್ರೀಮಂತರಾಗಿದ್ದಾರೆ. ಶೈಕ್ಷಣಿಕವಾಗಿ ಶಿಕ್ಷಣ ತಜ್ಞರಾಗಿ, ಸಾಮಾಜಿಕ ಚಿಂತಕರಾಗಿ ತಾನು ಬೆಳೆದು ಸರ್ವಧರ್ಮದ ಸಮಾಜವೂ ಬೆಳೆಯಬೇಕೆಂಬ ಉದಾತ್ತ ಮನೋಭಾವನೆಯ ಅಪರೂಪದ ರಾಜಕಾರಣಿ ಎಂದು ಆಧ್ಯಾತ್ಮಿಕ ವಿಶ್ವ ಗುರುಗಳಾದ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ನುಡಿದರು. ಅವರು ಬೆಂಗಳೂರಿನಲ್ಲಿ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ಅವರನ್ನು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದ ಅಭಿಮಾನಿಗಳ ಪರವಾಗಿ ವಿಶೇಷವಾಗಿ ಸನ್ಮಾನಿಸಿ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಸನ್ಮಾನಕ್ಕೆ ಪ್ರತಿಕ್ರಿಯಿಸಿ ಡಾ.ಜಿ.ಪರಮೇಶ್ವರ್ ಮಾತನಾಡಿ, ಜೀವನದಲ್ಲಿ ಎಷ್ಟೇ ದೊಡ್ಡ ಸ್ಥಾನಮಾನ ಸಿಕ್ಕರೂ ಸಹ ನಮ್ಮ ಕಾರ್ಯಪ್ರವೃತ್ತಿಯಲ್ಲಿ ಬದಲಾವಣೆಯಿಲ್ಲ, ನಮ್ಮ ಜವಬ್ದಾರಿಯನ್ನು ಅರಿತು ನಮ್ಮ ಕೆಲಸವನ್ನು ಜನರಪರವಾಗಿ ಮಾಡುವುದೇ ನಮ್ಮ ಮೊದಲ ಆದ್ಯತೆ. ಧಾರ್ಮಿಕ ಚಿಂತನೆಯಲ್ಲಿ ಸದಾ ಮಾರ್ಗದರ್ಶನ ನೀಡುತ್ತಾ ಬಂದಿರುವ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಸೇವೆಯನ್ನು ಹತ್ತಿರದಿಂದ ಕಂಡಿದ್ದೇನೆ, ಅವರ ಸಮಾಜ ಕಾರ್ಯವೂ ವಿಭಿನ್ನವಾಗಿ ಅರ್ಹರನ್ನು ತಲುಪುತ್ತಿದೆ ಎಂದರು.

ಸಂದರ್ಭದಲ್ಲಿ ಡಾ.ಜಿ.ಪರಮೇಶ್ವರ್ ಹಾಗೂ ಶ್ರೀಮತಿ ಕನ್ನಿಕಾ ಪರಮೇಶ್ವರ್ ಅವರಿಗೆ ಪ್ರಭಾವಳಿ ಸಹಿತ ತಿರುಪತಿ ದೇವರ ಮೂಲ ವಿಗ್ರಹದ ಜೊತೆಗೆ ವಿಶೇಷ ಪ್ರಸಾದವನ್ನು ಸ್ವಾಮೀಜಿಯವರು ನೀಡಿ ದಂಪತಿಯನ್ನು ಆಶೀರ್ವದಿಸಿದರು. ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದ ನಿರ್ದೇಶಕಿ ರಜನಿ ಸಿ. ಭಟ್, ಆಶ್ರಮದ ಸೇವಾ ಚಟುವಟಿಕೆಯ ಮುಖ್ಯಸ್ಥ ರಾಹುಲ್ ಸಿ. ಭಟ್, ಕಾನೂನು ಸಲಹೆಗಾರರಾದ ರೋಶಿನಿ ರಾಘವ್ ಸೂರ್ಯ, ಆಶ್ರಮದ ಗೌರವ ಸಲಹೆಗಾರರಾದ ರಾಘವ ಸೂರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸೇವಾ ಕಾರ್ಯಕ್ರಮದ ಸಂಯೋಜಕ ನರೇಂದ್ರ ಕೆರೆಕಾಡು ಸ್ವಾಗತಿಸಿದರು, ಆಶ್ರಮದ ಸಂಚಾಲಕ ಪುನೀತ್ ಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

Related posts

ಫೋಟೋ, ವೀಡಿಯೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆ,ಉಪಾಧ್ಯಕ್ಷರಾಗಿ ಎಸ್ ರಘು, ಕಾರ್ಯದರ್ಶಿ ಪ್ರದೀಪ್, ಕೋಶಾಧಿಕಾರಿಯಾಗಿ ಪ್ರಸನ್ನ ಕುಲಕರ್ಣಿ ಆಯ್ಕೆ:

voiceoftulunadu

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ : ಪಡುಬಿದ್ರಿ ರೋಟರಿ ಕ್ಲಬ್ಬಿನ ನಿಕಟ ಪೂರ್ವ ಅಧ್ಯಕ್ಷ ಹಾಗೂ ಪಡುಬಿದ್ರಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಮಹಮ್ಮದ್ ನಿಯಾಜ್;

Voiceoftulunadu

ಗಾಯಕರಿಗೆ ವೇದಿಕೆ ನಿರ್ಮಿಸೋಣ ; ಭುವನಾಭಿರಾಮ ಉಡುಪ :

voiceoftulunadu

Leave a Comment