ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಅಶೋಕನಗರ ಬಂಟರ ಸಂಘದ ಅಧ್ಯಕ್ಷರಾಗಿದ್ದ ದಿ. ರವಿಚಂದ್ರ ಶೆಟ್ಟಿಯವರ ಸಂತಾಪ ಸೂಚಕ ಸಭೆಯು ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವದ ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿಯವರು ಮಾತನಾಡಿ, ರವಿಚಂದ್ರ ಶೆಟ್ಟಿ ಉರ್ವಾ-ಅಶೋಕನಗರ ಬಂಟರ ಸಂಘದಅಧ್ಯಕ್ಷರಾಗಿ ಮಾಡಿದವರು.
ಸಮಾಜಪರ ಕೆಲಸಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸಹಿತ ಬೇರೆ ಬೇರೆ ಸಂಘಟನೆಗಳಲ್ಲಿ ದುಡಿದವರು. ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ನುಡಿನಮನ ಸಲ್ಲಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಎಮ್ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿ ಎ ರಾಮ ಮೋಹನ್ ರೈ, ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿ ಸಂಚಾಲಕ ದಿವಾಕರ ಸಾಮಾನಿ, ಚೇಳ್ಯಾರ್ ಗುತ್ತು, ಶ್ರೀ ಸಿದ್ದಿವಿನಾಯಕಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಕಾರ್ಯಕಾರಿ ಸಮಿತಿ ಸದಸ್ಯರಾದ ಎಮ್ ಸುಂದರ ಶೆಟ್ಟಿ, ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಉಮೇಶ್ ರೈ ಪದವು ಮೇಗಿನ ಮನೆ, ಡಾ. ಆಶಾಜ್ಯೋತಿ ರೈ, ಸದಾಶಿವ ಶೆಟ್ಟಿ ಬಿಜೈ, ಅಶ್ವತ್ಥಾಮ ಹೆಗ್ಡೆ, ಜಗದೀಶ್ ಶೆಟ್ಟಿ ಬಿಜೈ, ಸುಲತಾ ಜೆ ಶೆಟ್ಟಿ, ಸುಮಾ ರವೀಂದ್ರ ಶೆಟ್ಟಿ, ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್, ಪ್ರಮೋದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
