27 C
ಮಂಗಳೂರು
July 6, 2026
Uncategorizedಕ್ರೈಮ್ಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಉದ್ಯಾವರ ಪಾಪನಾಶಿನಿ ಸೇತುವೆಯಿಂದ ಹಾರಿ ಯುವಕ ಆತ್ಮಹತ್ಯೆ ಮಂಗಳವಾರ ಸಂಜೆ ಮೃತದೇಹ ಪತ್ತೆ;

ವರದಿ/ ಚಿತ್ರ: ಇ ಮೀಡಿಯಾ

ಉದ್ಯಾವರ : ಉದ್ಯಾವರ ಪಾಪನಾಶಿನಿ ಸೇತುವೆಯಿಂದ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೃತದೇಹ ಮಂಗಳವಾರ ಪತ್ತೆಯಾಗಿದೆ.ಮೃತ ಯುವಕ ಉದ್ಯಾವರ ಪಿತ್ರೋಡಿಯ ನಿವಾಸಿ ಹರ್ಷಿತ್ ಶೆಟ್ಟಿ (28) ಎಂದು ಗುರುತಿಸಲಾಗಿದೆ.ಮೃತ ಹರ್ಷಿತ್ ಮಲ್ಪೆಯ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಉದ್ಯಾವರ ಪಾಪನಾಶಿನಿ ಸೇತುವೆಯ ಬಳಿ ದ್ವಿಚಕ್ರ ವಾಹನವನ್ನಿಟ್ಟು ನದಿಗೆ ಹಾರಿ ಆತ್ಮಹತ್ಯೆಮಾಡಿಕೊಂಡಿದ್ದಾನೆ.

ಮೃತ ಹರ್ಷಿತ್ ಮನೆಯಲ್ಲಿ ಸೋಮವಾರ ರಾತ್ರಿ ಊಟ ಮಾಡಿ 10 ಗಂಟೆಗೆ ಮಲಗಿದ್ದನು. ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಮನೆಯವರು ನೋಡಿದಾಗ ಆತನು ಮನೆಯಲ್ಲಿರಲಿಲ್ಲ. ಆತನ ಮೊಬೈಲ್ ಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಮನೆಯವರು ಮತ್ತು ಹುಡುಕಾಡಿದಾಗ ದ್ವಿಚಕ್ರ -ಮಂಗಳೂರು ಕಡೆ ಸಾಗುವ ಉದ್ಯಾವರ ಸೇತುವೆಯ ಬಳಿ ಪತ್ತೆಯಾಗಿತ್ತು.

ಮಿತ್ರರು ಉಡುಪಿಯುವಕನ ಪತ್ತೆಗಾಗಿ ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆ ಸಹಿತ ಹಲವರು ನದಿಯಲ್ಲಿ ಹುಡುಕಾಟ ನಡೆಸಿದ್ದರು. ಸಂಜೆ ಮೃತ ಹರ್ಷಿತ್ ನ ಮೃತದೇಹ ಪತ್ತೆ ಆಗಿದೆ.ಉದ್ಯಾವರದ ರಮೇಶ್ ಮತ್ತು ಪ್ರಮೋದಿನಿ ಶೆಟ್ಟಿ ಪುತ್ರನಾಗಿರುವ ಇವರು, ಇಬ್ಬರು ಸಹೋದರರನ್ನು ಅಗಲಿದ್ದಾರೆ.ಮೃತರ ಅಣ್ಣ ಜಿತೇಶ್ ಶೆಟ್ಟಿ ನೀಡಿದ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಈ ಸಲನೂ ಕಪ್ ನಮ್ಧೇ! ಗೆದ್ದ RCB ಗೆ ಸಿಕ್ಕ ಬಹುಮಾನ ಎಷ್ಟು?

Voiceoftulunadu

ಅಸಂಖ್ಯಾತ ಜೀವಗಳನ್ನು ಸ್ಪರ್ಶಿಸಿದ ಪುಣ್ಯಾತ್ಮ ಕಾಂತಾಡಿಗುತ್ತು ಉಗ್ಗ ಶೆಟ್ಟಿ ಚಿರಶಾಂತಿಯಲಿ;

Voiceoftulunadu

ಉಡುಪಿ: ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರವಿಶ್ವ ಪತ್ರಿಕಾ ಪುರಸ್ಕಾರ: ಬಾಲಕೃಷ್ಣ ಪೂಜಾರಿ ಉಚ್ಚಿಲ, ಶಶಿಧರ ಮಾಸ್ತಿಬೈಲು, ರಾಮ್ ಅಜೆಕಾರ್;

Voiceoftulunadu

Leave a Comment