September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸೈಂಟ್ ಮಿಲಾಗ್ರಿಸ್ ಕೋ ಆ. – ಸೊಸೈಟಿ ವತಿಯಿಂದ ಸ್ಪಂದನ ದಿವ್ಯಾಂಗರ ಕೇಂದ್ರಕ್ಕೆ ಸಹಾಯ ಹಸ್ತ ಸಮಾಜ ಸೇವೆಯು ಹಣಕಾಸು ಸಂಸ್ಥೆಗಳಿಗೆ ಮಾದರಿ: ವಂ. ಫಾ. ಡೆನ್ನಿಸ್ ಡೇಸಾ;

ವರದಿ /ಚಿತ್ರ :ಈ ಮೀಡಿಯಾ

ಉಡುಪಿ:ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ನೇಜಾರಿನ ಸ್ಪಂದನ ದಿವ್ಯಾಂಗರ ಸಂರಕ್ಷಣಾ ಕೇಂದ್ರದಲ್ಲಿ ಮಂಗಳವಾರ ಅಗತ್ಯ ವಸ್ತುಗಳ ವಿತರಣಾ ಸಮಾರಂಭನಡೆಯಿತು.ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋಓಪ್ ಸೊಸೈಟಿಯು ಅನೇಕ ವರ್ಷಗಳಿಂದ ಉಡುಪಿ ಜಿಲ್ಲೆಯ ವಿಶೇಷ ಮಕ್ಕಳ ಶಾಲೆ ಹಾಗೂ ದಿವ್ಯಾಂಗರ ಕೇಂದ್ರಕ್ಕೆ ಅಗತ್ಯ ವಸ್ತುಗಳನ್ನುವಿತರಿಸಿಕೊಂಡು ಬರುತ್ತಿದೆ.

ಇದು ಇತರ ಹಣಕಾಸು ಸಂಸ್ಥೆಗಳಿಗೆ ಮಾದರಿ ಆಗಿದೆ ಎಂದು ಶೋಕ ಮಾತಾ ಇಗರ್ಜಿಯ ಧರ್ಮಗುರು ವಂ. ಫಾ. ಡೆನ್ನಿಸ್ ಡೇಸಾ ಹೇಳಿದರು.ಕಾರ್ಯವು ಹಣಕಾಸಿನ ವ್ಯವಹಾರ ಜೊತೆ ಸಮಾಜಮುಖಿ ನಿರಂತರವಾಗಿ ನಡೆದು ದುರ್ಬಲ ವರ್ಗದವರಿಗೆ ಆಸರೆಯಾಗಿ ಇರಲಿ ಎಂದು ಹಾರೈಸಿದರು.

ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಮಲ್ಪೆ ಉಪನಿರೀಕ್ಷಕರಾದ ಅನಿಲ್ ಕುಮಾರ್, ಸೊಸೈಟಿಯಶಾಖಾ ಅಭಿವೃದ್ಧಿ ಅಧಿಕಾರಿ ಮನೀಶ್, ಉಡುಪಿ ವ್ಯವಸ್ಥಾಪಕಿ ಪ್ರಮೀಳಾ ಲೋಬೊ, ಸಾಲ ವಸೂಲಾತಿ ಅಧಿಕಾರಿ ಗೌತಮ್ ರೈ, ಉಡುಪಿ ಶಾಖೆಯ ಸಿಬ್ಬಂದಿಗಳಾದ ಸಂದೇಶ್, ನಿಶಿತ್, ರೋಶನ್ ಮೆಂಡೋನ್ಸ, ಧನುಷ್, ಸುವಿಧಾ, ಅಜಯ್ ಶೆಟ್ಟಿ, ಸುಮಂತ್ ಉಪಸ್ಥಿತರಿದ್ದರು.ಜಾಸ್ಮಿನ್ ಶಿಲ್ಪಾ ಕ್ರಾಸ್ಟ ನಿರೂಪಿಸಿದರು. ನಿಶಿತ್ ಕುಲಾಲ್ ವಂದಿಸಿದರು.

Related posts

ಫುಟ್ಬಾಲ್ ಫಿವರ್‌ಗೆ ಪಿದಾನಾದ ಶಿವಾ-ನ್ಯೂಜೆರ್ಸಿಯ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ವರ್ಲ್ಡ್ ಕಪ್ ಹವಾ ಆನಂದಿಸಿ ಫಿಫಾಕ್ಕೆ ಸಾಕ್ಷಿಯಾದ ಶಿವರಾಮ ಭಂಡಾರಿ;

Voiceoftulunadu

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಆದೇಶ: ಶುಲ್ಕ ಪಾವತಿಸಿದವರಿಗೆ 15 ದಿನಗಳಲ್ಲಿ ಮರುಪಾವತಿ

voiceoftulunadu

ಲಯನ್ಸ್ ಕ್ಲಬ್ ಕುಂಜಿಬೆಟ್ಟು: ನೂತನ ಪದಾಧಿಕಾರಿಗಳ ಪದಗ್ರಹಣ.ಲಯನ್ಸ್ ಎಂದರೆ ಸೇವೆಗೆ ಮತ್ತೊಂದು ಹೆಸರು : ರಜತ್ ಕುಮಾರ್ ಹೆಗ್ಡೆ ;

Voiceoftulunadu

Leave a Comment