September 5, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಲ್ಕಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದಲ್ಲಿ ಧಾರ್ಮಿಕ ಚಿಂತಕ ಪಂಜ ಭಾಸ್ಕರ ಭಟ್ ಅವರಿಗೆ ವೇದವಿಭೂಷಣ ಪ್ರಶಸ್ತಿ ಪ್ರದಾನ : ಧಾರ್ಮಿಕ ನಂಬಿಕೆಯಿಂದ ಜೀವನ ಪಾವನ : ಚಂದ್ರಶೇಖರ ಸ್ವಾಮೀಜಿ;

ವರದಿ/ ಚಿತ್ರ: ರೋಶನ್ ನೆಲ್ಲಿಗುಡ್ಡೆ

ಮೂಲ್ಕಿ:ನಮ್ಮಲ್ಲಿನ ದೇವತಾ ಭಾವನೆಗಳನ್ನು ಪ್ರತಿಬಿಂಬಿಸುವಾಗ ಜೀವನದಲ್ಲಿ ಸುಖ ದುಖಃಗಳ ಸಮಾನತೆಯೊಂದಿಗೆ ಪ್ರಚುರಪಡಿಸುವ ಧಾರ್ಮಿಕ ನಂಬಿಕೆಗೆ ಪ್ರಬಲ ಆಧ್ಯಾತ್ಮಿಕತೆಯನ್ನು ವ್ಯಕ್ತಪಡಿಸುವ ವ್ಯಕ್ತಿತ್ವದವರನ್ನು ಬಲವಾಗಿ ನಂಬುತ್ತೇವೆ, ನಮ್ಮ ನಂಬಿಕೆಯನ್ನು ಸಾಕಾರಗೊಳಿಸುವವರನ್ನು ಗೌರವಿಸುವುದು ಸಹ ನಮ್ಮ ಜವಬ್ದಾರಿ ಎಂದು ಬೆಂಗಳೂರಿನ ಆಧ್ಯಾತ್ಮಿಕಗುರು, ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ ಹೇಳಿದರು.

ಅವರು ಮೂಲ್ಕಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದಲ್ಲಿ ಧಾರ್ಮಿಕ ಚಿಂತಕ ಪಂಜ ಭಾಸ್ಕರ ಭಟ್ ಅವರಿಗೆ ವೇದವಿಭೂಷಣ ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವಚನ ನೀಡಿದರು.ಪಂಜ ಭಾಸ್ಕರ ಭಟ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಗುರುಪರಂಪರೆಯನ್ನು ಸದಾ ಗೌರವಿಸುವ ವ್ಯಕ್ತಿಗಳಿಂದ ಗೌರವ ಸ್ವೀಕರಿಸುವುದೇ ಜೀವನದ ಅಮೂಲ್ಯ ಕ್ಷಣವಾಗಿದೆ, ಈ ಪುರಸ್ಕಾರವು ನನ್ನ ಹೊಣೆಗಾರಿಕೆಯನ್ನು ಇನ್ನಷ್ಟು ಹಚ್ಚಿಸಿದೆ ಎಂದರು.

ಸೇವಾಶ್ರಮದ ನಿರ್ದೇಶಕಿ ರಜನಿ ಚಂದ್ರಶೇಖರ್, ಯುವ ಉದ್ಯಮಿ ರಾಹುಲ್ ಚಂದ್ರಶೇಖರ್, ನಿರ್ದೇಶಕ ರಾಘುವ ಸೂರ್ಯ, ಕಾನೂನು ಸಲಹೆಗಾರರಾದ ರೋಶಿನಿ ರಾಘವ್ ಸೂರ್ಯ, ಆಶ್ರಮದ ಪದಾಧಿಕಾರಿಗಳು, ವೇದವಿದ್ವಾಂಸರು, ವಿವಿಧ ಕ್ಷೇತ್ರಗಳ ಗಣ್ಯರು, ಭಕ್ತರು ಇದ್ದರು-೦-

Related posts

ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಆಶಾಕಿರಣ: ಉಡುಪಿ ಜಿಲ್ಲೆಗೆ 100 ಜ್ಞಾನ ದೀಪ ಶಿಕ್ಷಕರು ಪೂಜ್ಯ ಶ್ರೀ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಹತ್ವಕಾಂಕ್ಷಿ ಜ್ಞಾನ ದೀಪ ಯೋಜನೆ;

Voiceoftulunadu

ಸಹಕಾರಿ ವ್ಯವಸಾಯಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026 ಶಿರ್ವ ಸಂಘದ ಆಯೋಜನೆಯಲ್ಲಿ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ;

Voiceoftulunadu

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಅಂತರರಾಷ್ಟ್ರೀಯ ಅಧ್ಯಕ್ಷರಾಗಿ ಸರ್ವೋತ್ತಮ ಶೆಟ್ಟಿ ಆಯ್ಕೆ: ಶತಮಾನೋತ್ಸವದ ಹೊಸ್ತಿಲಲ್ಲಿ ತುಳುವ ನಾಗರಿಕತೆಯ ವೈಭವವನ್ನು ಮರುಸ್ಥಾಪಿಸುವ ಮಹಾಸಂಕಲ್ಪ;

Voiceoftulunadu

Leave a Comment