September 5, 2026
Uncategorizedಆರೋಗ್ಯಕಲೆ/ಸಾಹಿತ್ಯಕ್ರೈಮ್/ಅವಘಡಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸ

ಅಣ್ಣಾ ಹಜಾರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲುಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ;

ಮುಂಬೈ: ಹಿರಿಯ ಕಾರ್ಯಕರ್ತ ಹಾಗೂ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಮುಂಬೈನ ಮುಂಬಯಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.ಅವರಿಗೆ ತೀವ್ರ ವೈರಲ್ ಸೋಂಕು ಹಾಗೂ ನಿರ್ಜಲೀಕರಣದ ಸಮಸ್ಯೆ ಕಾಣಿಸಿಕೊಂಡಿದ್ದು, ಕಿಡ್ನಿ ಸಂಬಂಧಿತ ತೊಂದರೆಯೂ ವರದಿಯಾಗಿದೆ.

ಮಹಾರಾಷ್ಟ್ರದ ರಾಲೇಗಣ ಸಿದ್ಧಿ ಗ್ರಾಮದ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಣ್ಣಾ ಹಜಾರೆ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನಚಿಕಿತ್ಸೆಗಾಗಿ ಅವರನ್ನು ಮುಂಬೈಗೆ ಸ್ಥಳಾಂತರಿಸಲಾಗಿದೆ.ಅವರನ್ನು ಕಾರ್ಡಿಯಾಕ್ ಆಂಬ್ಯುಲೆನ್ಸ್ ಮೂಲಕ ಮುಂಬೈನ ಮುಂಬಯಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ವರದಿಗಳು ತಿಳಿಸಿವೆ.

ಆಸ್ಪತ್ರೆಯ ವೈದ್ಯ ಗೌತಮ್ ಭನ್ಸಾಲಿ ಅವರ ಮೇಲ್ವಿಚಾರಣೆಯಲ್ಲಿ ಅಣ್ಣಾ ಹಜಾರೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ವೈದ್ಯರು ಹಲವು ರೋಗನಿರ್ಣಯ ಪರೀಕ್ಷೆಗಳನ್ನು ನಡೆಸುತ್ತಿದ್ದು, ಪರೀಕ್ಷಾ ವರದಿಗಳ ಆಧಾರದ ಮೇಲೆ ಮುಂದಿನ ಚಿಕಿತ್ಸೆಯನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.ಇತ್ತೀಚಿನ ವೈದ್ಯಕೀಯ ಮಾಹಿತಿ ಪ್ರಕಾರ, ಅಣ್ಣಾ ಹಜಾರೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಗೌತಮ್ ಭನ್ಸಾಲಿ ತಿಳಿಸಿದ್ದಾರೆ.

ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿ ವೈದ್ಯರ ನಿಗಾದಲ್ಲಿದ್ದು, ಹೆಚ್ಚಿನ ಆರೋಗ್ಯ ವಿವರಗಳಿಗಾಗಿ ಪರೀಕ್ಷಾ ವರದಿಗಳನ್ನು ನಿರೀಕ್ಷಿಸಲಾಗುತ್ತಿದೆ.ಅಣ್ಣಾ ಹಜಾರೆ ಅವರು 2011 ರ ಭ್ರಷ್ಟಾಚಾರ ವಿರೋಧಿ ಚಳವಳಿ ಮೂಲಕ ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಗಮನ ಸೆಳೆದಿದ್ದರು.

ಇತ್ತೀಚಿನ ದಿನಗಳಲ್ಲೂ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ನೀಟ್ ಪರೀಕ್ಷೆಗೆ ಸಂಬಂಧಿಸಿದ ವಿಚಾರಗಳ ಕುರಿತು ಅವರು ಪ್ರತಿಕ್ರಿಯಿಸಿದ್ದರು.ಅವರ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದು ಬೆಂಬಲಿಗರು ಆತಂಕ ವ್ಯಕ್ತಪಡಿಸಿದ್ದು, ಶೀಘ್ರ ಚೇತರಿಕೆಗೆ ಹಾರೈಸುತ್ತಿದ್ದಾರೆ.

Related posts

ದೆಹಲಿಯಲ್ಲಿ ಆಟಿ ಅಮಾವಾಸ್ಯೆ ಆಚರಣೆ: ತುಳುವರಿಂದ ಕಷಾಯ, ಮೆಂತ್ಯ ಗಂಜಿ ವಿತರಣೆ ಪ್ರಕಾಶ್ ಶೆಟ್ಟಿ ಉಳೆಪಾಡಿ ಹಾಗೂ ಉಸ್ಮಾನ್ ಅಬ್ದುಲ್ ಷರೀಫ್‌ ನೇತೃತ್ವ ;

Voiceoftulunadu

ಕುಂತಳನಗರ ಡಿಜಿಟಲ್ ಸಾಕ್ಷರತಾ ಕಂಪ್ಯೂಟರ್ ತರಬೇತಿ :ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಅ. 9 ರಂದು ಎಂಆರ್ ಜಿ ಸಂಸ್ಥೆಯ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳ;

Voiceoftulunadu

ಕಪಸಮ -ಕೆಯುಡಬ್ಲ್ಯೂಜೆ ಮಹಾರಾಷ್ಟ್ರ ಘಟಕದಿಂದ ಪತ್ರಕರ್ತರ ದಿನಾಚರಣೆ ಶ್ರೀ ಕೆ.ಟಿ ವೇಣುಗೋಪಾಲ್-ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀಪ್ರಶಸ್ತಿ ಪ್ರದಾನ;

Voiceoftulunadu

Leave a Comment