27 C
ಮಂಗಳೂರು
July 6, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ: ಬೊಬ್ಬರ್ಯ, ಕಾಂತೇರಿ, ಜುಮಾದಿ, ಕಲ್ಕುಡ ಹಾಗೂ ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನದಲ್ಲಿ ವೈಭವದ ವಾರ್ಷಿಕ ನೇಮೋತ್ಸವ

ವರದಿ /ಚಿತ್ರ:ವಿನೋದ್ ಶೆಟ್ಟಿ ಉಡುಪಿ

ಉಡುಪಿ: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಉಡುಪಿ ನಗರದ ತೆಂಕಪೇಟೆಯ ವುಡ್‌ಲ್ಯಾಂಡ್ ಹೋಟೆಲ್ ಸಮೀಪದ ಬೊಬ್ಬರ್ಯ, ಕಾಂತೇರಿ, ಜುಮಾದಿ, ಕಲ್ಕುಡ ಹಾಗೂ ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಭ್ರಮದಿಂದ ಜರುಗಿತು.

ಮೂರು ದಿನಗಳ ದೈವಾರಾಧನಾ ವೈಭವ
1. ಜೂನ್ 05, 2026: ಬೊಬ್ಬರ್ಯ ದೈವದ ನೇಮೋತ್ಸವ ಭಕ್ತಿ ಸಂಭ್ರಮದಿಂದ ನಡೆಯಿತು.
2. ಜೂನ್ 06, 2026: ಕಾಂತೇರಿ ಜುಮಾದಿ ಹಾಗೂ ಪಿಲಿ ಚಂಡಿ ದೈವ ಮತ್ತು ಪಂಜುರ್ಲಿ ದೈವದ ನೇಮ ಭಕ್ತರ ಸಮ್ಮುಖದಲ್ಲಿ ಜರುಗಿತು.
3. ಜೂನ್ 07, 2026: ಕಲ್ಕುಡ ದೈವ ಮತ್ತು ಕೊರಗಜ್ಜ ದೈವ ಪರಿವಾರ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ಸಂಪನ್ನಗೊಂಡಿತು.

ಗ್ರಾಮಸ್ಥರು, ಹೊರದೇಶ-ಹೊರರಾಜ್ಯದ ಭಕ್ತಾದಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ದೈವದ ಗಂಧ ಪ್ರಸಾದ ಸ್ವೀಕರಿಸಿ ಕೃಪೆಗೆ ಪಾತ್ರರಾದರು.

ವಿಶೇಷ ಗೌರವ ಸನ್ಮಾನ ಕಾರ್ಯಕ್ರಮ
ಜೂನ್ 7ರಂದು ಸಂಜೆ 5 ಗಂಟೆಗೆ 7ನೇ ವರ್ಷದ ‘ವಿಶೇಷ ಗೌರವ ಸನ್ಮಾನ’ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.

ಸನ್ಮಾನಿತರು:
ನಿಟ್ಟೂರು ಮಹಾಬಲ ಶೆಟ್ಟಿ (ದೈವರಾಧನೆ ಕ್ಷೇತ್ರ ಮದಿಪು), ಕೃಷ್ಣ ಪೂಜಾರಿ ಅಂಚಾರು (ಕೊಂಬು ವಾದನ ಹಾಗೂ ಸಮಾಜಸೇವೆ), ಉದಯ ಮೆಂಡನ್ (ಬ್ಯಾಂಡ್ ವಾದನ ಹಾಗೂ ದೈವರಾಧನೆ), ಶಕುಂತಳಾ ಸುಕೇಶ್ (ಸಮಾಜಸೇವೆ), ಆಶಾ ಚಂದ್ರಶೇಖರ್ (ಕ್ರೀಡಾ ಕ್ಷೇತ್ರ), ಸುಕನ್ಯ ಶೆಟ್ಟಿ (ಸಮಾಜಸೇವೆ), ಶ್ಯಾಮ ಪಾಣ್ಣಾರ್ (ದೈವ ನರ್ತಕರು, ದೈವರಾಧನೆ), ಸುಂದರ ಪೂಜಾರಿ ಅಂಚಾರು (ಗರಡಿ ಅರ್ಚಕರು, ದೈವರಾಧನೆ) ಹಾಗೂ ಕೃಷ್ಣ ಮಡಿವಾಳ (ದೈವರಾಧನೆ ಕ್ಷೇತ್ರ).

ಗಣ್ಯರ ಉಪಸ್ಥಿತಿ
ದೈವಸ್ಥಾನದ ಶೆಟ್ಟಿ ಬಾಲೆ ಹಾಗೂ ಬೊಬ್ಬರ್ಯ ಸೇವಾ ಸಮಿತಿಯ ಸ್ಥಾಪಕ ಗೌರವಾಧ್ಯಕ್ಷ ವಿನೋದ್ ಶೆಟ್ಟಿ, ಅನಂತೇಶ್ವರ ದೇವಸ್ಥಾನ ಹಾಗೂ ಚಂದ್ರಮೌಳೇಶ್ವರ ದೇವಸ್ಥಾನ ಆಡಳಿತ ಮಂಡಳಿಯವರು, ಪ್ರಮುಖ ಅತಿಥಿಗಳಾದ ಶೇಖರ್ ಜತ್ತನ್, ಬಾಲಕೃಷ್ಣ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಸುಧಾಕರ್ ಶೆಟ್ಟಿ, ಮಹಾಬಲ ಶೆಟ್ಟಿ ನಿಟ್ಟೂರ್, ಲೋಯಿತ್ ವರದರಾಜ್ ಕಾಮತ್, ಸುರೇಶ್ ಶೆಟ್ಟಿ ಮೂಡು ಬೆಟ್ಟು, ಸುಲೋಚನ ಶೆಟ್ಟಿ, ಶ್ರೀಮತಿ ರಮಣಿ ದಿನೇಶ್ ಪೂಜಾರಿ, ವಿಜಯ ಶೆಟ್ಟಿ, ವಿಜಯ ಮಡಿವಾಳ, ಸುಮಿತ ಶೆಟ್ಟಿ ಸೇರಿದಂತೆ ನೂರಾರು ಗಣ್ಯರು ಉಪಸ್ಥಿತರಿದ್ದರು.

Related posts

ಅಡ್ಯಾರ್‌ನಲ್ಲಿ ೧೧ನೇ ವರ್ಷದ ಪಟ್ಲ ಸಂಭ್ರಮ ೨೦೨೬, ಡಾ| ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿ

Voiceoftulunadu

ಅಸೋಸಿಯೇಷನ್ ಆಫ್ ಬಂಟ್ಸ್ ಚಾರ್ಟರ್ಡ್ ಅಕೌಂಟೆಂಟ್ಸ್ ಮುಂಬೈ (ಎಬಿಸಿಎ)ನೂತನ ಅಧ್ಯಕ್ಷರಾಗಿ ಸಿಎ ಜಗದೀಶ್ ಬಿ. ಶೆಟ್ಟಿ ಸುರತ್ಕಲ್ ಆಯ್ಕೆ:

Voiceoftulunadu

ಸೋಶಿಯಲ್ ಮೀಡಿಯಾದಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಅಬ್ಬರ; ಕಾಕ್ರೋಚ್ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ಭಾರತದಲ್ಲಿ ನಿರ್ಬಂಧ:

voiceoftulunadu

Leave a Comment