27 C
ಮಂಗಳೂರು
July 6, 2026
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಪಡುಬಿದ್ರಿ ಕಡಲು ಕೊರೆತ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ ವಿ ಅಮೀನ್ ಮನವಿ: ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಶ್ವಾಸ್ ವಿ. ಅಮೀನ್;

ವರದಿ/ ಚಿತ್ರ:ಈ ಮೀಡಿಯಾ

ಪಡುಬಿದ್ರಿ, ಜು. 5: ಕಾಪು ತಾಲೂಕಿನ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ ಸಮುದ್ರ ಕೊರೆತವನ್ನು ತಡೆಗಟ್ಟಲು ಪಾಂಡುರಂಗ ಕೋಟ್ಯಾನ್ ಅವರ ಮನೆಯ ಮುಂಭಾಗದಿಂದ ಸಾಗರ ವಿದ್ಯಾ ಮಂದಿರವರೆಗೆ ಸುಮಾರು 700 ಮೀಟರ್ ಉದ್ದದ ಪ್ರದೇಶದಲ್ಲಿ ಶಾಶ್ವತವಾಗಿ ಕಡಲಿಗೆ ತಡೆಗೋಡೆ ನಿರ್ಮಿಸುವಂತೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಶ್ವಾಸ್ ವಿ. ಅಮೀ ರಾಜ್ಯದ ಆರೋಗ್ಯ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ, ನಡಿಪಟ್ಟಣ ಪ್ರದೇಶದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಸಮುದ್ರ ಕೊರೆತದಿಂದ ಸ್ಥಳೀಯ ನಿವಾಸಿಗಳ ಮನೆಗಳು, ಸಾರ್ವಜನಿಕ ಆಸ್ತಿಪಾಸ್ತಿಗಳು ಹಾಗೂ ಮೀನುಗಾರರ ಜೀವನೋಪಾಯಕ್ಕೆ ಗಂಭೀರ ಅಪಾಯ ಎದುರಾಗಿರುವುದನ್ನು ಉಲ್ಲೇಖಿಸಲಾಗಿದೆ. ಮಳೆಗಾಲದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗುವುದರಿಂದ ಪರಿಸ್ಥಿತಿ ಮತ್ತಷ್ಟು ಆತಂಕಕಾರಿಯಾಗಿದ್ದು, ಸ್ಥಳೀಯರು ಭಯದ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ ಎಂದು ತಿಳಿಸಿದ್ದಾರೆ.

ಈ ಪ್ರದೇಶದ ಸಮೀಕ್ಷೆಯನ್ನು ಸಂಬಂಧಪಟ್ಟ ಇಲಾಖೆಯು ಈಗಾಗಲೇ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ, ಸುಮಾರು 700 ಮೀಟರ್ ವ್ಯಾಪ್ತಿಯಲ್ಲಿ ಕಡಲ ತಡೆಗೋಡೆ ನಿರ್ಮಾಣಕ್ಕೆ ಅಗತ್ಯ ಆಡಳಿತಾತ್ಮಕ ಅನುಮೋದನೆ ಹಾಗೂ ಅನುದಾನವನ್ನು ಮಂಜೂರು ಮಾಡಿ ಶೀಘ್ರದಲ್ಲೇ ಕಾಮಗಾರಿ ಆರಂಭಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಕಾಮಗಾರಿಯಿಂದ ಸಮುದ್ರ ಕೊರೆತವನ್ನು ಪರಿಣಾಮಕಾರಿಯಾಗಿ ತಡೆಗಟ್ಟಿ, ಸ್ಥಳೀಯರ ಜೀವ ಮತ್ತು ಆಸ್ತಿಯನ್ನು ರಕ್ಷಿಸುವುದರ ಜೊತೆಗೆ ಕರಾವಳಿ ಪ್ರದೇಶದ ಸುರಕ್ಷತೆಯನ್ನು ಖಾತ್ರಿಪಡಿಸಲು ಸಾಧ್ಯವಾಗಲಿದೆ ಎಂದು ವಿಶ್ವಾಸ್ ವಿ. ಅಮೀನ್ ತಿಳಿಸಿದ್ದಾರೆ.

Related posts

ಆಸಕ್ತಿ ಮತ್ತು ವೃತ್ತಿಯ ನಡುವೆ ಸಮತೋಲನ ಅಗತ್ಯ: ಯುವಜನತೆಗೆ ನಮೃತಾ ಮೋಹನ್ ಕಿವಿಮಾತು:ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ಹಮ್ಮಿಕೊಂಡ ಕಾರ್ಯಕ್ರಮ;

Voiceoftulunadu

ಶತಮಾನೋತ್ಸವದ ಹೊಸ್ತಿಲಲ್ಲಿ ತುಳುವ ಮಹಾಸಭೆ : ಕೇಂದ್ರೀಯ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ;

Voiceoftulunadu

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಆದೇಶ: ಶುಲ್ಕ ಪಾವತಿಸಿದವರಿಗೆ 15 ದಿನಗಳಲ್ಲಿ ಮರುಪಾವತಿ

voiceoftulunadu

Leave a Comment