September 5, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಗೆಳೆಯರ ಬಳಗ – ಕಾರಂತ ಪುರಸ್ಕಾರ – 2026 ರಾಮ ಮೊಗವೀರ ಕೋಟ ಆಯ್ಕೆ ಅ.11: ಸಾಲಿಗ್ರಾಮ ಶ್ರೀ ಗುರುನರಸಿಂಹ ಬಯಲು ರಂಗ ಮಂದಿರದಲ್ಲಿ ನಡೆಯಲಿರುವ ಸನ್ಮಾನ ;

ವರದಿ /ಚಿತ್ರ: ಈ ಮೀಡಿಯಾ

ಸಾಲಿಗ್ರಾಮ : ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮ ಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ‘ಗೆಳೆಯರ ಬಳಗ, ಕಾರಂತ ಪುರಸ್ಕಾರ 2026 ಪ್ರಶಸ್ತಿಗೆ ಈ ನಾಡಿನ ಹಿರಿಯರಾದ ಕಾರಂತರ ಆತ್ಮೀಯ ಒಡನಾಡಿ ರಾಮ ಮೊಗವೀರ ಕೋಟ ಆಯ್ಕೆಯಾಗಿದ್ದಾರೆ.

ಈ ಹಿಂದೆ ಶ್ರೀಮತಿ ಮಾಲಿನಿ ಮಲ್ಯ, ಎಸ್. ನಾರಾಯಣ ರಾವ್, ಪೇತ್ರಿ ಮಾಧವ ನಾಯಕ್, ಶ್ರೀನಿವಾಸ ಸಾಸ್ತಾನ, ಹಿರಿಯಡ್ಕ ಗೋಪಾಲರಾವ್, 225. ಇಬ್ರಾಹಿಂ ಸಾಹೇಬ್, ಪಾಂಡೇಶ್ವರ ಚಂದ್ರಶೇಖರ ಚಡಗ, ಬನ್ನಂಜೆ ಸಂಜೀವ ಸುವರ್ಣ, ಶ್ರೀಮತಿ ವೈದೇಹಿ, ನಾ ಮೊಗಸಾಲೆ ಹಾಗೂ ಶ್ರೀಮತಿ ಶಾಕುಂತಲಾ ಭಟ್ ಗೆಳೆಯರ ಬಳಗ ಕಾರಂತಪುರಸ್ಕಾರ ಪಡೆದವರಾಗಿದ್ದಾರೆ.

ಈ ಪುರಸ್ಕಾರವು ಗೌರವಧನ ಹಾಗೂ ಸನ್ಮಾನ ಪತ್ರ, ಫಲಪುಷ್ಪ, ಶಾಲು ಇತ್ಯಾದಿಯಿಂದ ಕೂಡಿರುತ್ತದೆ.ಗೆಳೆಯರ ಬಳಗ ಕಾರಂತ ಪುರಸ್ಕಾರ-2026 ನ್ನು ಅಕ್ಟೋಬರ್ 11 ರ ಆದಿತ್ಯವಾರ ಸಂಜೆ ಸಾಲಿಗ್ರಾಮ ಶ್ರೀ ಗುರುನರಸಿಂಹ ಬಯಲು ರಂಗ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು.

ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ವಿತರಿಸಲಾಗುವುದು ಎಂದು ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ತಿಳಿಸಿದ್ದಾರೆ.

Related posts

ನಿಮಗೆ ಮಾರಿದ ನಕ್ಷೆ ಹಳೆಯದಾಗಿದೆ : ವಿಶೇಷ ಲೇಖನ : ಬಂಟಕಲ್ ತಾಂತ್ರಿಕ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಡಾ. ನೇಹಾ ಲಖೋಟಿಯಾ ಲೇಖನ!

Voiceoftulunadu

ಲಾವಣ್ಯ ಹಂತಕನಿಗೆ ವೆಸ್ಲಾಕ್ ಜಿಲ್ಲಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಹಂತಕ ಚೇತನ್ ವಿಷ ಪದಾರ್ಥ ಸೇವಿಸಿದ್ದ ಬಗ್ಗೆ ಮಾಹಿತಿ ನೀಡಿದ್ದ

Voiceoftulunadu

ಸಾಂಪ್ರದಾಯಿಕ ನಾಟಿ ಮುಂದುವರಿಸುತ್ತಿರುವ ಯುವ ರೈತ ಹರೀಶ್ ಪೂಜಾರಿ ಕಿಶೋ‌ರ್ ಪೂಜಾರಿ : ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಎಲ್ಲೂರು ಶಶಿಧರ್ ಶೆಟ್ಟಿ, ಸದಸ್ಯರಿಂದ ಶ್ಲಾಘನೆ;

Voiceoftulunadu

Leave a Comment