28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪೊಳಲಿ :ಕ್ಷೇತ್ರದಲ್ಲಿ ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ಕ್ರಮ ಕೈಗೊಳ್ಳಲು ಮನವಿ ;

ಪೊಳಲಿ : ಮುಜರಾಯಿ ಇಲಾಖೆಗೆ ಒಳಪಟ್ಟ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ದೇವಸ್ಥಾನದ ವತಿಯಿಂದ ಕ್ರಮ ಕೈಗೊಳ್ಳಬೇಕು ಮತ್ತು ಶಾಸ್ತ್ರೀಯ ಹಿನ್ನೆಲೆ ಉಳ್ಳಂತಹ ಸಂಗೀತ ಮತ್ತು ನಾಟ್ಯ ಶಾಲೆಯನ್ನು (ವಿದ್ವತ್‌ ಮಟ್ಟದವರೇಗೆ) ವ್ಯವಸ್ಥಿತವಾಗಿ ಆರಂಭಿಸಬೇಕು ಎಂಬ ಬೇಡಿಕೆಯನ್ನು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಚಂದ್ರಮೋಹನ್‌ ಇವರಿಗೆ ಹಿಂದೂ ಧಾರ್ಮಿಕ ಶಿಕ್ಷಣ ಹಕ್ಕೊತ್ತಾಯ ಸಮಿತಿ ಕರಿಯಂಗಳ ಪೊಳಲಿ ಇವರು ಮನವಿ ನೀಡಿದರು.

ದೇವಳದ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು ಇವರಿಗೂ ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಹಕ್ಕೊತ್ತಾಯ ಸಮಿತಿ ಕರಿಯಂಗಳ ಪೊಳಲಿಯ ಸಂಚಾಲಕರಾದ ಚಂದ್ರಹಾಸ ಶೆಟ್ಟಿ ನಾರಳ , ವಂಕಟೇಶ್‌ ನಾವಡ ಪೊಳಲಿ, ಚಂದ್ರಹಾಸ ಪಲ್ಲಿಪಾಡಿ , ಚಂದ್ರಶೇಖರ್‌ ಭಂಡಾರಿ, ಸುಕೇಶ್‌ ಚೌಟ ಬಡಕಬೈಲು,ಭಾಸ್ಕರ ಮೊಗರು, ಕಿಶೋರ್‌ ಪಲ್ಲಿಪಾಡಿ, ರಾಧಕೃಷ್ಣ ತಂತ್ರೀ , ಯಶವಂತ ಪೊಳಲಿ, ಲಕ್ಷ್ಮೀಶ್‌ ಶೆಟ್ಟಿ,ಬಿ ಜನಾರ್ಧನ ಅಮ್ಮುಂಜೆ, ಕೇಶವ ಪೊಳಲಿ, ಯಶೋಧರ ಪೊಳಲಿ, ಕಾರ್ತಿಕ್‌ ಬಳ್ಳಾಲ್‌ , ಯುವರಾಜ್‌ ಪೂಂಜ, ಜಗದೀಶ್‌ ಆಚಾರ್ಯ,ಸಂದೀಪ್‌ ಕಮ್ಮಾಜೆ , ಚಂದ್ರಶೇಖರ ಶೆಟ್ಟಿ , ಚಂದ್ರಾವತಿ ಹಾಗೂ ಭಕ್ತಾಧಿಗಳು ಉಪಸ್ಥಿತರಿದರು..

Related posts

ಉಚ್ಚಿಲ ದೇಗುಲಕ್ಕೆ ಕಾಂಗ್ರಿ ವಿಶ್ವವಿದ್ಯಾಲಯ ಕುಲಾಧಿಪತಿ ಡಾ. ಸತ್ಯಪಾಲ್ ಸಿಂಗ್ ಕುಟುಂಬ ಸಹಿತ ಭೇಟಿ ಮಹಾಲಕ್ಷ್ಮೀ ದೇಗುಲದ ವತಿಯಿಂದ ಸತ್ಯಪಾಲ್ ಸಿಂಗ್ ಪತ್ನಿ ಡಾ. ಅಲ್ಕಾಸಿಂಗ್ ರವರಿಗೆ ಅಭಿನಂದನೆ

Voiceoftulunadu

ಮೂಲ್ಕಿಯ ಬಪ್ಪನಾಡಿನಲ್ಲಿ ನಡೆದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಇದರ ಸಂಯೋಜನೆಯಲ್ಲಿ ಅಪ್ಪೆ ಬೇರ್‌ದ ತುಳುನಾಡ್ ರಾಷ್ಟ್ರೀಯ ವಿಚಾರ ಸಂಕೀರಣ; ಜಾತಿ ಕಟ್ಟುವ ಮೊದಲು ಕುಲಕಸುಬು ಇತ್ತು – ಜ್ಯೋತಿ ಚೆಳ್ಯಾರ್:

voiceoftulunadu

ಪಡುಬಿದ್ರಿ :ಅಖಂಡ ಇಪ್ಪತ್ತನಾಲ್ಕು ಗಂಟೆಗಳ ‘ಏಕಾಹ ಭಜನೆ’ ಗೆ ಚಾಲನೆ ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಭಜನಾ ಕಾರ್ಯಕ್ರಮ;

Voiceoftulunadu

Leave a Comment