July 7, 2026
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಸ್ಥಳೀಯ/ಪ್ರಾದೇಶಿಕ ಸುದ್ದಿ

ಹಿರಿಯಡಕ: ಸಂಜೀವಿನಿ ಒಕ್ಕೂಟದಲ್ಲಿ ₹23 ಲಕ್ಷ ವಂಚನೆ: ದಂಪತಿ ಬಂಧನ;

ವರದಿ /ಚಿತ್ರ: ವಿನೋದ್ ಶೆಟ್ಟಿ ಉಡುಪಿ

ಉಡುಪಿ: ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಪದ್ಮಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಲ್ಲಿ ₹23 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾಗಿದ್ದ ಸುಗಂಧಿ ಹಾಗೂ ಅವರ ಪತಿ ಸಂತೋಷ ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಸುಗಂಧಿ ಅವರು 2023ರಿಂದ 2025ರ ಅವಧಿಯಲ್ಲಿ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಹಣವನ್ನು ರಿಜಿಸ್ಟರ್‌ನಲ್ಲಿ ದಾಖಲಿಸಿದರೂ, ಅದನ್ನು ಒಕ್ಕೂಟದ ಬ್ಯಾಂಕ್ ಖಾತೆಗೆ ಜಮೆ ಮಾಡದೆ ದುರ್ಬಳಕೆ ಮಾಡಿಕೊಂಡಿದ್ದಾರೆ. ಅಲ್ಲದೆ, ವಿವಿಧ ಸಂಘಗಳ ಹೆಸರಿನಲ್ಲಿ ಒಕ್ಕೂಟದ ಚೆಕ್‌ಗಳಿಗೆ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯ ನಕಲಿ ಸಹಿ ಮಾಡಿ ಬ್ಯಾಂಕ್‌ನಿಂದ ಹಣ ಪಡೆದಿರುವ ಆರೋಪವೂ ಇದೆ.

ಲೆಕ್ಕಪರಿಶೋಧನೆ ವೇಳೆ ವಂಚನೆ ಬೆಳಕಿಗೆ ಬಾರದಂತೆ ಬೇರೆ ಬೇರೆ ಸಾಲದ ಖಾತೆ ಪುಸ್ತಕಗಳನ್ನು ನಿರ್ವಹಿಸಿ ಕಾರ್ಯಕಾರಿ ಸಮಿತಿಗೆ ಅನುಮಾನ ಬಾರದ ರೀತಿಯಲ್ಲಿ ದಾಖಲೆಗಳನ್ನು ಸೃಷ್ಟಿಸಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ಈ ಮೂಲಕ ಒಟ್ಟು ₹23 ಲಕ್ಷವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ.ಈ ಸಂಬಂಧ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರಾಜ್ಯ ಸಭಾ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ: ಉಪರಾಷ್ಟ್ರಪತಿ ಕಚೇರಿಯಲ್ಲಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ ಖರ್ಗೆ;

Voiceoftulunadu

ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ, ಸಮಾನ ಮನಸ್ಕ ತಂಡ ಉಡುಪಿ ಸಹಯೋಗದ ಕಾರ್ಯಕ್ರಮ;

Voiceoftulunadu

ಮುದರಂಗಡಿ ಜನನಿ ಮಹಾಸಂಘದ ಆಯೋಜನೆಯಲ್ಲಿ ಅಪ್ಪಂದಿರ ದಿನ ಆಚರಣೆ : ಮೂವರು ಹಿರಿಯರಿಗೆ ಪೇಟ ತೊಡಿಸಿ, ಗೌರವ ಸಲ್ಲಿಸಿ ಅಪ್ಪಂದಿರ ದಿನ ಆಚರಣೆ;

Voiceoftulunadu

Leave a Comment