ವರದಿ /ಚಿತ್ರ :ಈ ಮೀಡಿಯಾ
ಬಂಟಕಲ್: ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಬಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ದಿಂದ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಗೊಳಿಸಿದ್ದಾರೆ.
ಮಂಜೂರಾದ 3 ಲಕ್ಷ ರೂಪಾಯಿಯ ಮಂಜೂರಾತಿ ಪತ್ರ ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಉಮೇಶ್ ಪ್ರಭುಮತ್ತು ಸದಸ್ಯರಿಗೆ ಹಸ್ತಾಂತರಿಸಿದರು.
ಈ ಸಂದರ್ಭ ಗೋಪಿನಾಥ್ ರಾಮದಾಸ್, ಜನ ಜಾಗೃತಿ ವೇದಿಕೆ ಸದಸ್ಯ ರಾಮರಾಯ್ ಪಾಟ್ಕರ್, ಸಂಗೀತ ಪಾಟ್ಕರ್, ದೇಗುಲದ ಅರ್ಚಕ ಶ್ರೀಕಾಂತ್ ಭಟ್, ದೇಗುಲದ ಸಮಿತಿ ಪದಾಧಿಕಾರಿಗಳು, ಕೇಂದ್ರ ಒಕ್ಕೂಟದ ಅಧ್ಯಕ್ಷರು ರಾಘವೇಂದ್ರ ಶೆಟ್ಟಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
