September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ತಾಲೂಕು ಬ್ರಾಹ್ಮಣ ಮಹಾಸಭಾದಿಂದ ಸ್ವಾತಂತ್ರ್ಯ ದಿನಾಚರಣೆ, ಆಟಿ ಡೊಂಜಿ ವಿಪ್ರಕೂಟ, ವಿಪ್ರ ಯೋಧರಿಗೆ ಸನ್ಮಾನ:ಕನ್ನಡ ಪಾಡಿಯ ಶ್ರೀದೇವಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮ ;

ವರದಿ /ಚಿತ್ರ: ಈ ಮೀಡಿಯಾ

ಉಡುಪಿ: ಅಂಗವಾಗಿ ಉಡುಪಿ ತಾಲ್ಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ 80 ಸ್ವಾತಂತ್ರ್ಯ ದಿನಾಚರಣೆಯ ಹಾಗೂ ವಿಪ್ರರ “ಆಟಿಡೊಂಜಿ”ಸಂಭ್ರಮಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ “ಆಟಿ ಡೊಂಜಿ ವಿಪ್ರಕೂಟ” ಕಾರ್ಯಕ್ರಮವು ಕನ್ನಡಪಾಡಿಯ ಶ್ರೀದೇವಿ ಸಭಾಭವನ, ವಿಜೃಂಭಣೆಯಿಂದ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ವಿಪ್ರ ಯೋಧರನ್ನು ಗೌರವಿಸಿ ಸನ್ಮಾನಿಸಲಾಯಿತು. ದೇಶ ಸೇವೆ ಸಲ್ಲಿಸಿದ ಯೋಧರ ಸೇವೆಯನ್ನು ಸ್ಮರಿಸಿ, ಅವರ ದೇಶಭಕ್ತಿಗೆ ಕೃತಜ್ಞತೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಶ್ರೀಕಾಂತ್ ಉಪಾದ್ಯಾಯ, ವಿದ್ವಾನ್ ಡಾ. ಬಿ. ಗೋಪಾಲ ಆಚಾರ್ಯರು, ಕರ್ನಾಟಕ ಬ್ಯಾಂಕ್ ಲಿಮಿಟೆಡ್ನ ನಿರ್ದೇಶಕ ಬಾಲಕೃಷ್ಣ ಅಲ್ಲೇ ১력, ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ವಿ ಕೃಷ್ಣರಾಜ ಕುತ್ಪಾಡಿ, ಆಯುರ್ವೇದ ವೈದ್ಯರಾದ ಡಾ. ಟಿ. ಶ್ರೀಧರಬಾಯರಿ, ಶ್ರೀದೇವಿ ಸಭಾಭವನದ ಮಾಲಕರಾದ ರಮೇಶ್ ರಾವ್ ಬೀಡು ರವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರವಚನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.ಸಾವಿರಕ್ಕೂ ಭಾಗವಹಿಸಿ ವಿಪ್ರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು.

ವಿವಿಧ ವಿಪ್ರ ವಲಯಗಳ ತಂಡಗಳಿಂದ ಆಕರ್ಷಕ ನೃತ್ಯ, ಸಂಗೀತ ಕಾರ್ಯಕ್ರಮಗಳು ನಡೆದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದವು.

ಅತಿಥಿ ಗಣ್ಯರು ಆಟಿಯ ಮಹತ್ವ ಆಟಿ ಸಮಯದಲ್ಲಿ ಆಹಾರ ಆರೋಗ್ಯ ಪದ್ಧತಿಯ ಬಗ್ಗೆ ಮಾಹಿತಿ ಮತ್ತು ವಿಪ್ರ ಸಮಾಜದ ಒಗ್ಗಟ್ಟು, ಸಂಘಟನೆ ಹಾಗೂ ವಿಪ್ರರ ಸಂಸ್ಕಾರ ಪರಂಪರೆಯನ್ನು ಬೆಳೆಸುವ ಅಗತ್ಯವಿದೆ. ಸಮಾಜದ ಎಲ್ಲರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಇಂತಹ ಕಾರ್ಯಕ್ರಮಗಳು ಪರಸ್ಪರ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಕೆ. ದುರ್ಗಾ ಪ್ರಸಾದ್ ಭಾರ್ಗವ್ ರವರು ಸ್ವಾಗತಿಸಿದರು. ಶ್ರೀಮತಿ ಪೂರ್ಣಿಮಾ ಜನಾರ್ದನ ರವರು ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಶ್ರೀನಿವಾಸ ಬಲ್ಲಾಳರು, ಲಕ್ಷ್ಮೀನಾರಾಯಣ ಆಚಾರ್, ರಾಜೇಂದ್ರ ಎಂ ಎನ್, ಸುರೇಶ್ ರಾವ್, ಸುಮಿತ್ರಾ ಕೆರೆಮಠ, ಜ್ಯೋತಿಲಕ್ಷ್ಮಿ, ಪ್ರಿಯಂವದ, ಶುಭ ಪ್ರಸಾದ್ ರವರು ಸಹಕರಿಸಿದರು.

ಎಲ್ಲಾ 26 ವಿಪ್ರ ವಲಯಗಳ ಪದಾಧಿಕಾರಿಗಳು, ಯುವ ಬಳಗ, ಸ್ವಯಂಸೇವಕರು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಮಸ್ತ ವಿಪ್ರ ಬಾಂಧವರಿಗೆ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ವತಿಯಿಂದ ಹೃತ್ತೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು.

ವಿಪ್ರರ ಒಗ್ಗಟ್ಟು – ಸಮಾಜದ ಶಕ್ತಿ” ಎಂಬ ಆಶಯದೊಂದಿಗೆ ನಡೆದ ಈ ಕಾರ್ಯಕ್ರಮವು ಎಲ್ಲರ ಸಹಕಾರದಿಂದ ಅತ್ಯಂತ ಯಶಸ್ವಿಯಾಗಿ ಹಾಗೂ ಸ್ಮರಣೀಯವಾಗಿ ನೆರವೇರಿತು.

Related posts

ಕುಲಾಲ ಫ್ಯಾಮಿಲಿ ಯುಎಇ ವತಿಯಿಂದ ಯಶಸ್ವಿ ರಕ್ತದಾನ ಶಿಬಿರ;

Voiceoftulunadu

ಮಕ್ಕಳಿಗೆ ಪುಸ್ತಕ ಕೊಡಿ – ಸಾಹಿತ್ಯ ಪರಿಚಾರಕ ರತ್ನಾಕರ ಕುಳಾಯಿಮೂಲ್ಕಿ ತಾಲೂಕು ಕ.ಸಾ.ಪ ಕಿನ್ನಿಗೋಳಿಯಲ್ಲಿ ಆಯೋಜನೆಯ ಸಾಹಿತ್ಯ ಸಂವಾದ;

Voiceoftulunadu

ಅಸಂಖ್ಯಾತ ಜೀವಗಳನ್ನು ಸ್ಪರ್ಶಿಸಿದ ಪುಣ್ಯಾತ್ಮ ಕಾಂತಾಡಿಗುತ್ತು ಉಗ್ಗ ಶೆಟ್ಟಿ ಚಿರಶಾಂತಿಯಲಿ;

Voiceoftulunadu

Leave a Comment