July 7, 2026
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ಸ್ಥಳೀಯ/ಪ್ರಾದೇಶಿಕ ಸುದ್ದಿ

ಅಪ್ರಾಪ್ತ ಬಾಲಕಿಯ ಕೊಲೆಗೆ ಯತ್ನ, ಆರೋಪಿ ಠಾಣೆಗೆ ಶರಣು, ಬೆಚ್ಚಿ ಬೀಳಿಸಿದ ಕೃತ್ಯ;

ವರದಿ /ಚಿತ್ರ:ಈ ಮೀಡಿಯಾ

ಬಂಟ್ವಾಳ: ತಾಲೂಕಿನ ಮಂಚಿ –ಮೋಂತಿಮಾರಿನಲ್ಲಿ ಜಿಲ್ಲೆಯ ಜನ ಬೆಚ್ಚಿ ಬೀಳಿಸುವಂತ ಘಟನೆ ಸೋಮವಾರ ಬೆಳಿಗ್ಗೆ ಘಟಿಸಿದೆ. ಕಾಲೇಜಿಗೆ ತೆರಳಲೆಂದು ಬಸ್ ತಂಗುದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ 17 ರ ಹರೆಯದ ಅಪ್ರಾಪ್ತ ಬಾಲಕಿಗೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆಗೈದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾನೆ.

ದುಷ್ಕರ್ಮಿಯ ಚಾಕುವಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯ ಚೀರಾಟ ಕೇಳಿ ಸ್ಥಳೀಯರು ಅಗಮಿಸಿ ಕೂಡಲೇ ಆಕೆಯನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಗಾಯಾಳು ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದು ಬಂದಿದೆ.

ಘಟನೆ ನಡೆದ ಸ್ಥಳದಲ್ಲೆಲ್ಲಾ ರಕ್ತದ ಕಲೆಗಳು ಕಂಡುಬಂದಿದ್ದು, ಕ್ರೂರಿಯ ದಾಳಿಯ ಭೀಕರತೆಗೆ ಸಾಕ್ಷಿಯಾಗಿದೆ.ಆರೋಪಿ ಠಾಣೆಗೆ ಶರಣು: ಮೋಂತಿಮಾರು ಪಡ್ಪು ನಿವಾಸಿ ಜವ್ವಾರ್ (28) ಎಂಬಾತ ಈ ಕೃತ್ಯ ಎಸಗಿದ್ದು, ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆಂದು ಹೇಳಲಾಗಿದೆ. ಪಿಯುಸಿ ವಿದ್ಯಾರ್ಥಿನಿಯಾಗಿರುವ ಬಾಲಕಿ ಎಂದಿನಂತೆ ಬೆಳಿಗ್ಗೆ 8.45 ರ ಹೊತ್ತಿಗೆ ಕಾಲೇಜಿಗೆ ಹೋಗಲೆಂದು‌ ಮೊಂತಿಮಾರು ಬಸ್ ತಂಗುದಾಣದಲ್ಲಿ ನಿಂತಿದ್ದಾಗ, ಸ್ಥಳಕ್ಕೆ ಬಂದ ಆರೋಪಿ ಜವ್ವಾ‌ರ್ ಏಕಾಏಕಿ ಚಾಕುವಿನಿಂದ ಬಾಲಕಿಯ ತಲೆ ಹಾಗೂ ಕೈಗೆ ಹಲ್ಲೆ ಮಾಡಿದ್ದಾನೆ. ಬಾಲಕಿಯ ಬೊಬ್ಬೆ ಕೇಳಿ ಸ್ಥಳೀಯರು ಅಗಮಿಸುತ್ತಿದ್ದಂತೆ ಚಾಕುವನ್ನು ಸ್ಥಳದಲ್ಲೇ ಎಸೆದು ಆರೋಪಿ ಪರಾರಿಯಾಗಿದ್ದಾನೆ. ಸ್ಥಳೀಯರು ಅದಾಗಲೇ ಆರೋಪಿಯನ್ನು ಗುರುತಿಸಿದ್ದಾರೆ. ಆರೋಪಿಯ ಹಠಾತ್ ಚಾಕುವಿನ ದಾಳಿಯ ಪರಿಣಾಮ ಆಕೆ ತೀವ್ರವಾಗಿ ಗಾಯಗೊಂಡಿದ್ದಾಳು. ಈ ಸುದ್ದಿ ಹರಡುತ್ತಿದ್ದಂತೆ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ.

ಸ್ಥಳದಲ್ಲಿ ಒಂದಷ್ಟು ಕಾಲ ಆತಂಕದ ವಾತಾವರಣವು ಸೃಷ್ಠಿಯಾಯಿತು. ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಆರೋಪಿ ಕೃತ್ಯಕ್ಕೆ ಬಳಸಿದ್ದ ಚಾಕುವನ್ನು ಪೊಲೀಸರು ಸ್ಥಳದಿಂದ ವಶಕ್ಕೆ ಪಡೆದಿದ್ದಾರೆ. ಬಳಿಕ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಘಟನೆಯ ಕೆಲ ಹೊತ್ತಿನ ಬಳಿಕ ಆರೋಪಿ ಜವ್ವಾರ್ ನೇರ ಗ್ರಾಮಾಂತರ ಪೊಲೀಸ್ ಠಾಣೆಗಾಗಮಿಸಿ ಪೊಲೀಸರ ಮುಂದೆ ಶರಣಾಗಿದ್ದಾನೆ.

ಕೃತ್ಯದ ಹಿನ್ನಲೆಯನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ದಾಳಿಯ ಹಿಂದೆ ಭಗ್ನ ಪ್ರೇಮದ ಶಂಕೆ ವ್ಯಕ್ತವಾಗಿದ್ದರೂ, ಅದರ ಕುರಿತು ಪೊಲೀಸರು ಇನ್ನೂ ಖಚಿತಪಡಿಸಿಲ್ಲ. ಸದ್ಯ ವಿವಿಧ ಆಯಾಮದಲ್ಲಿ ಪೊಲೀಸರು ತನಿಖೆಯನ್ನು‌ ಚುರುಕುಗೊಳಿಸಿದ್ದಾರೆ.

Related posts

ಸೋಶಿಯಲ್ ಮೀಡಿಯಾದಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಅಬ್ಬರ; ಕಾಕ್ರೋಚ್ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ಭಾರತದಲ್ಲಿ ನಿರ್ಬಂಧ:

voiceoftulunadu

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ 2 ದಿನಗಳ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಕೇಂದ್ರ ಸಚಿವೆ

voiceoftulunadu

ಕಂಬಳಕ್ಕೆ ವಿಶೇಷ ಸ್ಥಾನಮಾನ: ಸಿಎಂ ಡಿಕೆಶಿ ವಾರ್ಷಿಕ 5 ಕೋಟಿ ಅನುದಾನ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಭರವಸೆ ;

Voiceoftulunadu

Leave a Comment