September 6, 2026
Uncategorizedಅಂತಾರಾಷ್ಟ್ರೀಯಕ್ರೈಮ್/ಅವಘಡರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಬೊಲಿವಿಯಾದ ಸೇನಾ ಶಿಬಿರದಲ್ಲಿ ಭಾರೀ ಸ್ಫೋಟ10 ಮಂದಿ ಸಾವು, 62ಕ್ಕೂ ಹೆಚ್ಚು ಜನರಿಗೆ ಗಾಯ — ಸ್ಫೋಟದ ತೀವ್ರತೆಗೆ ಹಲವು ಮನೆಗಳಿಗೆ ಹಾನಿ ;

ಕೃಪೆ: ಪಿಂಗಾರ

ವಿಯಾಚಾ (ಬೊಲಿವಿಯಾ), ಸೆ. 5: ದಕ್ಷಿಣ ಅಮೆರಿಕದ ಬೊಲಿವಿಯಾದ ವಿಯಾಚಾ ನಗರದ ಸೇನಾ ನೆಲೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, 62ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಧ್ಯಾಹ್ನ ಸುಮಾರು 2.30ರ ವೇಳೆಗೆ ಸೇನಾ ಬ್ಯಾರಕ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ.

ಪಟಾಕಿ ಸಂಗ್ರಹಣಾ ಗೋದಾಮಿನಲ್ಲಿ ಬೆಂಕಿ:ಪ್ರಾಥಮಿಕ ಮಾಹಿತಿಯ ಪ್ರಕಾರ, ರಕ್ಷಣಾ ಸಚಿವಾಲಯಕ್ಕೆ ಸೇರಿದ ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿ ಹಾಗೂ ಇತರ ಪೈರೋಟೆಕ್ನಿಕ್ ಸಾಮಗ್ರಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬಳಿಕ ಭಾರೀ ಸ್ಫೋಟ ಸಂಭವಿಸಿದೆ. ವಿಯಾಚಾ ನಗರವು ರಾಜಧಾನಿ ಲಾ ಪಾಸ್‌ನಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿದೆ.ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಪ್ರದೇಶವೇ ನಡುಗಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ.

ಬೆಂಕಿಗೆ ನಿಖರ ಕಾರಣವೇನು ಮತ್ತು ಸುರಕ್ಷತಾ ನಿಯಮಗಳನ್ನು ಮೀರಿ ಇಷ್ಟು ಪ್ರಮಾಣದ ಪಟಾಕಿ ಹಾಗೂ ಸ್ಫೋಟಕ ಸಾಮಗ್ರಿಗಳನ್ನು ಹೇಗೆ ಸಂಗ್ರಹಿಸಲಾಗಿತ್ತು ಎಂಬುದರ ಕುರಿತು ಸೇನೆ ಮತ್ತು ಪೊಲೀಸರು ಜಂಟಿಯಾಗಿ ತನಿಖೆ ಆರಂಭಿಸಿದ್ದಾರೆ.ನಾಗರಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಗಾಯಾಳುಗಳು:ಸ್ಥಳೀಯ ಆರೋಗ್ಯ ನಿರ್ದೇಶಕಿ ರೀಟಾ ನೆಬ್ರಾಸ್ಕಾ ಅವರ ಪ್ರಕಾರ, ಘಟನೆಯಲ್ಲಿ 10ರಿಂದ 15 ಮಂದಿ ಮೃತಪಟ್ಟಿರುವ ಶಂಕೆಯಿದೆ.

ಗಾಯಗೊಂಡ 62 ಮಂದಿಯಲ್ಲಿ 52 ಮಂದಿ ನಾಗರಿಕರಾಗಿದ್ದು, ಉಳಿದವರು ಸೇನಾ ಸಿಬ್ಬಂದಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಲಾ ಪಾಸ್‌ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.ಮತ್ತೊಂದು ಸ್ಫೋಟದ ಆತಂಕ:ಘಟನಾ ಸ್ಥಳದಲ್ಲಿ ಇನ್ನೂ ಹೆಚ್ಚಿನ ಉಷ್ಣಾಂಶ ಇರುವುದರಿಂದ ಮತ್ತೊಂದು ಸ್ಫೋಟ ಸಂಭವಿಸುವ ಸಾಧ್ಯತೆಯಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ.

ವರದಿ ಮುನ್ನೆಚ್ಚರಿಕಾ ಕ್ರಮವಾಗಿ ಸುತ್ತಮುತ್ತಲಿನ ನಿವಾಸಿಗಳು ಘಟನಾ ಸ್ಥಳದಿಂದ ಕನಿಷ್ಠ 150 ಮೀಟರ್ ದೂರದಲ್ಲಿರಲು ಸೂಚಿಸಲಾಗಿದೆ.ಘಟನೆಯ ಕುರಿತು ತನಿಖೆ ಮುಂದುವರಿದಿದ್ದು, ಸ್ಫೋಟದ ನಿಖರ ಕಾರಣ ಹಾಗೂ ಸುರಕ್ಷತಾ ಲೋಪಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಮಳೆ ಅನಾಹುತ: ಕಂಕನಾಡಿ ನಾಗುರಿಯಲ್ಲಿ ಮನೆ ಕುಸಿತ, ಮೂವರ ದುರ್ಮರಣ, ಮೂವರ ರಕ್ಷಣೆ ಈ ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಸಹಾಯದ ಭರವಸೆ ನೀಡಿದ ಆರೋಗ್ಯ ಸಚಿವ ಯು.ಟಿ. ಖಾದರ್;

Voiceoftulunadu

ಕಿನಾರಾ ಗ್ಲೋಬಲ್ ಶಾಲೆಯಲ್ಲಿ ಶಾಲಾ ಸಂಸತ್ತು ಪದ ಪ್ರದಾನ, ಮಾದಕ ವಸ್ತು ಜಾಗೃತಿ ಕಾರ್ಯಕ್ರಮ:ಕಾರ್ಯಕ್ರಮ ಉದ್ಘಾಟಿಸಿದ ಕಾಪು ಪೊಲೀಸ್ ವೃತ್ತ ನೀರೀಕ್ಷಕ ಅಜ್ಜತ್ ಅಲಿ;

Voiceoftulunadu

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ರಾಜ್ಯಮಟ್ಟದಲ್ಲಿ ಕಾಪು ಯೋಜನಾ ಕಚೇರಿಗೆ ದ್ವಿತೀಯ ಸ್ಥಾನ ಅಭಿನಂದನಾ ಪತ್ರ ಸ್ವೀಕರಿಸಿದ ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ;

Voiceoftulunadu

Leave a Comment