28.5 C
ಮಂಗಳೂರು
September 4, 2026
ಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕಂಬಳಕ್ಕೆ ವಿಶೇಷ ಸ್ಥಾನಮಾನ: ಸಿಎಂ ಡಿಕೆಶಿ ವಾರ್ಷಿಕ 5 ಕೋಟಿ ಅನುದಾನ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಭರವಸೆ ;

ವರದಿ ಚಿತ್ರ ಇ ಮೀಡಿಯಾ

ಬೆಳಪು: ರಾಜ್ಯ ಸರಕಾರ ಕಂಬಳಕ್ಕೆ ರಾಜ್ಯ ಮಾನ್ಯತೆ ನೀಡಿದ್ದು ಮಾನ್ಯ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರು ಕಂಬಳ ಆಯೋಜನೆಗೆ ಪ್ರತಿವರ್ಷ ಬಜೆಟ್‌ನಲ್ಲಿ ೫ ಕೋಟಿ ಅನುದಾನ ನೀಡುವ ಭರವಸೆ ನೀಡಿದ್ದಾರೆಂದು ರಾಜ್ಯ ಕಂಬಳ ಅಸೋಸಿಯೇಶನ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ

ಪ್ರಥಮ ಸಂಪುಟ ಸಭೆಯಲ್ಲಿ ಕಂಬಳಕ್ಕೆ ವಿಶೇಷ ಸಹಕಾರ ಹಾಗೂ ರಾಜ್ಯ ಕಂಬಳ ಅಸೋಸಿಯೇಶನ್ ಹೆಚ್ಚಿನ ಅಧಿಕಾರ ಮತ್ತು ಅನುದಾನ ನೀಡುವ ಭರವಸೆ ನೀಡಿದ್ದಾರೆ. ಮುಖ್ಯ ಮಂತ್ರಿಯವರು ಕಂಬಳವನ್ನು ಮೈಸೂರು ದಸರಾದಲ್ಲಿ ನಡೆಸುವ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದು, ಕೆ.ಎಮ್.ಎಫ್ ಪ್ರಾಯೋಜಕತ್ವದಲ್ಲಿ ಕಂಬಳ ನಡೆಸಿ ರೈತರಿಗೆ ಪ್ರೋತ್ಸಾಹ ಮತ್ತು ಪ್ರಚಾರ ನೀಡುವ ಯೋಜನೆ ರೂಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ ಎನ್ನಲಾಗಿದೆ.

ಕಂಬಳಕ್ಕೆ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ, ಪ್ರವಾಸೋದ್ಯಮ ಇಲಾಖೆಯ ಮೂಲಕ ದೊರಕುವ ಸವಲತ್ತುಗಳನ್ನು ಸರಕಾರ ಒದಗಿಸುವಂತೆ, ಕಂಬಳ ಭವನ ನಿರ್ಮಾಣಕ್ಕೆ ಸರಕಾರಿ ಜಾಗ ಮಂಜೂರಾತಿ ಮತ್ತು ತರಬೇತು ಕೇಂದ್ರ ಸ್ಥಾಪನೆಗೆ ಕ್ರೀಡಾ ಇಲಾಖೆ ಸಹಭಾಗಿತ್ವ ಹಾಗೂ ರಾಜ್ಯ ಕಂಬಳ ಅಸೋಸಿಯೇಶನ್‌ಗೆ ವಿಶೇಷ ಸ್ಥಾನಮಾನ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳು ಸಹಮತ ವ್ಯಕ್ತಪಡಿಸಿದ್ದಾರೆ.

ಡಾ. ದೇವಿಪ್ರಸಾದ್‌ ಶೆಟ್ಟಿಯವರು ಸಿಎಂ ಡಿಕೆಶಿಯವರನ್ನು ಭೇಟಿ ಮಾಡಿ, ಕಂಬಳಾಭಿಮಾನಿಗಳ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಕರಾವಳಿಯ ಕಂಬಳ ಕ್ರೀಡೆಗೆ ವಿಶೇಷ ಸಹಕಾರ ನೀಡುವ ಬಗ್ಗೆ ಮನವಿ ನೀಡಲಾಗಿದ್ದು, ಕಂಬಳಕ್ಕೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆಂದು ರಾಜ್ಯ ಕಂಬಳ ಅಸೋಸಿಯೇಶನ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.

Related posts

ಸರ್ಕಾರಿ ಶಾಲೆಗಳಲ್ಲಿ ಇನ್ನು ಮುಂದೆ ಚಿತ್ರೀಕರಣಕ್ಕೆ ನಿಷೇಧ

Voiceoftulunadu

ಸುಗ್ಗಿ ಸೌಹಾರ್ದ ಸಹಕಾರಿ ಕಂಕನಾಡಿ ಇದರ 13ನೇ ವಾರ್ಷಿಕ ಮಹಾಸಭೆ: ಎಪೌಂರಿಯಂ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಸಿಟಿ ಚರ್ಚ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ;

Voiceoftulunadu

ಪಡುಬಿದ್ರಿ ಯುವವಾಹಿನಿ : ಪದಗ್ರಹಣ, ಪ್ರತಿಭಾ ಪುರಸ್ಕಾರ, ವಿದ್ಯಾ ನಿಧಿ ವಿತರಣೆ , ನೂತನ ಅಧ್ಯಕ್ಷ ನಿಖಿಲ್ ಪೂಜಾರಿ ಮತ್ತವರ ತಂಡದಿಂದ ಅಧಿಕಾರ ಸ್ವೀಕಾರ ;

Voiceoftulunadu

Leave a Comment