27 C
ಮಂಗಳೂರು
July 6, 2026
ಆರೋಗ್ಯಕಲೆ/ಸಾಹಿತ್ಯಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ಸಿನಿಮಾ

ತೀರ್ಥಹಳ್ಳಿ ಮೂಲದ ಬರಹಗಾರರಾದ ಜಿ ಟಿ ನಂದೀಶ್ ಹೃದಯಾಘಾತದಿಂದ ನಿಧನ:

ತೀರ್ಥಹಳ್ಳಿ: ಚಲನಚಿತ್ರ ಕಥೆಗಾರ ಹಾಗೂ ಬರಹಗಾರರಾದ ಜಿ ಟಿ ನಂದೀಶ್ (37 ವರ್ಷ) ನಿನ್ನೆ ಹೃದಯಾಘಾತದಿಂದ ನಿಧನರಾದರು.

ತೀರ್ಥಹಳ್ಳಿಯ ಮಾಲೂರು ಮೂಲದವರಾದ ನಂದೀಶ್,ಕನ್ನಡದ ಹಲವು ಸಿನಿಮಾ ಹಾಗೂ ಜೀ ಕನ್ನಡದಲ್ಲಿ ಪ್ರಸಾರವಾಗಿದ್ದ ಪಾರು ಧಾರಾವಾಹಿ ಸೇರಿದಂತೆ ಇನ್ನೂ ಹಲವು ಸೀರಿಯಲ್ ಗಳಿಗೆ ಕಥೆಯನ್ನು ಬರೆದಿದ್ದರು. ನಿನ್ನೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಗ್ಯಾಸ್ಟ್ರಿಕ್ ಎಂದು ನೋವನ್ನು ನಿರ್ಲಕ್ಷ್ಯ ಮಾಡಿದ್ದು, ಆದರೆ ವಿಧಿ ಅವರ ಬದುಕನ್ನೇ ಕೊನೆಗಾಣಿಸಿತ್ತು.

ನಂದೀಶ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಹಲವು ಬಂಧು ಬಾಂಧವರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.

ನಂದೀಶ್ ನಿಧನಕ್ಕೆ ಹಲವು ನಟ ನಟಿಯರು , ನಿರ್ದೇಶಕರು, ಬರಹಗಾರರು ಸಂತಾಪ ವ್ಯಕ್ತಪಡಿಸಿದ್ದಾರೆ.

Related posts

ಡಾ. ಬಾಲಕೃಷ್ಣ ಮದ್ದೋಡಿಯವರಿಗೆ ಚಾಣಕ್ಯ ರಾಷ್ಟ್ರೀಯ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ 2026ಶಿಕ್ಷಣ, ಸಂಶೋಧನೆ, ಪರಿಸರ ಸಂರಕ್ಷಣೆ, ಸಮುದಾಯ ಅಭಿವೃದ್ಧಿ ಕೆಲಸಕ್ಕಾಗಿ ನೀಡುವ ಪ್ರಶಸ್ತಿ

voiceoftulunadu

ಕಾಪು ಶ್ರೀ ಹೊಸ ಮಾರಿಗುಡಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ;ಪ್ರಾಧಿಕಾರದ ಅಧ್ಯಕ್ಷರಿಗೆ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿಯಿಂದ  ಗೌರವ:

voiceoftulunadu

ತೆಂಕ ಎರ್ಮಾಳು ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಮಲ್ಲಿಕಾರವರಿಗೆ ಹಳೇ ವಿಧ್ಯಾರ್ಥಿ ಸಂಘದ ಸನ್ಮಾನ;

Voiceoftulunadu

Leave a Comment