July 6, 2026
Uncategorizedಜಿಲ್ಲಾ ಸುದ್ದಿರಾಜಕೀಯಸ್ಥಳೀಯ/ಪ್ರಾದೇಶಿಕ ಸುದ್ದಿ

ಮುದರಂಗಡಿ ಎಸ್ ಐ ಆರ್ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ;

ವರದಿ /ಚಿತ್ರ: ಇ ಮೀಡಿಯಾ

ಮುದರಂಗಡಿ:ಕೆಥೊಲಿಕ್ ಸಭಾ, ಕೆಥೊಲಿಕ್ ಸ್ತ್ರೀ ಸಂಘಟನೆ ಮತ್ತು ಜನನಿ ಮಹಾಸಂಘದ ವತಿಯಿಂದ ಮುದರಂಗಡಿ ಸಂತ ಫ್ರಾನ್ಸಿಸ್ ಕ್ಷೇವಿಯರ್ ಚರ್ಚಿನ ಸಭಾಭವನದಲ್ಲಿ ಎಸ್ ಐ ಆರ್ ಬಗ್ಗೆ ಮಾಹಿತಿ ಕಾರ್ಯಾಗಾರ ಹಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಉದ್ಘಾಟಿಸಿದರು.

ಅವರು ಮಾತನಾಡಿ,ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದರು.

ಸಾಮಾಜಿಕ ಕಾರ್ಯಕರ್ತ ಚಿಂತಕ ಪ್ರೊ. ಕೆ ಫಣಿರಾಜ್ ರವರು ಎಸ್ ಐ ಆರ್ ಎಂದರೇನು? ಯಾವ ಕಾರಣಕ್ಕಾಗಿ ಈ ಪ್ರಕ್ರಿಯೆ ನಡೆಯುತ್ತಿದೆ? ಮತ ದಾರರ ಪಟ್ಟಿಯಲ್ಲಿ ಕೈಬಿಡಲಾದ ಹೆಸರುಗಳ ಸೇರ್ಪಡೆ ಹೇಗೆ? ಎಂಬ ಮಾಹಿತಿ ನೀಡಿ, ಇದಕ್ಕೆ ಬೇಕಾದ ದಾಖಲೆಗಳ ಬಗ್ಗೆ ಸವಿವರವಾದ ಮಾಹಿತಿ ನೀಡಿ ದರು.

ಸಂದರ್ಭ ಸ್ಥಳೀಯ ಚರ್ಚಿನ ಧರ್ಮಗುರು ರೆ. ಫಾ. ವಿನ್ಸೆಂಟ್ ಕುವೆಲ್ಲೊ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷೆ ಲೂಸಿ ಡಿಸೋಜಾ, ಕಾರ್ಯ ದರ್ಶಿ ವಿಜಯಾ ಮತಾಯಸ್, ಕೆಥೊಲಿಕ್ ಸಭಾದ ಅಧ್ಯಕ್ಷ ಸುನೀಲ್ ಡಿಸೋಜಾ, ಜನನಿ ಮಹಾಸಂಘದ ಅಧ್ಯಕ್ಷೆ ಪ್ರಮೋದ ಮತಾಯಸ್, ಕೆಥೊಲಿಕ್ ಸಭಾ ಶಿರ್ವಾ ವಲಯದ ಅಧ್ಯಕ್ಷ ಜೆರಾಲ್ಡ್ ರೋಡ್ರಿಗಸ್ ಉಪಸ್ಥಿತರಿದ್ದರು.

Related posts

ಮೂಲ್ಕಿ ರೈಲ್ವೆ ನಿಲ್ದಾಣದಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಉಮಾನಾಥ ಕೋಟ್ಯಾನ್ ಅವರಿಂದ ನಿಲ್ದಾಣದ ಅಭಿವೃದ್ಧಿ ಕಾಮಗಾರಿಯ ವೀಕ್ಷಣೆ : ಕೊಂಕಣ ರೈಲ್ವೆ ನಷ್ಟದಲ್ಲಿದೆ ವಿಲೀನಗೊಳಿಸುವುದೇ ಸೂಕ್ತ ಪರಿಹಾರ : ಬ್ರಿಜೇಶ್ ಚೌಟ;

Voiceoftulunadu

ವಾಟ್ಸಾಪ್‌ನಿಂದ ಬಿಗ್ ಅಪ್‌ಡೇಟ್: ಇನ್ಮುಂದೆ ಚಾಟ್ ಮಾಡಲು ನಿಮ್ಮ ಫೋನ್ ನಂಬರ್ ನೀಡಬೇಕಾಗಿಲ್ಲ!

Voiceoftulunadu

ರಾಜ್ಯದ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ:ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆ ಸಚಿವ ಯು.ಟಿ. ಖಾದರ್ ನೇಮಕ;

Voiceoftulunadu

Leave a Comment