September 5, 2026
Uncategorizedಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಲ್ಕಿ ಬಳಿಯ ಕೆರೆಕಾಡು ಅಕ್ಷಯ ಮಹಿಳಾ ಮಂಡಳಿಯಿಂದ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮಾಧವ ಶೆಟ್ಟಿಗಾರ್ ದಂಪತಿಯನ್ನು ಸನ್ಮಾನ : ತುಳುನಾಡಿನ ಆಹಾರ ಪದ್ಧತಿ ಶ್ರೇಷ್ಟ , ಅಮೂಲ್ಯ ಶೆಟ್ಟಿ ಕಟೀಲು;

ವರದಿ/ ಚಿತ್ರ: ರೋಶನ್ ನೆಲ್ಲಿಗುಡ್ಡೆ

ಮೂಲ್ಕಿ:ಆಟಿ ತಿಂಗಳಲ್ಲಿ ಹಿಂದಿನ ಜೀವನ ಶೈಲಿಯ ನೆನಪನ್ನು ಮಾಡಿಕೊಂಡು, ಇಂದಿನ ಯುವ ಪೀಳಿಗೆಗೆ ನಮ್ಮ ಸಂಸ್ಕೃತಿ ಆಚಾರ ವಿಚಾರಗಳನ್ನು ತಿಳಿಹೇಳಿ ಕೊಡುವ ಅನಿವಾರ್ಯತೆ ಇದೆ, ಇಂದು ಮಹಿಳೆಯರು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸದೃಢವಾಗಿ ಸಾಧನೆಯನ್ನು ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

ಜಗತ್ತಿಗೆ ಶ್ರೇಷ್ಠತೆಯನ್ನು ಸಾರಿದ ತುಳುನಾಡಿನ ಆಹಾರ ಪದ್ಧತಿಗಳ ಬಗ್ಗೆ ವಿಶೇಷ ಮಾಹಿತಿ ಪಡೆದುಕೊಳ್ಳುವ ಜವಬ್ದಾರಿ ಮಹಿಳೆಯರದ್ದಾಗಿದೆ ಎಂದು ಕಿನ್ನಿಗೋಳಿ ಇನ್ನರ್‌ವ್ಹೀಲ್ ಕ್ಲಬ್‌ನ ಅಧ್ಯಕ್ಷೆ ಅಮೂಲ್ಯ ಶೆಟ್ಟಿ ಕಟೀಲು ಹೇಳಿದರು. ಅವರು ಮೂಲ್ಕಿ ಬಳಿಯ ಕೆರೆಕಾಡು ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ಅಕ್ಷಯ ಮಹಿಳಾ ಮಂಡಳಿಯ ಸಂಯೋಜನೆಯಲ್ಲಿ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದ ಸಹಕಾರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಆಟಿ ತಿಂಗಳ ಮಾಹಿತಿ ನೀಡಿದರು.

ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದ ಅಧ್ಯಕ್ಷ ಪಿ.ಆರ್.ರಾಜೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಂದಿರದ ಪ್ರಧಾನ ಅರ್ಚಕ ರಾಘವೇಂದ್ರ ರಾವ್ ಕೆರೆಕಾಡು ಮಾತನಡಿದರು.ಸಾಮಾಜಿಕ ಧಾರ್ಮಿಕ ಕ್ಷೇತ್ರ ಹಾಗೂ ಕೈಮಗ್ಗದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮಾಧವ ಶೆಟ್ಟಿಗಾರ್ ಹಾಗೂ ದಮಯಂತಿ ದಂಪತಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ತ್ರಿವೇಣಿ ಕೆರೆಕಾಡು ಅವರನ್ನು ಸನ್ಮಾನಿಸಲಾಯಿತು.

ಅಕ್ಷಯ ಮಹಿಳಾ ಮಂಡಳಿಯ ಅಧ್ಯಕ್ಷೆ ಲಲಿತಾ ಭಾಸ್ಕರ ಶೆಟ್ಟಿಗಾರ್ ಅಧ್ಯಕ್ಷತೆಯನ್ನು ವಹಿಸಿದ್ದರು. ಚೇತನ್ ಶೆಟ್ಟಿಗಾರ್ ಪುನರೂರು ಸ್ವಾಗತಿಸಿದರು. ನವ್ಯಾ ಶೆಟ್ಟಿಗಾರ್ ಕೆರೆಕಾಡು ವಂದಿಸಿದರು. ಉಷಾ ನರೇಂದ್ರ ಕೆರೆಕಾಡು ನಿರೂಪಿಸಿದರು. ಸುಮಾರು ೩೫ ಪಾರಂಪರಿಕ ಆಹಾರ ಖಾದ್ಯಗಳಿಂದ ಊಟೋಪಚಾರ ನಡೆಸಲಾಯಿತು. ಸ್ಥಳೀಯ ಪ್ರತಿಭೆಗಳಿಂದ ತುಳು ಜಾನಪದ ನೃತ್ಯ ಕಾರ್ಯಕ್ರಮ ಪ್ರದರ್ಶನಗೊಂಡಿತು.

Related posts

ಉಜಿರೆಯ  ಎಸ್.ಡಿ.ಎಂ ಪದವಿಪೂರ್ವ ಕಾಲೇಜ್‌ನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಸಮಾರಂಭ ವಿದ್ಯಾಥಿಗಳು ಭವಿಷ್ಯದ ಬಗ್ಯೆ ಕನಸು ಕಂಡು ನನಸಾಗಿಸಬೇಕು : ಸೋನಿಯಾ ಯಶೋವರ್ಮ

Voiceoftulunadu

ಅಸಂಖ್ಯಾತ ಜೀವಗಳನ್ನು ಸ್ಪರ್ಶಿಸಿದ ಪುಣ್ಯಾತ್ಮ ಕಾಂತಾಡಿಗುತ್ತು ಉಗ್ಗ ಶೆಟ್ಟಿ ಚಿರಶಾಂತಿಯಲಿ;

Voiceoftulunadu

ಪ್ರಧಾನಿ ನರೇಂದ್ರ ಮೋದಿಯವರ 4,399 ದಿನಗಳ ಯಶಸ್ವಿ ಆಡಳಿತ ನಿರ್ವಹಣೆಯ ಹಿನ್ನೆಲೆ; ಬಿಜೆಪಿ ಮಂಗಳೂರು ನಗರ ಮಂಡಲದ ವತಿಯಿಂದ ಶ್ರೀ ಕ್ಷೇತ್ರ ಕದ್ರಿಯಲ್ಲಿ ವಿಶೇಷ ರಂಗ ಪೂಜೆ:

voiceoftulunadu

Leave a Comment