28.5 C
ಮಂಗಳೂರು
September 4, 2026
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಸ್ಥಳೀಯ/ಪ್ರಾದೇಶಿಕ ಸುದ್ದಿ

ಹಿರಿಯಡಕ: ಸಂಜೀವಿನಿ ಒಕ್ಕೂಟದಲ್ಲಿ ₹23 ಲಕ್ಷ ವಂಚನೆ: ದಂಪತಿ ಬಂಧನ;

ವರದಿ /ಚಿತ್ರ: ವಿನೋದ್ ಶೆಟ್ಟಿ ಉಡುಪಿ

ಉಡುಪಿ: ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಪದ್ಮಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಲ್ಲಿ ₹23 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾಗಿದ್ದ ಸುಗಂಧಿ ಹಾಗೂ ಅವರ ಪತಿ ಸಂತೋಷ ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಸುಗಂಧಿ ಅವರು 2023ರಿಂದ 2025ರ ಅವಧಿಯಲ್ಲಿ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಹಣವನ್ನು ರಿಜಿಸ್ಟರ್‌ನಲ್ಲಿ ದಾಖಲಿಸಿದರೂ, ಅದನ್ನು ಒಕ್ಕೂಟದ ಬ್ಯಾಂಕ್ ಖಾತೆಗೆ ಜಮೆ ಮಾಡದೆ ದುರ್ಬಳಕೆ ಮಾಡಿಕೊಂಡಿದ್ದಾರೆ. ಅಲ್ಲದೆ, ವಿವಿಧ ಸಂಘಗಳ ಹೆಸರಿನಲ್ಲಿ ಒಕ್ಕೂಟದ ಚೆಕ್‌ಗಳಿಗೆ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯ ನಕಲಿ ಸಹಿ ಮಾಡಿ ಬ್ಯಾಂಕ್‌ನಿಂದ ಹಣ ಪಡೆದಿರುವ ಆರೋಪವೂ ಇದೆ.

ಲೆಕ್ಕಪರಿಶೋಧನೆ ವೇಳೆ ವಂಚನೆ ಬೆಳಕಿಗೆ ಬಾರದಂತೆ ಬೇರೆ ಬೇರೆ ಸಾಲದ ಖಾತೆ ಪುಸ್ತಕಗಳನ್ನು ನಿರ್ವಹಿಸಿ ಕಾರ್ಯಕಾರಿ ಸಮಿತಿಗೆ ಅನುಮಾನ ಬಾರದ ರೀತಿಯಲ್ಲಿ ದಾಖಲೆಗಳನ್ನು ಸೃಷ್ಟಿಸಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ಈ ಮೂಲಕ ಒಟ್ಟು ₹23 ಲಕ್ಷವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ.ಈ ಸಂಬಂಧ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ತುಳುನಾಡಿನ ಪ್ರಸಿದ್ಧ ದೈವ ನರ್ತಕ ಕುಕ್ಕೆಹಳ್ಳಿ ಸೋಮು ಪಾಣಾರ ದೈವಾದೀನ : ಜೂನ್.9ರಂದು ಕುಕ್ಕೆಹಳ್ಳಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರದ್ಧಾಂಜಲಿ ಸಭೆ ;

Voiceoftulunadu

ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ, ಸಮಾನ ಮನಸ್ಕ ತಂಡ ಉಡುಪಿ ಸಹಯೋಗದ ಕಾರ್ಯಕ್ರಮ;

Voiceoftulunadu

ಎಸ್‌ಐಆರ್‌ ಕುರಿತು ಗೊಂದಲ ಬೇಡ, ಜಾಗೃತಿ ಇರಲಿ: ವಕೀಲ ಇರ್ಷಾದ್‌ ಕಿನ್ನಿಗೋಳಿ;

Voiceoftulunadu

Leave a Comment