27 C
ಮಂಗಳೂರು
July 6, 2026
Uncategorizedರಾಜಕೀಯರಾಜ್ಯ/ದೇಶ

ಸಿ ಎಲ್ ಪಿ (CLP) ನೂತನ ನಾಯಕರಾಗಿ ಡಿ. ಕೆ. ಶಿವಕುಮಾರ್ ಆಯ್ಕೆ

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಆಯ್ಕೆ ಆಗಿದ್ದಾರೆ. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಹೆಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಡಾ. ಜಿ ಪರಮೇಶ್ವರ್ ಅನುಮೋದಿಸಿದರು. ಇದನ್ನು ಸಭೆಯು ಒಕ್ಕೊರಲಿನಿಂದ ಬೆಂಬಲಿಸಿತು.ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಘೋಷಿಸಿದರು.ಇದಕ್ಕೂ ಮೊದಲು ಸಭೆಯ ಆರಂಭದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ಪ್ರಕ್ರಿಯೆಯು ಸಿಎಂ ಸಿದ್ದರಾಮಯ್ಯ ಪ್ರಸ್ತಾವನೆಯೊಂದಿಗೆ ನಡೆಯಲಿದೆ ಎಂದು ಎಐಸಿಸಿ ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಪ್ರಕಟಿಸಿ, ಚಾಲನೆ ನೀಡಿದರು.ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ವಿಚಾರವನ್ನು ಎಐಸಿಸಿ ವಿವೇಚನೆಗೆ ಬಿಡಲಾಗಿದೆ ಎಂಬ ಒಂದು ಸಾಲಿನ ನಿರ್ಣಯವನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದರು. ಪರಮೇಶ್ವರ್ ನುಮೋದಿಸಿದರು. ಎಲ್ಲ ಶಾಸಕರು ಕೈ ಎತ್ತುವ ಮೂಲಕ ಇದನ್ನು ಬೆಂಬಲಿಸಿದರು.ನಂತರ 10 ನಿಮಿಷಗಳ ವಿರಾಮ ನೀಡಲಾಗಿದೆ ಎಂದು ಸುರ್ಜೆವಾಲ ಹೇಳಿದರು. ಸಿಎಂ ಸಿದ್ದರಾಮಯ್ಯ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಿಎಂ ಕೊಠಡಿಗೆ ತೆರಳಿದರು. ಅಲ್ಲಿಂದ ಸಮ್ಮೇಳನ ಸಭಾಂಗಣಕ್ಕೆ ಮೂವರು ವಾಪಸ್ಸು ಬಂದ ನಂತರ ಶಾಸಕಾಂಗ ಪಕ್ಷದ ನೂತನ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು.ನಂತರ ನೂತನ ನಾಯಕ ಡಿ ಕೆ ಶಿವಕುಮಾರ್ ನಿರ್ಗಮಿತ ನಾಯಕ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿಯ ಸೇವೆಯನ್ನು ಕೊಂಡಾಡುವ ನಿರ್ಣಯ ಮಂಡಿಸಿ, ಸಭೆಯ ಬೆಂಬಲ ಕೋರಿದರು. ಸಭೆ ಒಕ್ಕೊರಲಿನಿಂದ ಬೆಂಬಲಿಸಿತು.

Related posts

ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿಯಾಗಿ ಈಥನ್ ರಫಾಯೆಲ್ ತೌರೊ ನೇಮಕ

Voiceoftulunadu

ಅಯೋಧ್ಯೆ: ರಾಮಭಕ್ತರು ನೀಡಿದ ಬೆಳ್ಳಿ ಇಟ್ಟಿಗೆ, ಒಡವೆಗಳು ಸುರಕ್ಷಿತ; ಟ್ರಸ್ಟ್‌ನಿಂದ ಪತ್ರಿಕಾ ಪ್ರಕಟಣೆ;

Voiceoftulunadu

ಮೂಲ್ಕಿ ರೈಲ್ವೆ ನಿಲ್ದಾಣದಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಉಮಾನಾಥ ಕೋಟ್ಯಾನ್ ಅವರಿಂದ ನಿಲ್ದಾಣದ ಅಭಿವೃದ್ಧಿ ಕಾಮಗಾರಿಯ ವೀಕ್ಷಣೆ : ಕೊಂಕಣ ರೈಲ್ವೆ ನಷ್ಟದಲ್ಲಿದೆ ವಿಲೀನಗೊಳಿಸುವುದೇ ಸೂಕ್ತ ಪರಿಹಾರ : ಬ್ರಿಜೇಶ್ ಚೌಟ;

Voiceoftulunadu

Leave a Comment