ವರದಿ/ಚಿತ್ರ:ಈ ಮೀಡಿಯಾ
ಕನ್ನಡಎರ್ಮಾಳು: ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಡುಪಿಯ ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಕೌನ್ಸಿಲರ್ ಹಾಗೂ ಆಡಳಿತಾಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿಯವರು ಭಾಗವಹಿಸಿದರು.
ಅವರು, ಮಕ್ಕಳಲ್ಲಿ ಮೊಬೈಲ್ ಬಳಕೆಯ ಪರಿಣಾಮ, ಹೋಲಿಕೆಯ ಪರಿಣಾಮ, ಮಕ್ಕಳ ಸುರಕ್ಷತೆ ಸೇರಿದಂತೆ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಹೇಗಿರಬೇಕು ಎಂಬ ವಿಷಯಗಳ ಬಗ್ಗೆ ಪೋಷಕರಿಗೆ ಉಪಯುಕ್ತವಾದ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್, ಮುಖ್ಯೋಪಾಧ್ಯಾಯಿನಿ ಪ್ರೀತಿ ಸುವರ್ಣ, ಶಿಕ್ಷಕ ರಕ್ಷಕ ಸಂಘದ ಪ್ರತಿನಿಧಿ ಮೊಹಮ್ಮದ್ ಸಲೀಂ, ಪೋಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಉಪ ಮುಖ್ಯೋಪಾಧ್ಯಾಯನಿ ಜ್ಯೋತಿ ರಾಜೇಶ್ ಶಾಲಾ ನೀತಿ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಿದರು.ಶಿಕ್ಷಕಿ ಕವಿತ ಜಿ ಪುತ್ರನ್ ಸ್ವಾಗತಿಸಿದರು. ಪ್ರತಿಮಾ ಕಾರ್ಯಕ್ರಮ ನಿರೂಪಿಸಿದರು. ಅಶ್ವಿನಿ ಆರ್ ವಂದಿಸಿದರು.
