September 5, 2026
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ

ಕರಾವಳಿ ಹಾಗೂ ಮಲೆನಾಡಿನ ಟೂರಿಸಂ ಬ್ರಾಂಡ್ ಅಂಬಾಸಿಡರ್ ಆಗಿ ನಟ ರಿಷಬ್ ಶೆಟ್ಟಿ ನೇಮಕ:

ಕರಾವಳಿ ಹಾಗೂ ಮಲೆನಾಡಿನ ಪ್ರವಾಸೋದ್ಯಮದ ಬ್ರಾಂಡ್ ಅಂಬಾಸಿಡರ್ ಆಗಿ ನಟ ರಿಷಬ್ ಶೆಟ್ಟಿ (Rishab shetty) ಅವರನ್ನು ನೇಮಕ ಮಾಡಲಾಗಿದೆ.

ವಿಧಾನಸೌಧದಲ್ಲಿ ಶುಕ್ರವಾರ ಸಿಎಂ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕರಾವಳಿ ಪ್ರವಾಸೋದ್ಯಮದ ಕುರಿತಾಗಿ ಸಭೆ ನಡೆಸಲಾಯಿತು.ಸಭೆಯಲ್ಲಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದು, ಇನ್ನು 20 ದಿನಗಳಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ಚಿಂತನೆಯನ್ನು ನಡೆಸಲಾಗಿದೆ.

ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮದ ಅಭಿವೃದ್ಧಿಗೆ ಪ್ರತ್ಯೇಕ ನೀತಿ ರಚನೆ ಮಾಡಲಾಗಿದೆ. ಪ್ರತ್ಯೇಕ ನೀತಿ ರಚನೆಯ ಬಗ್ಗೆ ಮಂಗಳೂರು ಸಚಿವ ಸಂಪುಟದಲ್ಲಿ ಚರ್ಚಿಸಿ ಸಿಎಂ ಒಪ್ಪಿಗೆ ಪಡೆಯಲಿದ್ದಾರೆ. ಇದರ ಜೊತೆಗೆ ಆ ಭಾಗದಲ್ಲಿ ಹೋಂ ಸ್ಟೇಗಳಿಗೆ ತುಂಬಾ ನಿಯಮ ರೂಪಿಸಲಾಗುತ್ತಿದ್ದು, ಅವುಗಳನ್ನ ಸಡಿಲಗೊಳಿಸುವಂತೆ ಸೂಚಿಸಲು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.

Related posts

ಕೃತಕ ಬುದ್ಧಿಮತ್ತೆ (AI): ವೈದ್ಯರಿಗೆ ನೆರವಾಗುತ್ತಿರುವ ಬುದ್ಧಿವಂತ ಸಹಾಯಕಬಂಟಕಲ್ ಕಾಲೇಜಿನ ಕೃತಕ ಬುದ್ಧಿಮತ್ತೆ ಯಂತ್ರ ಅಧ್ಯಯನ ವಿಭಾಗ ಪ್ರೊ.ಡಾ. ವಂದನಾ ಭಟ್ ಲೇಖನ ;

Voiceoftulunadu

ಉಡುಪಿ ತಾಂಗದಗಡಿಯಲ್ಲಿ ನೂತನವಾಗಿ ಅಲುಗ್ಲೇಜ್(Aluglaze) ಉಪಿವಿಸಿ ವಿಂಡೋಸ್ ಹಾಗೂ ಡೋರ್ಸ್ ಶೋರೂಂನ ನೂತನ ಶಾಖೆ ಉದ್ಘಾಟನೆ ಸಮಾರಂಭ;

Voiceoftulunadu

ಉಡುಪಿ : ಕನ್ನಡ ಪುಸ್ತಕ ಪ್ರಾಧಿಕಾರದಿಂದ ಮನೆಗೊಂದು ಗ್ರಂಥಾಲಯ10 ಗ್ರಂಥಾಲಯಗಳ ಅನುಷ್ಠಾನ ಕಾರ್ಯಕ್ರಮ;

Voiceoftulunadu

Leave a Comment