September 5, 2026
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಹೊಸ ಶ್ರೀ ಮಾರಿಗುಡಿಗೆ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರ ಭೇಟಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಿದ ಮಾರಿಗುಡಿಯ ಅರ್ಚಕ ಶ್ರೀನಿವಾಸ ಕಾಪು;

ವರದಿ /ಚಿತ್ರ :ಈ ಮೀಡಿಯಾ

ಕಾಪು ಶ್ರೀ ಹೊಸ ಮಾರಿಗುಡಿಗೆ ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರಾದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ವಿಧಾನ ಪರಿಷತ್ತಿನ ಸದಸ್ಯ ಮತ್ತು ಜೆಡಿಎಸ್ನ ಶಾಸಕಾಂಗ ಪಕ್ಷದ ಉಪನಾಯಕ ಟಿ. ಎ ಶರವಣ, ತುಮಕೂರು ಜಿಲ್ಲಾ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಗುಬ್ಬಿ ಶ್ರೀನಿವಾಸ್, ನವಲಗುಂದ ಕ್ಷೇತ್ರದ ಶಾಸಕ ಎನ್ ಎಚ್ ಕೋನ ರೆಡ್ಡಿಯವರು ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರುಮತ್ತು ಸದಸ್ಯರೊಂದಿಗೆ ಹಾಗೂ ಕಾಪು ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿಯವರೊಂದಿಗೆ ಭೇಟಿ ನೀಡಿ, ಉಚ್ಚಂಗಿ ಸಹಿತ ಮಾರಿಯಮ್ಮನ ದರುಶನ ಪಡೆದರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.

ವ್ಯವಸ್ಥಾಪನಾ ಸಮಿತಿಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಶೇಖರ ಸಾಲ್ಯಾನ್, ಮಾಧವ ಆ‌ರ್. ಪಾಲನ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ರಮೇಶ್ ಹೆಗ್ಡೆ ಕಲ್ಯ, ಯೋಗಿಶ್ ವಿ. ಶೆಟ್ಟಿ, ಸುಗ್ಗಿ ಸುಧಾಕರ್ ಶೆಟ್ಟಿ, ಗೋವರ್ಧನ್ ಸೇರಿಗಾರ್, ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ.ಪ್ರತಿಜ್ಞಾವಿಧಿ ಬೋಧಿಸಿದ ಶಿಕ್ಷಕಿ ವಿನುತಾ ಎಸ್ ನಾಯಕ್.

Voiceoftulunadu

ಚೆಢಾನಗರ್‌ನ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಶ್ರೀ ಸುಬ್ರಹ್ಮಣ್ಯ ಸೇವಾ ಸಂಘದ ವಾರ್ಷಿಕ ಸಭೆ ಸಮುದಾಯದ ಹಿತಕ್ಕಾಗಿ ನಿರಂತರ ಸೇವೆ ಅವಶ್ಯ : ಕೆ.ಸುಬ್ಬಣ್ಣ ರಾವ್ ;

Voiceoftulunadu

ಯುವವಾಹಿನಿ ಯುವ ಸಮಾಜದ ಧ್ವನಿಯಾಗಲಿ : ಸತೀಶ್ ಅಂಚನ್ ಮೂಲ್ಕಿ

voiceoftulunadu

Leave a Comment