September 5, 2026
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ

ಬಂಟಕಲ್ ತಾಂತ್ರಿಕ ಕಾಲೇಜಿನ ಎಂಬಿಎ ವಿಭಾಗದ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಉದ್ಯೋಗ, ಕೌಶಲ್ಯ ವೃದ್ಧಿಗಾಗಿ ಉಪಾನ್ಯಾಸ ನೀಡಿದ ಪ್ರಾಧ್ಯಾಪಕಿ ಡಾ. ನೇಹಾ ಲಖೋಟಿಯ;

ವರದಿ/ ಚಿತ್ರ: ಈ ಮೀಡಿಯಾ

ಬಂಟಕಲ್ : ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಎಂ ಬಿ ಎ ವಿಭಾಗದ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯ ವೃದ್ಧಿಗಾಗಿ ಉಪನ್ಯಾಸ ಕಾಲೇಜಿನಲ್ಲಿ ಆಯೋಜಿಸಲಾಯಿತು.

ಕಾರ್ಯಾಗಾರವನ್ನು ಪ್ರಾಧ್ಯಾಪಕಿ ಡಾ. ನೇಹಾ ಲಖೋಟಿಯಾರವರು ನಡೆಸಿಕೊಟ್ಟರು.ವಿದ್ಯಾರ್ಥಿಗಳಲ್ಲಿ ಉದ್ಯೋಗ ಸಂದರ್ಶನವನ್ನು ಬಲಪಡಿಸುವುದು, ವೃತ್ತಿಪರ ಸಂವಹನ ಕೌಶಲ್ಯವನ್ನು ಅಭಿವೃದ್ಧಿ ಪಡಿಸುವುದು ಹಾಗೂಉದ್ಯೋಗ ಸಂದರ್ಶನದ ಸಂದರ್ಭದಲ್ಲಿ ಹೇಗೆ ಆತ್ಮ ವಿಶ್ವಾಸದಿಂದ ಸಂದರ್ಶನವನ್ನು ಎದುರಿಸುವುದು ಎಂಬ ಬಗ್ಗೆ ಸಮರ್ಪಕ ಮಾಹಿತಿ ನೀಡಿದರು.

ಅಲ್ಲದೆ, ಸಂದರ್ಶನಗಳ ವಿವಿಧ ವಿಧಗಳು, ಕಂಪನಿಯ ಬಗ್ಗೆ ಪೂರ್ವ ಮಾಹಿತಿ ಸಂಗ್ರಹಿಸುವುದು, ಬಯೋಡೇಟ ಸಿದ್ಧ ಪಡಿಸುವುದು, ಕೇಳಿದ ಪ್ರಶ್ನೆಗಳಿಗೆ ಪರಿಣಾಮಕಾರಿಯಾಗಿ ಹೇಗೆ ಉತ್ತರಿಸುವುದು ಎಂಬುದರ ಬಗ್ಗೆ ವಿವರಿಸಿದರು.

ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ನೇಮಕಾತಿದಾರರ ನಿರೀಕ್ಷೆಗಳನ್ನು ಅರ್ಥಮಾಡಿಕೊಳ್ಳಲು ಸಂವಹನ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಹಾಗೂ ವೃತ್ತಿಪರ ನಡವಳಿಕೆಯನ್ನು ರೂಢಿಸಿಕೊಳ್ಳಲು ಸಹಕಾರಿಯಾಗಿದೆ.

Related posts

ಶ್ರೀರಸ್ತು ಸೌಹಾರ್ದ ಸೊಸೈಟಿ ವತಿಯಿಂದ ಮಕ್ಕಳಿಗಾಗಿ ಸಹಕಾರ ಧ್ವಜ ಚಿತ್ರ ಬಿಡಿಸುವ ಸ್ಪರ್ಧೆ;

Voiceoftulunadu

ಉಡುಪಿ ಪರಿಸರಸ್ನೇಹಿ ವಸ್ತುಗಳ ಮಾರಾಟ ಶಾಪ್ “ವೀಕೆ ಸೊಲ್ಯೂಷನ್ಸ್” ಶುಭಾರಂಭಮಳಿಗೆ ಉದ್ಘಾಟಿಸಿದ ನ್ಯಾಯವಾದಿ ಎಂ. ಶಾಂತಾರಾಮ ಶೆಟ್ಟಿ;

Voiceoftulunadu

ಸಂಗೀತ ಸಾಮ್ರಾಟ್’ ಹೆನ್ರಿ ಡಿ’ಸೋಜಾ ನಿಧನ ;

Voiceoftulunadu

Leave a Comment