September 6, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬೆಳ್ಳಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನೂತನ ರಥಾಲಯಕ್ಕೆ ಶಿಲಾನ್ಯಾಸ : ನೂತನ ರಥಾಲಯಕ್ಕೆ ಶಿಲಾನ್ಯಾಸ ನೆರವೇರಿಸಿದ ದೇವಳದ ಅರ್ಚಕರಾದ ಶ್ರೀಧ‌ರ್ ಭಟ್ ;

ವರದಿ/ ಚಿತ್ರ: ಈ ಮೀಡಿಯಾ

ಉಡುಪಿ: ಬೆಳ್ಳಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ, ದೇವಳದ ಅರ್ಚಕರಾದ ಶ್ರೀಧರ್ ಭಟ್ ಅವರ ನೇತೃತ್ವದಲ್ಲಿ ನಡೆದ ನೂತನ ರಥಾಲಯ (ರಥದ ಕೊಟ್ಟಿಗೆ) ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಭಕ್ತಿಭಾವ ಹಾಗೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಯಶಸ್ವಿಯಾಗಿ ನೆರವೇರಿತು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಮೊಕೇಸರ ಐತು ಎಂ. ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಹಾಗೂ ರಥಾಲಯದ ದಾನಿ ಟಿ. ಶಂಬುಶೆಟ್ಟಿ, ಭಕ್ತವೃಂದದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಹಾಗೂ ಪ್ರಮುಖರಾದ ಅವಿರಾಜ್ ಶೆಟ್ಟಿ, ಬೆಳ್ಳಳೆ ಹರ್ಷ ಭಟ್, ಸುಂದರ ಶೆಟ್ಟಿ, ಶ್ರೀ ಅಜಿತ್ ಶೆಟ್ಟಿ, ಉಮೇಶ್ ಶೆಟ್ಟಿ, ಪ್ರಭಾಕರ ಅಂಚನ್, ಶ್ರೀಮತಿ ಅನುಷಾ ಆಚಾರ್ಯ, ಕೃಷ್ಣರಾಜ್ ಭಾದ್ಯ, ರಮೇಶ್ ಆಚಾರ್ಯ ಸೇರಿದಂತೆ ಗ್ರಾಮಸ್ಥರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಸುಲೋಚನಾ ಪಿ.ಕೆ ಯವರ “ದಧೂಟಿ ಬನ ಕಾದಂಬರಿ ಉಡುಪಿ ತುಳುಕೂಟದ ಪಣಿಯಾಡಿ ಪ್ರಶಸ್ತಿಗೆ ಆಯ್ಕೆತುಳು ಚಳವಳಿಯ ಪ್ರವರ್ತಕ ದಿ. ಎಸ್.ಯು. ಪಣಿಯಾಡಿ ಅವರ ಸ್ಮರಣಾರ್ಥ ನೀಡುವ ಪ್ರಶಸ್ತಿ;

Voiceoftulunadu

ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ: ಕಡತಗಳ ಪರಿಶೀಲನೆ ;

Voiceoftulunadu

ಕಿನ್ನಿಗೋಳಿ ಬಳಿಯ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ “ಆಟಿದ ನೆಂಪು – ೨೦೨೬” – ಕಾರ್ಯಕ್ರಮವನ್ನು ಉದ್ಘಾಟಿಸಿದ ತುಳು ವರ್ಲ್ಡ್ ಸಂಸ್ಥೆಯ ಜಿಲ್ಲಾಧ್ಯಕ್ಷೆ ಭಾನುಮತಿ ಶೆಟ್ಟಿ ;

Voiceoftulunadu

Leave a Comment