28.5 C
ಮಂಗಳೂರು
September 4, 2026
Uncategorizedಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಂಗಳೂರು: ಪ್ರಾಮಾಣಿಕತೆ ಮೆರೆದ ರೈಲ್ವೆ ಉದ್ಯೋಗಿ;

ವರದಿ/ ಚಿತ್ರ :ದಿತೇಶ್ ಪೂಜಾರಿ ಮಂಗಳೂರು

ಮಂಗಳೂರು: ಮಂಗಳೂರುಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೈಟ್ ಪಟ್ರೋ ಲ್ಮನ್‌(ಹಳಿ ಗಸ್ತು ಸಿಬ್ಬಂದಿ) ಕುಲದೀಪ್ ಮಹಾತ ಎಂಬುವವರು ರೈಲು ಹಳಿಯ ಬದಿಯಲ್ಲಿ ಸಿಕ್ಕಿದ ಹಣ ಮತ್ತು ಪ್ರಮುಖ ದಾಖಲೆಗಳಿದ್ದ ಪರ್ಸ್ ಒಂದನ್ನು ಸುರಕ್ಷಿತವಾಗಿ ಮಾಲೀಕರಿಗೆ ತಲುಪಿ ಸುವ ಮೂಲಕ ಮಾದರಿಯಾಗಿದ್ದಾರೆ.

ಕಳೆದ ಜುಲೈ 19ರಂದು ರಾತ್ರಿ ಕರ್ತವ್ಯದಲ್ಲಿದ್ದ ಕುಲದೀಪ್ ಮಹಾತ ಅವರಿಗೆ ರೈಲು ಹಳಿಯ ಪಕ್ಕದಲ್ಲಿ ಪರ್ಸ್ ಸಿಕ್ಕಿದ್ದು, ಪರಿಶೀಲಿಸಿದಾಗ ಅದರಲ್ಲಿ ರೂ. 3,000 ನಗದು ಹಣ, ಪಾನ್ ಕಾರ್ಡ್, ಆಧಾರ್ ಕಾರ್ಡ್, ಮೆಡಿಕಲ್ ಕಾರ್ಡ್ ಹಾಗೂ ಎಟಿಎಂ ಕಾರ್ಡ್‌ಗಳು ಇರುವುದು ತಿಳಿದು ಬಂದಿದೆ. ತಕ್ಷಣವೇ ಅವರು, ಆ ಪರ್ಸ್‌ನ್ನು ಮಂಗಳೂರು ಸೆಂಟ್ರಲ್‌ ರಕ್ಷಣೆ ಕ್ಷಣೆ ಕಚೇರಿಗೆ ಹಸ್ತಾಂ ತರಿಸಿದ್ದರು.

ಮಂಗಳೂರು ಆರ್‌ಪಿಎಫ್ ಸಿಬ್ಬಂದಿ, ಅದರಲ್ಲಿದ್ದ ದಾಖಲೆಗಳ ಆಧಾರದ ಮೇಲೆ ಜುಲೈ 22 ರಂದು ಮಾಲೀಕನನ್ನು ಪತ್ತೆಹಚ್ಚಿದ್ದಾರೆ.ಪರ್ಸ್ ಕೇರಳದ ಮಲಪ್ಪುರಂ ಜಿಲ್ಲೆಯ ಪುಲ್ಲಿಪಾದಂ ಮೂಲದ ಸುಜಿತ್ ಕೆ. ಎಂಬುವವರಿಗೆ ಸೇರಿದ್ದೆಂದು ತಿಳಿದು ಬಂದಿದೆ. ತಕ್ಷಣವೇ ಅವರನ್ನು ಸಂಪರ್ಕಿಸಿದ ಅಧಿಕಾರಿಗಳು, ಸೂಕ್ತ ದಾಖಲೆಗಳನ್ನು ಪರಿಶೀಲಿಸಿ, ಅವರ ಎಲ್ಲಾ ಕಾರ್ಡ್‌ಗಳನ್ನು ಹಸ್ತಾಂತರಿಸಿದ್ದಾರೆ.ನೈಟ್ ಪಟ್ರೋಲ್ಮನ್ ಕುಲದೀಪ್ ಮಹಾತ ಅವರ ಈ ಕರ್ತವ್ಯನಿಷ್ಠೆ ಮತ್ತು ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತವಾಗಿದೆ.

Related posts

ಸಾಂತಕ್ರೂಜ್ ; ಪ್ರಭಾತ್ ಕಾಲೊನಿ ಪ್ರೀಮಿಯರ್ ಲೀಗ್-2026 ಕ್ರಿಕೆಟ್ ಟೂರ್ನಮೆಂಟ್ಸಮಾಜ ಸೇವಕ ಶೇಖರ ಜೆ.ಸಾಲಿಯಾನ್‌ಗೆ ‘ಸಮಾಜ ಸೇವಾ ರತ್ನ’ ಪ್ರಶಸ್ತಿ ಪ್ರಧಾನ:

voiceoftulunadu

ಬಂಟರು ಬಿಪಿಎಲ್ ಕಾರ್ಡ್‌ನಿಂದ ಮುಕ್ತಿ ಪಡೆಯಬೇಕು: ಬರೋಡ ಶಶಿಧರ ಶೆಟ್ಟಿಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆ ;

Voiceoftulunadu

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಹಣದ ದುರ್ಬಳಕೆ: ಕಾಪುವಿನಲ್ಲಿ ಕಾಂಗ್ರೆಸ್ ಜಾಥಾ, ಪ್ರತಿಭಟನಾ ಸಭೆಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆ;

Voiceoftulunadu

Leave a Comment