ವರದಿ ಚಿತ್ರ ಈ ಮೀಡಿಯಾ
ಕಾಪು: ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ವಿದ್ಯಾಕುಮಾರಿಯವರು ಪ್ರಸ್ತುತ ಕರ್ನಾಟಕ ರಾಜ್ಯದ ಸಮಗ್ರ ಶಿಕ್ಷಣ ಇಲಾಖೆಯ ಯೋಜನಾ ನಿರ್ದೇಶಕರಾಗಿ ಬಡ್ತಿಯಾಗಿದ್ದು, ದಂಪತಿ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.
ಮಾರಿಗುಡಿಯ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಯವರು ವಿಶೇಷ ಪೂಜೆ ಸಲ್ಲಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭ ಕರ್ನಾಟಕ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಸದಸ್ಯ ಮಾಧವ ಪಾಲನ್, ಸುನಿಲ್ ಎಸ್. ಪೂಜಾರಿ, ಪ್ರಬಂಧಕ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಮತ್ತಿತರರು ಉಪಸ್ಥಿತರಿದ್ದರು.
