28.5 C
ಮಂಗಳೂರು
September 4, 2026
Uncategorizedಕ್ರೈಮ್ಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸ

ಪ್ರಜ್ವಲ್ ರೇವಣ್ಣ ಜೈಲಲ್ಲಿ ಫೋನ್ನಲ್ಲಿ ಮಾತಾಡೋ ವಿಡಿಯೋ ವೈರಲ್ಭದ್ರತಾ ಲೋಪದ ಬಗ್ಗೆ ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾ‌ರ್ ಅಸಮಧಾನ ;

ವರದಿ/ ಚಿತ್ರ : ಈ ಮೀಡಿಯಾ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ಜೈಲಿನ ಕಟ್ಟುನಿಟ್ಟಿನ ಭದ್ರತೆಯ ನಡುವೆಯೂ ಮೊಬೈಲ್ ಪೋನ್ ಹಿಡಿದು ಬಿಂದಾಸ್ ಆಗಿ ಮಾತನಾಡುತ್ತಿರುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಜೈಲು ಆಡಳಿತ ಮಂಡಳಿಯ ನಿದ್ದೆಗೆಡಿಸಿದೆ.ವೈರಲ್ ಆಗಿರುವ ವಿಡಿಯೋದಲ್ಲಿ ಪ್ರಜ್ವಲ್ ರೇವಣ್ಣ ಅವರು ಜೈಲಿನ ತಮ್ಮ ಬ್ಯಾರತ್ನಲ್ಲಿ ಮೊಬೈಲ್ ಹಿಡಿದು ರಾಜಾರೋಷವಾಗಿ ಮಾತನಾಡುತ್ತಿರುವುದು ಕಂಡುಬಂದಿದೆ.

ಯಾವುದೇ ಭಯವಿಲ್ಲದೆ, ಅವರು ಪೋನ್ನಲ್ಲಿ ಸಂಭಾಷಣೆ ನಡೆಸುತ್ತಿದ್ದಾರೆ. ವಿಶೇಷವೆಂದರೆ ಪ್ರಜ್ವಲ್ ಫೋನ್ನಲ್ಲಿ ಮಾತನಾಡುತ್ತಿರುವ ದೃಶ್ಯವನ್ನು ಮತ್ತೊಂದು ಮೊಬೈಲ್ ಮೂಲಕಗುಟ್ಟಾಗಿ ರೆಕಾರ್ಡ್ ಮಾಡಲಾಗಿದೆ. ಅಂದರೆ ಜೈಲಿನೊಳಗೆ ಒಂದಲ್ಲ, ಎರಡಲ್ಲ, ಹತ್ತಾರು ಮೊಬೈಲ್ಗಳು ರಾಜಾರೋಷವಾಗಿ ಓಡಾಡುತ್ತಿವೆಯೇ ಎಂಬ ಸಂಶಯ ಈಗ ದಟ್ಟವಾಗಿದೆ.

ಸಿಸಿಬಿ ದಾಳಿ ವೇಳೆ ಬಯಲಾದ ಸತ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಇತ್ತೀಚೆಗಷ್ಟೇ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮಿಂಚಿನ ದಾಳಿ ನಡೆಸಿದ್ದರು. ಈ ವೇಳೆ ಪ್ರಜ್ವಲ್ ರೇವಣ್ಣ ಅವರಿದ್ದ ಬ್ಯಾರಕ್ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿತ್ತು. ಇದು ರಾಜ್ಯಾದ್ಯಂತ ಭಾರಿ ಚರ್ಚೆಗೆ ಮತ್ತು ಟೀಕೆಗೆ ಕಾರಣವಾಗಿತ್ತು. ಈಗ ಆ ಮೊಬೈಲ್ ಅನ್ನು ಪ್ರಜ್ವಲ್ ಹೇಗೆ ಬಳಸುತ್ತಿದ್ದರು ಎಂಬುದಕ್ಕೆ ಈ ವಿಡಿಯೋ ಪ್ರಬಲ ಸಾಕ್ಷಿಯಂತಿದೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾರಾಗೃಹ ಇಲಾಖೆಡಿಜಿಪಿ ಅಲೋಕ್ ಕುಮಾರ್, ಭದ್ರತಾ ಲೋಪದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಪ್ರಜ್ವಲ್ ಬ್ಯಾರತ್ನಲ್ಲಿ ಪತ್ತೆಯಾದ ಮೊಬೈಲ್ನಲ್ಲಿ ಆಂಧ್ರ ಮೂಲದ ಏರ್ಟೆಲ್ ಸಿಮ್ ಬಳಸಲಾಗಿದೆ. ಜೈಲಿನ ಜಾಮರ್ ಇದ್ದರೂ ಏರ್ಟೆಲ್ 5G ನೆಟ್ವರ್ಕ್ ಹೇಗೆ ಸಿಗುತ್ತಿದೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ.

ಈಗಾಗಲೇ ಜೈಲಿನ ಓರ್ವ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಮತ್ತು ಎಸ್ಪಿಗೆ ನೋಟಿಸ್ ನೀಡಲಾಗಿದೆ.ಜೈಲಿನ ನಿಯಮಗಳನ್ನು ಗಾಳಿಗೆ ತೂರಿ, ಸಮವಸ್ತ್ರ ಕೂಡ ಧರಿಸದೆ ಪ್ರಜ್ವಲ್ ರೇವಣ್ಣ ನಡೆದುಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.

Related posts

ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ಸ್ಮರಿಸಿದ ಶಿಕ್ಷಣ ಸಂಸ್ಥೆ ;

Voiceoftulunadu

ಅಸಾಧಾರಣ ಪ್ರತಿಭೆ, ಪುಟ್ಟ ವಿಸ್ಮಯ ‘ಅನ್ವಿ. ಕೆ’: ಕಠಿಣ ಪರಿಶ್ರಮಕ್ಕೊಂದು ಭವ್ಯ ನಮನ ;

Voiceoftulunadu

ಮೂಡುಬೆಳ್ಳೆ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಯು. ಎಲ್. ಭಟ್;

Voiceoftulunadu

Leave a Comment