ವರದಿ ಚಿತ್ರ: ಇ ಮೀಡಿಯಾ
ಕಾಪು : ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಯಾದವ್ ಐಎಎಸ್ ಮತ್ತವರ ಪತ್ನಿ ಬುಧವಾರ ಬೆಳಿಗ್ಗೆ ಕಾಪು ಶ್ರೀ ಹೊಸ ಮಾರಿಗುಡಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು.
ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.
ಹೊಸ ಮಾರಿಗುಡಿಯ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್ ಪಾಲನ್, ಗಣ್ಯರಾದ ಯೋಗೀಶ್ ವಿ.ಶೆಟ್ಟಿ, ಸಾವಿತ್ರಿ ಗಣೇಶ್, ಜಯರಾಮ್ ಆಚಾರ್ಯ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು.
