27 C
ಮಂಗಳೂರು
July 6, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಪಂಚವರ್ಣ ಆಸಾಡಿ ಒಡ್ಸ್‌ : ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರದ ಜ್ಯೋತಿ ಸಾಲಿಗ್ರಾಮ ಆಯ್ಕೆಅಗಸ್ಟ್ ೯ ರಂದು ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮ;

ವರದಿ /ಚಿತ್ರ: ಈ ಮೀಡಿಯಾ

ಕೋಟ: ಕೋಟ ಪಂಚವರ್ಣ ಮಹಿಳಾ ಮಂಡಲಸಾದರಪಡಿಸುವ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಐದನೇ ವರ್ಷದ “ಅಸಾಡಿ ಒಡ್” ಸಾಧಕ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಮೂಲಕ ಜನಜನಿತರಾದ ನಿರೂಪಕಿ ಜ್ಯೋತಿ ಸಾಲಿಗ್ರಾಮ ಆಯ್ಕೆ ಗೊಂಡಿದ್ದಾರೆ.

ಅಗಸ್ಟ್ 9 ರ ಭಾನುವಾರ ಬೆಳಿಗ್ಗೆ 9 ರಿಂದ ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ನಡೆಯಲಿರುವ “ಕುಂದಾಪ್ರ ಕನ್ನಡ ದಿನ’ದ ಅಂಗವಾಗಿ ಹಮ್ಮಿಕೊಳ್ಳಲಿರುವ “ಅಸಾಡಿ ಒಡ್” ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಾಗುವುದು.ವಿಶೇಷ ಆಹ್ವಾನಿತರಾಗಿ ಕುಂದಗನ್ನಡ ರಾಯಬಾರಿ ಮನು ಹಂದಾಡಿ (ಮನೋಹರ್ ಶೆಟ್ಟಿ) ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗ್ರಾಮೀಣ ತಿನಿಸುಗಳು, ಪರಿಕರ ಪ್ರದರ್ಶನ, ಸ್ಪರ್ಧೆ ಸ್ನೇಹಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ.ಸ್ನೇಹಕೂಟ ಮಣೂರು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದೆ ಎಂದು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ.ಪ್ರತಿಜ್ಞಾವಿಧಿ ಬೋಧಿಸಿದ ಶಿಕ್ಷಕಿ ವಿನುತಾ ಎಸ್ ನಾಯಕ್.

Voiceoftulunadu

ತೆಂಕ ಎರ್ಮಾಳು ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಮಲ್ಲಿಕಾರವರಿಗೆ ಹಳೇ ವಿಧ್ಯಾರ್ಥಿ ಸಂಘದ ಸನ್ಮಾನ;

Voiceoftulunadu

ಮುಂಬೈನಲ್ಲಿ ಮಂಗಳೂರಿನ ಲೆಕ್ಸಾ ಲೈಟಿಂಗ್ ಸಂಸ್ಥೆಗೆ ದೇಶದ ಅತ್ಯುತ್ತಮ ಲೈಟಿಂಗ್ ತಂತ್ರಜ್ಞಾನ ನವೀನತಾ ಪ್ರಶಸ್ತಿ:

Voiceoftulunadu

Leave a Comment