27 C
ಮಂಗಳೂರು
July 6, 2026
Uncategorizedಆರೋಗ್ಯಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶ

ಅಸಂಖ್ಯಾತ ಜೀವಗಳನ್ನು ಸ್ಪರ್ಶಿಸಿದ ಪುಣ್ಯಾತ್ಮ ಕಾಂತಾಡಿಗುತ್ತು ಉಗ್ಗ ಶೆಟ್ಟಿ ಚಿರಶಾಂತಿಯಲಿ;

ವರದಿ /ಚಿತ್ರ:ರೋನ್ಸ್ ಬಂಟ್ವಾಳ

ಮುಂಬೈ, ಜು. 01: ಕರ್ನಾಟಕ ಕರಾವಳಿಯಲ್ಲಿ ನಾನಾ ಸೇವೆಗಳೊಂದಿಗೆ ಅಸಂಖ್ಯಾತ ಜೀವಗಳನ್ನು ಸ್ಪರ್ಶಿಸಿದ ಪುಣ್ಯಾತ್ಮ ಕಾಂತಾಡಿಗುತ್ತು ಉಗ್ಗ ಶೆಟ್ಟಿ (85.) ಇಂದು ಬುಧವಾರ ಮುಂಜಾನೆ ಅಲ್ಪಕಾಲದ ಅನಾರೋಗ್ಯದಿಂದ ಇಹಲೋಕ ತ್ಯಜಿಸಿ ದೇವರ ಸಾನ್ನಿಧ್ಯ ಹೊಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ಮಾಗಣೆಯ ಇತಿಹಾಸದಲ್ಲೇ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ಕಾರ್ಯಕ್ರಮವಾದ ‘ಸುವರ್ಣ ಬಿಂಬ’ ಮಹೋತ್ಸವ ಅವರ ದೂರದೃಷ್ಟಿ, ಮಾರ್ಗದರ್ಶನ ಹಾಗೂ ಸಜೀಪದ ದೈವಗಳ ದಿವ್ಯ ಆಶೀರ್ವಾದದಿಂದ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.ಅಪ್ರತಿಮ ನಮ್ರತೆ, ಕರುಣೆ ಮತ್ತು ಅಚಲ ಶ್ರದ್ಧೆಯ ಸಾಕಾರ ಮೂರ್ತಿಯಾಗಿದ್ದ ಅವರು ಸಮಾಜ ಸೇವೆ ಹಾಗೂ ಆಧ್ಯಾತ್ಮಿಕ ಜೀವನಕ್ಕೆ ತಮ್ಮನ್ನು ತಾವು ಮುಡಿಪಾಗಿಟ್ಟ ದಾರಿದೀಪವಾಗಿದ್ದರು. ಅವರ ಸೌಮ್ಯ ಸ್ವಭಾವ, ಬುದ್ಧಿವಂತಿಕೆ ಮತ್ತು ಉದಾತ್ತ ಚಾರಿತ್ರ್ಯ ಎಲ್ಲರ ಪ್ರೀತಿ ಹಾಗೂ ಗೌರವಕ್ಕೆ ಪಾತ್ರವಾಗಿತ್ತು. ಅವರು ಬಿಟ್ಟುಹೋದ ಆದರ್ಶಗಳು ಮುಂದಿನ ಪೀಳಿಗೆಗೂ ಎಂದೆಂದಿಗೂ ಪ್ರೇರಣೆಯಾಗಿರಲಿವೆ. ಅವರ ಸವಿನೆನಪುಗಳು, ಮೌಲ್ಯಗಳು ಮತ್ತು ನಿಸ್ವಾರ್ಥ ಸೇವೆ ನಮ್ಮ ಹೃದಯದಲ್ಲಿ ಸದಾ ಶಾಶ್ವತವಾಗಿ ಉಳಿಯಲಿದೆ ಎಂದು ವಿವೇಕ್ ಶೆಟ್ಟಿ ಉಗ್ಗ ಶೆಟ್ಟಿ ನಿಧನಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.

ಆರಂಭದಲ್ಲಿ ಮುಂಬೈನ ಬಹುರಾಷ್ಟ್ರೀಯ ಕಂಪನಿ (MNC) ಒಂದರಲ್ಲಿ ಉನ್ನತ ಹುದ್ದೆಯಲ್ಲಿದ್ದು, ನಂತರ ತಮ್ಮ ಕಾರ್ಯಕ್ಷೇತ್ರವನ್ನು ಚೆನ್ನೈಗೆ ಬದಲಾಯಿಸಿದರು. ಅಲ್ಲಿ ಸ್ವಂತ ಉದ್ಯಮವನ್ನು ಯಶಸ್ವಿಯಾಗಿ ಮುನ್ನಡೆಸಿದ ಅವರು, ಕೆಲವು ವರ್ಷಗಳ ಹಿಂದೆ ಉದ್ಯಮದಿಂದ ನಿವೃತ್ತಿ ಹೊಂದಿ ತವರೂರಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಅಗಲಿದ ದಿವ್ಯಾತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ಭರಿಸಲಾರದ ನಷ್ಟವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಮತ್ತು ಹಿತೈಷಿಗಳಿಗೆ ಭಗವಂತ ಹಾಗೂ ಸಜೀಪದ ದೈವಗಳು ಕರುಣಿಸಲಿ ಎಂದು ಸಜೀಪ ಮಾಗಣೆ ಬಂಧುಗಳು ಸಂತಾಪ ಸೂಚಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Related posts

ಡಾ. ಎಂ. ಪ್ರಭಾಕರ ಜೋಶಿಯವರಿಗೆ ಪು. ಶ್ರೀ. ಪ್ರಶಸ್ತಿ;

Voiceoftulunadu

ವಲ್ಸಾಡ್–ವೇಲಂಕಣಿ ನಡುವೆ ವಿಶೇಷ ರೈಲು ಸಂಚಾರ ಆರಂಭ;

Voiceoftulunadu

ರಾಷ್ಟ್ರೀಕೃತ ಬ್ಯಾಂಕಿಗೆ ಸಮಾನವಾಗಿ ಸಹಕಾರಿ ಸಂಘ ದೇವಿಪ್ರಸಾದ್ ಶೆಟ್ಟಿ;

Voiceoftulunadu

Leave a Comment