28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಸಂಧಾನದ ವೇಳೆ ಬೇಡಿಕೆ ಬದಲಾಯಿಸಿದ ರಾಹುಲ್ ಗಾಂಧಿ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆರೋಪ;

ವರದಿ /ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ

ನವದೆಹಲಿ: ದೆಹಲಿಯ ಪ್ರಧಾನಿ ಸರ್ಕಾರಿ ನಿವಾಸದ ಎದುರು ಇಂದು ಸಂಜೆ ದೊಡ್ಡ ಹೈಡ್ರಾಮಾ ನಡೆದಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಿನ್ನೆ ಸಿಜೆಪಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಕಾಂಗ್ರೆಸ್ ನಾಯಕರು (Congress Protest in Delhi) ಪ್ರಧಾನಿ ಮೋದಿ ನಿವಾಸದ ಹೊರಗೆ ಧರಣಿ ಸತ್ಯಾಗ್ರಹ ನಡೆಸಿದ್ದರು.

ಈ ವೇಳೆ ಸಂಧಾನ ಮಾತುಕತೆಗೆ ತೆರಳಿದ್ದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ರಾಹುಲ್ ಗಾಂಧಿ (Rahul Gandhi) ಮಾತುಕತೆಯ ವೇಳೆ ಯು-ಟರ್ನ್ ಹೊಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ನಾವು ಕೆಲವೇ ನಿಮಿಷಗಳಲ್ಲಿ ರಾಹುಲ್ ಗಾಂಧಿಯ ಬೇಡಿಕೆಗಳಿಗೆ ಒಪ್ಪಿಗೆ ನೀಡಿದ್ದೆವು. ಆದರೆ, ರಾಹುಲ್ ಗಾಂಧಿ ತಮ್ಮ ಬೇಡಿಕೆಗಳನ್ನು ಬದಲಾಯಿಸಿದರು ಎಂದು ಜಿತೇಂದ್ರ ಸಿಂಗ್ ಆರೋಪ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಧರಣಿ ಕುಳಿತಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಖಿಲೇಶ್ ಯಾದವ್ ಮುಂತಾದವರು ಒತ್ತಾಯಿಸಿದ್ದರು.

ಈ ವೇಳೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹಾಗೂ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ಪ್ರಧಾನಿ ನಿವಾಸದ ಬಳಿ ನಡೆಯುತ್ತಿದ್ದ ಧರಣಿಯ ಸ್ಥಳಕ್ಕೆ ತೆರಳಿ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿದರು. ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಕಾರಣ ಮತ್ತು ಪ್ರತಿಭಟನೆಗೆ ಸೂಕ್ತ ಸ್ಥಳವಲ್ಲದ ಕಾರಣದಿಂದ ಧರಣಿಯನ್ನು ಕೊನೆಗೊಳಿಸುವಂತೆ ಅವರು ರಾಹುಲ್ ಗಾಂಧಿಯವರಲ್ಲಿ ವಿನಂತಿ ಮಾಡಿದರು.

ಕೇಂದ್ರ ಸಚಿವರ ಆರೋಪವೇನು?:ತಮ್ಮ ಹಾಗೂ ರಾಹುಲ್ ಗಾಂಧಿ ನಡುವಿನ ಮಾತುಕತೆಯ ವೇಳೆ ಏನಾಯಿತೆಂಬುದರ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.ಆರಂಭದಲ್ಲಿ ರಾಹುಲ್ ಗಾಂಧಿ ನೀಟ್ (NEET) ಹಗರಣ ಹಾಗೂ ಅದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲು ಸರ್ಕಾರ ಒಪ್ಪಿಕೊಂಡರೆ ನಾನು ತಕ್ಷಣವೇ ಧರಣಿ ಹಿಂಪಡೆಯುತ್ತೇನೆ ಎಂದು ಷರತ್ತು ವಿಧಿಸಿದರು.

ಸರ್ಕಾರದ ಹಿರಿಯ ನಾಯಕರ ಅನುಮತಿ ಪಡೆದು, ಸಂಸತ್ತಿನಲ್ಲಿ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂಬ ಭರವಸೆಯನ್ನು ಅವರಿಗೆ ತಕ್ಷಣವೇ ನೀಡಲಾಯಿತು” ಎಂದು ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.ರಾಹುಲ್ ಗಾಂಧಿಯ ಮೊದಲ ಷರತ್ತಿಗೆ ಸರ್ಕಾರದ ಒಪ್ಪಿಗೆಯನ್ನು ತಲುಪಿಸಿದ ತಕ್ಷಣವೇ ರಾಹುಲ್ ಗಾಂಧಿ ತಮ್ಮ ಬೇಡಿಕೆಯನ್ನು ಬದಲಾಯಿಸಿದರು. ‘ನಾನು ಕೇವಲ ಚರ್ಚೆಗೆ ಒಪ್ಪುವುದಿಲ್ಲ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯಭರವಸೆಯೂ ಬೇಕು’ ಎಂದು ಹೊಸ ಬೇಡಿಕೆ ಮುಂದಿಟ್ಟರು.

ಈಗ ನನಗೆ ಎರಡು ಬೇಡಿಕೆಗಳಿವೆ. ಸಂಸತ್ತಿನಲ್ಲಿ ಚರ್ಚೆ ನಡೆಯಬೇಕು ಮತ್ತು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು’ ಎಂದರು. ಆಗ ನಾನು ಆರಂಭದಲ್ಲಿ ಚರ್ಚೆಯೊಂದನ್ನೇ ಕೋರಿ ಈಗ ಇಷ್ಟೊಂದು ಬೇಗ ಮಾತು ಬದಲಾಯಿಸುವುದು ನಿಮ್ಮಂತಹ ಹಿರಿಯ ನಾಯಕರಿಗೆ ಶೋಭೆಯಲ್ಲ ಎಂದು ಹೇಳಿದೆ. ಅದಕ್ಕೆ ರಾಹುಲ್ ಗಾಂಧಿ ಅದು ನನ್ನ ಹಕ್ಕು ಎಂದರು” ಎಂದು ಜಿತೇಂದ್ರ ಸಿಂಗ್ ವಿವರಿಸಿದ್ದಾರೆ.

ರಾಹುಲ್ ಗಾಂಧಿ ಅವರಂತಹ ಹಿರಿಯ ನಾಯಕ ಹಾಗೂ ವಿರೋಧ ಪಕ್ಷದ ನಾಯಕರು ಕೊಟ್ಟ ಮಾತಿನಿಂದ ಹಿಂಜರಿಯುವುದು ದುರದೃಷ್ಟಕರ ಮತ್ತು ಪ್ರಜಾಪ್ರಭುತ್ವದ ಪ್ರತಿಯೊಂದು ನಿಯಮಕ್ಕೂ ವಿರುದ್ಧವಾಗಿದೆ. ನೀಟ್ ಮತ್ತು ಅದಕ್ಕೆ ಸಂಬಂಧಿಸಿದ ಚಳವಳಿಯ ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ. ಕಾಂಗ್ರೆಸ್ ಪಕ್ಷವು ಈ ಗಂಭೀರ ವಿಷಯದ ಕುರಿತು ನಿಯಮಾವಳಿಗಳ ಪ್ರಕಾರ ಅಧಿಕೃತ ಚರ್ಚೆಗಾಗಿ ಈವರೆಗೆ ಯಾವುದೇ ನೋಟಿಸ್ ನೀಡಿಲ್ಲ. ರಾಹುಲ್ ಗಾಂಧಿ ಅವರ ಈ ನಡವಳಿಕೆಯು ಪ್ರಜಾಪ್ರಭುತ್ವದ ತತ್ವಗಳಿಗೆ ಸೂಕ್ತವಾದದ್ದಲ್ಲ.” ಎಂದು ಜಿತೇಂದ್ರ ಸಿಂಗ್ ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ:ಲೋಕ್ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಮಂತ್ರಿಗಳ ಅಧಿಕೃತ ನಿವಾಸದ ಸಮೀಪ ನಡೆಯುತ್ತಿದ್ದ ಧರಣಿ ಸ್ಥಳದಿಂದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿ ಹಲವು ಕಾಂಗ್ರೆಸ್ ಸಂಸದರು ಮತ್ತು ಪಕ್ಷದ ನಾಯಕರನ್ನು ದೆಹಲಿ ಪೊಲೀಸರು ಬಲವಂತವಾಗಿ ತೆರವುಗೊಳಿಸಿ ವಶಕ್ಕೆ ಪಡೆದರು. ನೀಟ್ ವಿವಾದ ಮತ್ತು ಇತರ ಪ್ರಶ್ನೆಪತ್ರಿಕೆ ಸೋರಿಕೆಗಳ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಸಂಸತ್ ಮೆರವಣಿಗೆಯ ಮೇಲೆ ಪೊಲೀಸರು ಕ್ರಮ ಕೈಗೊಂಡ ಮರುದಿನವೇ ಈ ಘಟನೆ ನಡೆದಿದೆ.

Related posts

ಪ್ರಧಾನಿ ನರೇಂದ್ರ ಮೋದಿಯವರ 4,399 ದಿನಗಳ ಯಶಸ್ವಿ ಆಡಳಿತ ನಿರ್ವಹಣೆಯ ಹಿನ್ನೆಲೆ; ಬಿಜೆಪಿ ಮಂಗಳೂರು ನಗರ ಮಂಡಲದ ವತಿಯಿಂದ ಶ್ರೀ ಕ್ಷೇತ್ರ ಕದ್ರಿಯಲ್ಲಿ ವಿಶೇಷ ರಂಗ ಪೂಜೆ:

voiceoftulunadu

ತುಳುನಾಡಿನ ಪ್ರಸಿದ್ಧ ದೈವ ನರ್ತಕ ಕುಕ್ಕೆಹಳ್ಳಿ ಸೋಮು ಪಾಣಾರ ದೈವಾದೀನ : ಜೂನ್.9ರಂದು ಕುಕ್ಕೆಹಳ್ಳಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರದ್ಧಾಂಜಲಿ ಸಭೆ ;

Voiceoftulunadu

ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ.ದಸರಾ ಸಮಿತಿಯ ಪೂರ್ವಬಾವಿ ಸಭೆಯಲ್ಲಿ ನಾಡೋಜ ಡಾ. ಜಿ. ಶಂಕರ್ ಹೇಳಿಕೆ;

Voiceoftulunadu

Leave a Comment