28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸಾಸ್ತಾನ ದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ : ಸುಮಾರು 18 ದಿನಗಳ ಕಾಲ ನಡೆಯಲಿರುವ ಪಾದಯಾತ್ರೆ;

ವರದಿ/ ಚಿತ್ರ: ಈ ಮೀಡಿಯಾ

ಸಾಸ್ತಾನ : ಶ್ರೀ ವೆಂಕಟೇಶ್ವರ ಸ್ವೀಟ್ಸ ಮಾಲೀಕರಾದ ಪಿ. ಲಕ್ಷ್ಮೀನಾರಾಯಣ ರಾವ್ ಅವರ ಸಾರಥ್ಯದಲ್ಲಿ ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ ಹಮ್ಮಿಕೊಳ್ಳಲಾಗಿರುವ ಬೃಹತ್ ಪಾದಯಾತ್ರೆ ಸತತ 16ನೇ ವರ್ಷಕ್ಕೆ ಕಾಲಿಟ್ಟಿದೆ.ಆಗಸ್ಟ್ 18ರಂದು ನಾಗರಪಂಚಮಿಯ ಮರುದಿನ ಪಾದಯಾತ್ರೆ ಆರಂಭಗೊಂಡಿದ್ದು, ಸುಮಾರು 18 ದಿನಗಳ ಕಾಲ ಪಾದಯಾತ್ರೆ ಮುಂದುವರಿಯಲಿದೆ.

200ಕ್ಕೂ ಅಧಿಕ ಭಕ್ತರು ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದು, ಭಕ್ತಿ ಮತ್ತು ಶ್ರದ್ಧೆಯಿಂದ ತಿರುಪತಿ ಕ್ಷೇತ್ರದತ್ತ ಹೆಜ್ಜೆ ಹಾಕುತ್ತಿದ್ದಾರೆ.ಪಾದಯಾತ್ರೆಯ ಸಂದರ್ಭದಲ್ಲಿ ಶ್ರೀ ವೆಂಕಟೇಶ್ವರಸ್ವಾಮಿಯ ನಾಮಸ್ಮರಣೆ, ಭಜನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಭಕ್ತರು ಸಾಗಲಿದ್ದಾರೆ.

ಪ್ರತಿ ವರ್ಷವೂ ಭಕ್ತರನ್ನು ಒಗ್ಗೂಡಿಸಿ ಯಶಸ್ವಿಯಾಗಿ ಪಾದಯಾತ್ರೆ ನಡೆಸಲಾಗುತ್ತಿದ್ದು, ಈ ಬಾರಿಯೂ 200ಕ್ಕೂ ಅಧಿಕ ಭಕ್ತರು ಪಾಲ್ಗೊಂಡಿರುವುದು ವಿಶೇಷವಾಗಿದೆ.

ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಪಾದಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಸಂಕಲ್ಪದೊಂದಿಗೆ ಭಕ್ತರು ಉತ್ಸಾಹದಿಂದ ಹೆಜ್ಜೆ ಹಾಕುತ್ತಿದ್ದಾರೆ.

Related posts

ಆಟಿ ಕೂಟಗಳಿಗೆ ಮೂಲ್ಕಿ ಯುವವಾಹಿನಿಯೇ ಪ್ರೇರಣೆ: ದಯಾನಂದ ಹೆಜ್ಜಾಡಿ;

Voiceoftulunadu

ಬಂಟ್ವಾಳ : ಬಿಲ್ಲವ ಮಹಿಳಾ ಸಮಿತಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ;

Voiceoftulunadu

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಹಣದ ದುರ್ಬಳಕೆ: ಕಾಪುವಿನಲ್ಲಿ ಕಾಂಗ್ರೆಸ್ ಜಾಥಾ, ಪ್ರತಿಭಟನಾ ಸಭೆಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆ;

Voiceoftulunadu

Leave a Comment