27 C
ಮಂಗಳೂರು
July 6, 2026
Uncategorizedಕ್ರೈಮ್ಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕಟಪಾಡಿ : ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿ ಹಣ ನೀಡದೆ ಪರಾರಿಯಾದ ಕಾರು ಚಾಲಕ ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ಸ್ ಕಾರಿನಲ್ಲಿ ಬಂದ ಮೂವರು ಯುವಕರು;

ವರದಿ /ಚಿತ್ರ:ಇ ಮೀಡಿಯಾ

ಕಾಪು : ಕಾರು ಚಾಲಕ ಪುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ನೀಡದೆ ಪರಾರಿಯಾದ ಘಟನೆ ಕಾಪು ತಾಲೂಕಿನ ಶಂಕರಪುರದ ಸುಭಾಷ್ ನಗರದಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ನಲ್ಲಿ ಘಟಿಸಿದೆ.

ಮೂವರು ಯುವಕರು ಸುಭಾಷ್ ನಗರದಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ಗೆ ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ಸ್ ಕಾರಿನಲ್ಲಿ ಆಗಮಿಸಿ, ಫುಲ್ ಟ್ಯಾಂಕ್ ಡೀಸೆಲ್ ತುಂಬಿಸುವಂತೆ ಸಿಬ್ಬಂದಿಗೆ ತಿಳಿಸಿದ್ದರು.ಸಿಬ್ಬಂದಿ ಒಟ್ಟು 4,711 ರೂ. ಮೌಲ್ಯದ ಡೀಸೆಲ್ ತುಂಬಿಸಿದ್ದಾರೆ. ಬಳಿಕ ಬಿಲ್ ಮಾಡುವಂತೆ ಹೇಳಿ, ಯಾವುದೇ ಹಣ ಪಾವತಿಸದೆ ಕಾರನ್ನು ಅತಿ ವೇಗದಲ್ಲಿ ಚಲಾಯಿಸಿಕೊಂಡು ಪರಾರಿಯಾಗಿದ್ದಾರೆ.ಕಾರಿನೊಳಗಿದ್ದ ಮೂವರು ಯುವಕರು ಮಾತನಾಡುತ್ತಿದ್ದರು ಎಂದು ಸಿಬ್ಬಂದಿ ಮಾಹಿತಿ ನೀಡಿದ್ದರು.

ತುಳು ಭಾಷೆಯನ್ನು ಸರಾಗವಾಗಿಯುವಕರು ಮದ್ಯಪಾನ ಮಾಡಿದ್ದಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, టింటో ಗ್ಲಾಸ್ಅಳವಡಿಸಿದ್ದ ಕಾರಿನೊಳಗೆ ಮದ್ಯದ ಬಾಟಲಿ ಇದ್ದುದಾಗಿ ಸಿಬ್ಬಂದಿ ತಿಳಿಸಿದ್ದಾರೆ.ಸಿಸಿಟಿವಿ ದೃಶ್ಯಗಳಲ್ಲಿ ಕಾರಿನ ನೋಂದಣಿ ಸಂಖ್ಯೆ ಸ್ಪಷ್ಟವಾಗಿ ಕಾಣಿಸದ ಕಾರಣ ವಾಹನದ ಗುರುತು ಪತ್ತೆ ಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಈ ಕುರಿತು ಪೆಟ್ರೋಲ್ ಬಂಕ್ ಸಿಬ್ಬಂದಿ ಶಿರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Related posts

ಅದಮಾರು: ವಿದ್ಯಾರ್ಥಿ ವೇತನ, ಸಹಾಯ ಧನ ವಿತರಣೆ : ವಿದ್ಯಾರ್ಥಿ ವೇತನ ಹಾಗೂ ಸಹಾಯಧನ ನೀಡಿದ ಆದರ್ಶ ಸಂಘಗಳ ಒಕ್ಕೂಟ;

Voiceoftulunadu

ಯುವವಾಹಿನಿ ಯುವ ಸಮಾಜದ ಧ್ವನಿಯಾಗಲಿ : ಸತೀಶ್ ಅಂಚನ್ ಮೂಲ್ಕಿ

voiceoftulunadu

ಅಡ್ಯಾರ್‌ನಲ್ಲಿ ೧೧ನೇ ವರ್ಷದ ಪಟ್ಲ ಸಂಭ್ರಮ ೨೦೨೬, ಡಾ| ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿ

Voiceoftulunadu

Leave a Comment