28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ತಾಲೂಕಿನಾದ್ಯಂತ ಸೌಹಾರ್ದಯುತ ಈದ್ ಮಿಲಾದ್ ಆಚರಣೆ :ಮಕ್ಕಳ ದಫ್ ಪ್ರದರ್ಶನ, ಪ್ರವಾದಿ ಮೊಹಮ್ಮದ್ ಅವರ ಸಂದೇಶ ಸಾರುವ ಹಾಡು, ವಾಹನ ಜಾಥಾದ ಮೆರಗು ;

ವರದಿ/ ಚಿತ್ರ: ಈ ಮೀಡಿಯಾ

ಕಾಪು: ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಈದ್ ಮಿಲಾದ್ ಹಬ್ಬವನ್ನು ಕಾಪು ತಾಲೂಕಿನಾದ್ಯಂತ ಧಾರ್ಮಿಕ ಶ್ರದ್ಧಾಭಕ್ತಿ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ಆಚರಿಸಲಾಯಿತು.ಈ ಪ್ರಯುಕ್ತ ಕಂಚಿನಡ್ಕ ಜುಮಾ ಮಸೀದಿಯಿಂದ ಆರಂಭಗೊಂಡಿತು. ಮೆರವಣಿಗೆ ಮಕ್ಕಳ ದಫ್ ಪ್ರದರ್ಶನ ಹಾಗೂ ಪ್ರವಾದಿ ಮೊಹಮ್ಮದ್ ಅವರ ಸಂದೇಶ ಸಾರುವ ಹಾಡುಗಳೊಂದಿಗೆ ಮೆರವಣಿಗೆ ಸಾಗಿತು.

ಸೌಟ್ಸ್ ತಂಡದ ಪಥಸಂಚಲನ ಹಾಗೂ ವಾಹನ ಜಾಥಾ ಕೂಡ ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿತ್ತು.ಹೊರಟ ಮೆರವಣಿಗೆ ಕಂಚಿನಡ್ಕ ಜುಮಾ ಮಸೀದಿಯಿಂದ ಪಡುಬಿದ್ರಿ ಮಸೀದಿವರೆಗೆ ಸಾಗಿತು. ಜುಮಾವಿವಿಧ ಸಮುದಾಯಗಳ ನಡುವೆ ಪ್ರೀತಿ, ಸಹಬಾಳ್ವೆ, ಸ್ನೇಹ ಹಾಗೂ ಸೌಹಾರ್ದತೆಯ ಸಂದೇಶ ಸಾರಿದ ಈ ಆಚರಣೆ ಗಮನ ಸೆಳೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪಡುಬಿದ್ರಿ ಜುಮಾ ಮಸೀದಿಯ ಖತೀಬರಾದ ಝನುದ್ದೀನ್ ಸಖಾಫಿ ಸುರೈಜಿ, “ಪ್ರವಾದಿ ಮೊಹಮ್ಮದ್ ಅವರ ಸಂದೇಶದಂತೆ ಸರ್ವ ಜನಾಂಗದವರೂ ಪ್ರೀತಿ, ವಿಶ್ವಾಸ, ಸ್ನೇಹ ಹಾಗೂ ಒಗ್ಗಟ್ಟಿನಿಂದ ಸಹಬಾಳ್ವೆ ನಡೆಸಬೇಕು ఎంబ ಆಶಯದೊಂದಿಗೆ ಈದ್ ಮಿಲಾದ್ ಆಚರಿಸುತ್ತಿದ್ದೇವೆ” ಎಂದರು.

ಭಾರತವು ಸರ್ವ ಧರ್ಮೀಯರು ತಮ್ಮ ಧಾರ್ಮಿಕ ಆಚರಣೆಗಳನ್ನು ಸ್ವಾತಂತ್ರ್ಯದಿಂದ ನಡೆಸಿಕೊಂಡು ಸುಂದರ ಜೀವನ ನಡೆಸಲು ಅವಕಾಶ ಕಲ್ಪಿಸಿರುವ ಪವಿತ್ರ ಭೂಮಿಯಾಗಿದೆ. ದೇಶದಸೌಹಾರ್ದತೆ ಮತ್ತು ಸಹಬಾಳ್ವೆಯ ಪರಂಪರೆ ಮತ್ತಷ್ಟು ಬಲಗೊಳ್ಳಬೇಕು ಎಂದು ಅವರು ಆಶಿಸಿದರು.

ಈ ಸಂದರ್ಭದಲ್ಲಿ ಪಡುಬಿದ್ರಿ ಜುಮಾ ಮಸೀದಿ ಅಧ್ಯಕ್ಷ ಮೊಹಿದ್ದೀನ್ ಲಚ್ಚಿಲ್, ಕಂಚಿನಡ್ಕ ಮಸೀದಿ ಖತೀಬ್ ಅಬ್ದುಲ್ ಲತೀಫ್ ಮದನಿ, ನೂರಾನಿ ಮಸೀದಿ ಖತೀಬ್ ಮೌಲಾನ ಖುದ್ದುಸ್, ಮಸೀದಿ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಮೊಹಮ್ಮದ್ ಶಾಫಿ, ಮೊಹಮ್ಮದ್ ನಿಯಾಝ್, ರಮೀಜ್ ಹುಸೇನ್, ಹಸನ್ ಭಾವ ಕಂಚಿನಡ್ಕ, ಅಬ್ದುಲ್ ಅಸಿಸ್, ಫಿರೋಜ್ ಹಾಗೂ ಎ.ಕೆ. ಸೈಯದ್ ಅಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts

ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿದ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್:

voiceoftulunadu

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ : ಉಡುಪಿ ಬಿಜೆಪಿ ಆಯೋಜಿಸಿದ್ದ ಸಭೆಯಲ್ಲಿ ಯಶ್ವಾಲ್ ಸುವರ್ಣರಿಂದ ಭಾಷಣದ ಹಿನ್ನೆಲೆ;

Voiceoftulunadu

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಿದ ರೋಹನ್ ಕಾರ್ಪೊರೇಷನ್ ;

Voiceoftulunadu

Leave a Comment