September 5, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟಕಲ್ಲು ದುರ್ಗಾಪರಮೇಶ್ವರಿ ದೇಗುಲದ ಸಭಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ ಮಂಜೂರಾತಿ ಪತ್ರ ಹಸ್ತಾಂತರಿಸಿದ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ;

ವರದಿ /ಚಿತ್ರ :ಈ ಮೀಡಿಯಾ

ಬಂಟಕಲ್: ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಬಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ದಿಂದ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಗೊಳಿಸಿದ್ದಾರೆ.

ಮಂಜೂರಾದ 3 ಲಕ್ಷ ರೂಪಾಯಿಯ ಮಂಜೂರಾತಿ ಪತ್ರ ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಉಮೇಶ್ ಪ್ರಭುಮತ್ತು ಸದಸ್ಯರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಗೋಪಿನಾಥ್ ರಾಮದಾಸ್, ಜನ ಜಾಗೃತಿ ವೇದಿಕೆ ಸದಸ್ಯ ರಾಮರಾಯ್ ಪಾಟ್ಕರ್, ಸಂಗೀತ ಪಾಟ್ಕರ್, ದೇಗುಲದ ಅರ್ಚಕ ಶ್ರೀಕಾಂತ್ ಭಟ್, ದೇಗುಲದ ಸಮಿತಿ ಪದಾಧಿಕಾರಿಗಳು, ಕೇಂದ್ರ ಒಕ್ಕೂಟದ ಅಧ್ಯಕ್ಷರು ರಾಘವೇಂದ್ರ ಶೆಟ್ಟಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಸಿ ಎಲ್ ಪಿ (CLP) ನೂತನ ನಾಯಕರಾಗಿ ಡಿ. ಕೆ. ಶಿವಕುಮಾರ್ ಆಯ್ಕೆ

Voiceoftulunadu

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಶಿಕ್ಷಣ ತಜ್ಞ ಆದರ್ಶ್ ಶೆಟ್ಟಿ ನೇಮಕ;

Voiceoftulunadu

ಮುದರಂಗಡಿ ಎಸ್ ಐ ಆರ್ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ;

Voiceoftulunadu

Leave a Comment