27 C
ಮಂಗಳೂರು
July 6, 2026
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀ ಕ್ಷೇತ್ರ ಶಂಕರಪುರ: ಉಸಿರಿಗಾಗಿ ಹಸಿರು ಅಭಿಯಾನಕ್ಕೆ ಚಾಲನೆ:ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಕ್ಷೇತ್ರ ಶಂಕರಪುರ ಧರ್ಮಪೀಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ ಗುರೂಜಿ;

ಶಂಕರಪುರ; ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ವತಿಯಿಂದ ಉಸಿರಿಗಾಗಿ ಹಸಿರು ಅಭಿಯಾನ ಕಾರ್ಯಕ್ರಮ ಗುರವಾರ ನೆ ರವೇರಿತು.

ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಶಂಕರಪುರ ಏಕ ಜಾತಿ ಧರ್ಮಪೀಠದ ಪೀಠಾಧೀಶ್ವರ ಸಾಯಿ ಈಶ್ವರ ಗುರೂಜಿ ಉದ್ಘಾಟಿಸಿರು.

ಈ ಸಂದರ್ಭ ಶ್ರೀ ಸಾಯಿ ಈಶ್ವರ ಗುರೂಜಿ ಮಾತನಾಡಿ, ಇಂದು ಪ್ರಕೃತಿ ಹಲವಾರು ವೈರುಧ್ಯ ಗಳಿಂದ ಕೂಡಿದೆ. ಮಳೆಗಾಲದಲ್ಲಿ ಸರಿಯಾಗಿ ಮಳೆ ಬರುತ್ತಿಲ್ಲ. ಇದಕ್ಕೆಲ್ಲ ಕಾರಣ

ಪ್ರಕೃತಿಯ ನಾಶ. ಈ ನಿಟ್ಟಿನಲ್ಲಿ ಉಸಿರಿಗಾಗಿ ಹಸಿರು ಅಭಿಯಾನ ಕ್ಷೇತ್ರದ ವತಿಯಿಂದ ಪ್ರಾರಂಭಿಸಲಾಗಿದೆ. ಪ್ರತಿಯೊಬ್ಬರೂ ವರ್ಷಕ್ಕೆ ಕನಿಷ್ಠ ಒಂದು ಗಿಡವನಾದರೂ ನೆಟ್ಟು ಬೆಳೆಸುವ ಕಾರ್ಯ ನಡೆಯಬೇಕಾಗಿದೆ ಎಂದಅವರು, ಮುಂದಿನ ದಿನಗಳಲ್ಲಿ ಈ ಅಭಿಯಾನ ರಾಜ್ಯವಾಪಿ ನಡೆಯಲಿದೆ ಎಂದರು.

ಮುಖ್ಯ ಅತಿಥಿ ಸಮಾಜಕಾರ್ಯ ಉಪನ್ಯಾಸಕ ಡಾ. ಗಣೇಶ್ ಪ್ರಸಾದ್ ಜಿ ನಾಯಕ್ ಗಿಡಗಳನ್ನು ವಿತರಿಸಿ ಮಾತನಾಡಿ, ಪ್ರಕೃತಿಯನ್ನು ಉಳಿಸಿದರೆ ಮಾತ್ರ ಜೀವಸಂಕುಲ ಉಳಿಯಬಹುದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಿಡ ನೆಟ್ಟು

ಬೆಳೆಸುವ ಕಾರ್ಯ ಮಾಡಬೇಕು. ಶ್ರೀ ಕ್ಷೇತ್ರದ ವತಿಯಿಂದ ನಡೆಯುವ ಈ ಯೋಜನೆ ಅಪೂರ್ವವಾಗಿದೆ ಎಂದರು.

ವೇದಿಕೆಯಲ್ಲಿ ಮಂದಿರದ ಟ್ರಸ್ಟಿ ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ರಾಮಪ್ಪ ಪೂಜಾರಿ ಸಂತೆಕಟ್ಟೆ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಭಕ್ತರಿಗೆ ವಿವಿಧ ಜಾತಿಯ ಗಿಡಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಸಂಯೋಜಕ, ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿ, ವಂದಿಸಿದರು.

Related posts

ಕೃತಕ ಬುದ್ಧಿ ಮತ್ತೆ ಬಳಸಿ ಮೂತ್ರನಾಳದ ಸೊಂಕು ಪತ್ತೆ ಹಚ್ಚುವ ವ್ಯವಸ್ಥೆಯ ಅಭಿವೃದ್ಧಿ ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳ ಸಾಧನೆ;

Voiceoftulunadu

ಜಿ ಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆಯಿಂದ ವಯೋವಂದನ ಆತಿಥ್ಯ ಗೃಹ ಯೋಜನೆವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್;

Voiceoftulunadu

ಮಿಫ್ 2026 ಸಮಾರೋಪ ಸಮಾರಂಭದಲ್ಲಿ ಚಲನಚಿತ್ರ ನಿರ್ಮಾಣದಲ್ಲಿ ಎಐ ಬಳಕೆ ಜವಾಬ್ದಾರಿಯುತವಾಗಿರಬೇಕು: ರಾಜ್ಯಪಾಲರ ಕರೆ;

Voiceoftulunadu

Leave a Comment