September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪಡುಬಿದ್ರಿ ಯುವವಾಹಿನಿ : ಪದಗ್ರಹಣ, ಪ್ರತಿಭಾ ಪುರಸ್ಕಾರ, ವಿದ್ಯಾ ನಿಧಿ ವಿತರಣೆ , ನೂತನ ಅಧ್ಯಕ್ಷ ನಿಖಿಲ್ ಪೂಜಾರಿ ಮತ್ತವರ ತಂಡದಿಂದ ಅಧಿಕಾರ ಸ್ವೀಕಾರ ;

ವರದಿ /ಚಿತ್ರ :ಈ ಮೀಡಿಯಾ

ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ, ಪ್ರತಿಭಾ ಪುರಸ್ಕಾರ ಹಾಗೂ ಪಿ.ಕೆ ಜಯರಾಮ್ ಪ್ರವರ್ತಿತ ವಿದ್ಯಾ ನಿಧಿ ವಿತರಣಾ ಕಾರ್ಯಕ್ರಮ ಭಾನುವಾರ ಸಹಕಾರ ಸಂಗಮ ಪಡುಬಿದ್ರಿ ಸಿ.ಎ ಸೊಸೈಟಿ ಸಭಾಂಗಣದಲ್ಲಿ ಜರಗಿತು.ಕಾರ್ಯಕ್ರಮವನ್ನು ಬ್ರಿಟನ್ ಬಿಲ್ಲವ ಬಳಗದ ಅಧ್ಯಕ್ಷರಾದ ಡಾ . ಪಿ.ಕೆ ಮನೋಜ್ ಪೂಜಾರಿ ಉದ್ಘಾಟಿಸಿದರು.

ಯುವವಾಹಿನಿ ಕೇಂದ್ರ ಸಮಿತಿ, ಇದರ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಡು ಪಡುಬಿದ್ರಿ ಯುವವಾಹಿನಿಯ ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಮಂಗಳೂರು ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷರಾದ ವಿಧಿತ್ ಪೂಜಾರಿ ಕರ್ನಿರೆ ನೂತನ ಅಧ್ಯಕ್ಷ ನಿಖಿಲ್ ಪೂಜಾರಿಯವರಿಗೆ ಹಾಗೂ ಕಾರ್ಯದರ್ಶಿ ಭಾಸ್ಕರ್ ಎನ್. ಅಂಚನ್ ನೂತನ ಕಾರ್ಯದರ್ಶಿ ರಾಜೇಶ್ವರಿ ಅವಿನಾಶ್ ರವರಿಗೆ ಅಧಿಕಾರ ಹಸ್ತಾಂತರಿಸಿದರು.

ಪ್ರತಿಭಾ ಪುರಸ್ಕಾರ/ವಿದ್ಯಾರ್ಥಿ ವೇತನ :ಶೈಕ್ಷಣಿಕ ವಾಗಿ ಸಾಧಿಸಿದ ಪ್ರತಿಭೆಗಳಿಗೆ ಹಾಗೂ ಪಡುಬಿದ್ರಿ ವ್ಯಾಪ್ತಿಯ ಪಿಯುಸಿ, ಪದವಿ, ಸ್ನಾತಕೋತ್ತರ, ವೃತ್ತಿಪರ ಶಿಕ್ಷಣಾರ್ಥಿಗಳಿಗೆ ಪಿ.ಕೆ ಜಯರಾಮ್ ಪ್ರವರ್ತಿತ 4 ಲಕ್ಷ ರೂ. ವಿದ್ಯಾ ನಿಧಿಯನ್ನು 60 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.ಸನ್ಮಾನ :ಡಾ. ಪಿ.ಕೆ ಮನೋಜ್ ಪೂಜಾರಿ ದಂಪತಿಯನ್ನು ಹಾಗೂ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಅಶೋಕ್ ಪಡು ಮತ್ತು ಘಟಕದ ಅಧ್ಯಕ್ಷ ವಿಧಿತ್ ಪೂಜಾರಿ ದಂಪತಿಯನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಎ.ಜೆ. ಇನ್ಸಿಟ್ಯೂಟ್ ఆఫ్ ಮೆಡಿಕಲ್ ಸೈನ್ಸ್ ಪ್ರೊಫೆಸರ್ ಡಾ. ಪಿ.ಕೆ. ಕಿರಣ್ ಕುಮಾರ್, ಉದ್ಯಮಿ ಗಣೇಶ್ ಗುಜರನ್,ನಳಿನಿ ಜಯರಾಮ್, ಪಡುಬಿದ್ರಿ ಬಿಲ್ಲವ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಇದರ ಸಂಘಟನಾ ಕಾರ್ಯದರ್ಶಿ ಮಮತಾ ರಾಜ್, ಅರುಣ್ ಪಿ.ಕೆ., ಸುಷ್ಮಾ ಅರುಣ್, ಡಾ. ಎನ್ ಟಿ ಅಂಚನ್, ಭಾಸ್ಕರ್ ಎನ್ ಅಂಚನ್ ಉಪಸ್ಥಿತರಿದ್ದರು.ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷರಾದ ವಿಧಿತ್ ಪೂಜಾರಿ ಕರ್ನಿರೆ ಅಧ್ಯಕ್ಷತೆ ವಹಿಸಿದ್ದರು.

ಸುಗಂಧಿ ಶ್ಯಾಮ್ ಪ್ರಾರ್ಥಿಸಿದರು. ಸುಜಿತ್ ಕುಮಾರ್ ಪ್ರಸ್ತಾವಿಸಿದರು. ವಿಧಿತ್ ಪೂಜಾರಿ ಕರ್ನಿರೆ ಸ್ವಾಗತಿಸಿದರು. ಭಾಸ್ಕರ್ ಎನ್ ಅಂಚನ್ ವರದಿ ವಾಚಿಸಿದರು. ಶಶಿಕಲಾ ಯಶೋಧರ್ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು.ಚೈತ್ರ ಗಣೇಶ್, ಚೈತ್ರ ಮನೋಹರ್ ಮತ್ತು ಹರೀಶ್ ಕೋಟ್ಯಾನ್ ಉಳ್ಳೂರು ನಿರೂಪಿಸಿದರು. ರಾಜೇಶ್ವರಿ ಅವಿನಾಶ್ ವಂದಿಸಿದರು.

Related posts

ಬಿ.ಸಿ.ರೋಡು: ಯುವ ಗಾಣಿಗ ಸಂಘ ದಿಂದ ‘ಕೆಸರ್ ಡ್ ಒಂಜಿ ದಿನ’, ಶಾಸಕ ಮೆಚ್ಚುಗೆ ;

Voiceoftulunadu

ತುಳುವರ ನವಗ್ರಹಗಳು – ತುಳುನಾಡಿನ ಜೀವನತತ್ವ, ಕಾಲಗಣನೆ ಮತ್ತು ಜ್ಞಾನಪರಂಪರೆಯ ಪ್ರತಿಬಿಂಬ;

voiceoftulunadu

ಕುಲಾಲ ಫ್ಯಾಮಿಲಿ ಯುಎಇ ವತಿಯಿಂದ ಯಶಸ್ವಿ ರಕ್ತದಾನ ಶಿಬಿರ;

Voiceoftulunadu

Leave a Comment